ಪುತ್ತೂರು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಎಪಿಎಂಸಿ ಶಾಖೆ 6ನೇ ವರ್ಷಕ್ಕೆ ಪಾದಾರ್ಪಣೆ | ದಾಖಲೆ ವ್ಯವಹಾರ, ಗುರಿ ಮೀರಿದ ಸಾಧನೆ : ಚಿದಾನಂದ ಬೈಲಾಡಿ

ಪುತ್ತೂರು: ಎಲ್ಲರ ಸಹಕಾರದಿಂದ ಸಂಘ ನಿರಂತರವಾಗಿ ಬೆಳವಣಿಗೆ ಆಗುತ್ತಿದೆ. 2023-24 ರಲ್ಲಿ ಸಂಘದ ಒಟ್ಟು ಈ ವರ್ಷ 724 ಕೋಟಿಯಷ್ಟು ದಾಖಲೆಯ ವ್ಯವಹಾರ ಆಗಿದೆ. ಒಟ್ಟು ವ್ಯವಹಾರದಲ್ಲಿ 202 ಕೋಟಿ ರೂಪಾಯಿ ಹೆಚ್ಚು ವ್ಯವಹಾರ ನಡೆಸುವ ಮೂಲಕ ಖಾಸಗಿ ಸಹಕಾರ ಸಂಘದಲ್ಲೂ ಸ್ಪರ್ಧಾತ್ಮಕ ವ್ಯವಹಾರ ನಡೆಯುತ್ತಿದೆ. ಇದರಲ್ಲಿ ಸಿಬ್ಬಂದಿಗಳ ಕಾರ್ಯಕ್ಷಮತೆ ಇದೆ ಎಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಪುತ್ತೂರು ಎಪಿಎಂಸಿ ಸಹಿತ ಪುತ್ತೂರು, ಕಾಣಿಯೂರು, ಬೆಳ್ಳಾರೆ, ಮಾಣಯಿ ಆರ್ಚ್‍ […]

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಎಪಿಎಂಸಿ ಶಾಖೆ 6ನೇ ವರ್ಷಕ್ಕೆ ಪಾದಾರ್ಪಣೆ | ದಾಖಲೆ ವ್ಯವಹಾರ, ಗುರಿ ಮೀರಿದ ಸಾಧನೆ : ಚಿದಾನಂದ ಬೈಲಾಡಿ Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ ಪಲ್ಟಿ | ಹಲವರಿಗೆ ಗಾಯ

ಗುಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡು ಹಲವರು ಗಾಯಗೊಂಡ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವರು ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ,

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ ಪಲ್ಟಿ | ಹಲವರಿಗೆ ಗಾಯ Read More »

ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.  2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ ‘ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ’ ಇದರಡಿಯಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಯಾವುದಕ್ಕೆ ಧನ ಸಹಾಯ? ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿಸಿದ್ದರ ಸಲುವಾಗಿ ಸಹಾಯ ಧನ ಪಡೆಯಬಹುದಾಗಿದೆ. ಜೇನು ಕೃಷಿಕರು ಏನು ಮಾಡಬೇಕು? ಮೊದಲಿಗೆ ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಜೇನು

ಜೇನು ಕೃಷಿಗೆ ಅರ್ಜಿ ಆಹ್ವಾನ Read More »

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ

ಪುತ್ತೂರು: ಅರುಣ್ ಪುತ್ತಿಲ ಗಡಿಪಾರು ನೋಟಿಸ್ ಸಂಬಂಧಪಟ್ಟಂತೆ ಪುತ್ತೂರು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಅರುಣ್ ಪುತ್ತಿಲ ಪರ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಭಾಗಿಯಾಗಿ ವಾದಿಸಿದ್ದರು. ಅರುಣ್ ಪುತ್ತಿಲ ಗಡಿಪಾರಿಗೆ ಪೊಲೀಸರು ಸೂಕ್ತ ಹಾಗೂ ಸಮರ್ಪಕ ದಾಖಲೆ ಸಲ್ಲಿಸದ ಕಾರಣ ಜೂ.27ಕ್ಕೆ ಮುಂದೂಡಿ ಸಮರ್ಪಕ ದಾಖಲೆ ಸಲ್ಲಿಸುವಂತೆ ಆದೇಶಿಸಿದರು.

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ Read More »

ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು

ಪುತ್ತೂರು: ನವತೇಜಸ್ ಅರ್ಪಿಸುವ ಘಮಘಮಿಸುವ ಮೂರು ದಿನಗಳ ’ಹಲಸು ಹಣ್ಣು ಮೇಳ’ಕ್ಕೆ ಶುಕ್ರವಾರ ಬೆಳಗ್ಗೆ ನಗರದ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಈ ಹಣ್ಣಿನ ಮೇಳಕ್ಕೆ ಗ್ರಾಹಕ ವರ್ಗ ಸಜ್ಜಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿದ್ದರು. ಸುಮಾರು 70 ಮಳಿಗೆಗಳನ್ನು ಮೇಳದಲ್ಲಿ ಜೋಡಿಸಲಾಗಿದ್ದು, ವಿವಿಧ ರೀತಿಯ ಹಣ್ಣುಗಳ ಜತೆಗೆ ಹಲಸಿನ ಹಣ್ಣಿನಿಂದ ತಯಾರಿಸಿ ವಿವಿಧ ಖಾದ್ಯಗಳನ್ನು ಗ್ರಾಹಕರು ಸೇವಿಸಿ ಮನತಣಿಸಿಕೊಂಡರು. ಮೇಳದಲ್ಲಿ ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್,

ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು Read More »

ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು.  ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ವಹಿಸಿದ್ದರು. ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ, ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ಕೇಂದ್ರ ಸಮಿತಿಯ ಚಟುವಟಿಕೆಗಳ ಮಾಹಿತಿ ನೀಡಿದರು.  ಪುತ್ತೂರು ಘಟಕದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡುವುದು ಮತ್ತು ಘಟಕದ

ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ Read More »

ವಿವೇಕಾನಂದ ಕಾಲೇಜಿನ ನಿವೃತ್ತ ಉದ್ಯೋಗಿ ಕುಞಣ್ಣ ಗೌಡ ಸ್ವರ್ಗಸ್ಥ

ಪುತ್ತೂರು: ಪುತ್ತೂರಿನ ನೆಹರು ನಗರದ ನಿವಾಸಿಯಾಗಿದ್ದ ಕುಞಣ್ಣ ಗೌಡರು ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ಥರಾದರು. ಕಠಿಣ ಪರಿಶ್ರಮಿ73 ವರ್ಷ ವಯಸ್ಸಿನ ಕುಞಣ್ಣರು ಜೀವನದ ಆರಂಭದ ದಿನಗಳಲ್ಲಿ ವಿಟ್ಲದ ಆಸ್ಪತ್ರೆಯೊಂದರಲ್ಲಿ ಕಾಂಪೌಂಡರ್ ಆಗಿ, ಸಿ.ಪಿ.ಸಿ.ಆರ್.ಐ.ನಲ್ಲಿ ದಿನಗೂಲಿ ನೌಕರರಾಗಿ ದುಡಿದು ಬದುಕು ಕಟ್ಟಿಕೊಂಡಿದ್ದರು. ಬಳಿಕ ವಿವೇಕಾನಂದ ಕಾಲೇಜಿನಲ್ಲಿ ಗ್ರಂಥಾಲಯ ಸಹಾಯಕರಾಗಿ ಸೇವೆಗೆ ಸೇರಿದ್ದರು. ನಿಷ್ಠೆಗೆ ಪರ್ಯಾಯ ಪದವಾಗಿದ್ದ ಕುಞಣ್ಣರು ಬಳಿಕ ಕಚೇರಿ ಗುಮಾಸ್ತರಾಗಿ ಕೊನೆಯಲ್ಲಿ ಕಛೇರಿ ಅಧೀಕ್ಷಕರಾಗಿ ಸೇವಾ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರವೂ ಸೇವೆಸೇವಾ ನಿವೃತ್ತಿಯ ಬಳಿಕ ವಿವೇಕಾನಂದ

ವಿವೇಕಾನಂದ ಕಾಲೇಜಿನ ನಿವೃತ್ತ ಉದ್ಯೋಗಿ ಕುಞಣ್ಣ ಗೌಡ ಸ್ವರ್ಗಸ್ಥ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ

ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ವಿಜ್ಞಾನ ವಿಭಾಗದ ಶಿಕ್ಷಕಿ ಸಿಂಧು .ವಿ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು ತಿಳಿಸಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವುದಕ್ಕೆ ನಮ್ಮ ಮನೆ ಹಾಗೂ ಶಾಲೆಯಿಂದ ಆರಂಭಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.   ಭಾರತೀಯ ಗಡಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ Read More »

ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ  ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ

ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ  ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ,  ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು  ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಅವರು ಬುಧವಾರ ಸಂಜೆ ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ  ಪೋಲೀಸರು  ರಾತ್ರಿ  ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ

ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ  ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ Read More »

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ

ಪುತ್ತೂರು: ಯಾರು ತನ್ನ ಪರಂಪರೆಯನ್ನು ಸಂಸ್ಕೃತಿಯನ್ನು ಮರೆಯುತ್ತಾನೋ ಅವನು ಔನ್ನತ್ಯವನ್ನು ಹೊಂದುವುದು ಅಸಾಧ್ಯ. ಭಾರತೀಯ ಜೀವನ ಪದ್ಧತಿ ಭಾರತೀಯ ತತ್ವಶಾಸ್ತ್ರದ ಮೇಲೆ ನಿಂತಿದೆ ಮಾತ್ರವಲ್ಲದೆ ಯೋಗವು ಆಧಾರ ಸ್ತಂಭದಂತೆ ತನ್ನ ಸ್ಥಾನವನ್ನು ಹೊಂದಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆರ್ಟ್ ಆಫ್ ಲಿವಿಂಗ್‌ ನ

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ Read More »

error: Content is protected !!
Scroll to Top