ಪುತ್ತೂರು

ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ

ಪುತ್ತೂರು : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ದೈವಗಳ ನೇಮೋತ್ಸವ ಫೆ.13 ಸೋಮವಾರ ಹಾಗೂ 14 ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಫೆ.13 ಸೋಮವಾರ ಬೆಳಿಗ್ಗೆ 8.45 ಕ್ಕೆ ಗೊನೆಮುಹೂರ್ತ, 9.30 ರಿಂದ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ, ಬಜತ್ತೂರು ಗುತ್ತಿನ ನಾಗತಂಬಿಲ, 10 ಕ್ಕೆ ತೋರಣ ಮುಹೂರ್ತ, ರಾತ್ರಿ 7.30 ಕ್ಕೆ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ […]

ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ Read More »

ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರಿಂದ ಹನುಮಗಿರಿ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಣೆ | ಅಮರಗಿರಿ ಉದ್ಘಾಟನೆ | ಭೇಟಿಯ ಸವಿನೆನಪಿಗೆ ಸಂವಿಧಾನ ಮೂಲಪ್ರತಿಯಲ್ಲಿ ಹಸ್ತಾಕ್ಷರ

ಈಶ್ವರಮಂಗಲ : ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿ ಅಮಿತ್ ಶಾ ಅವರು ಕ್ಷೇತ್ರದ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಿಸಿದರು. ಕೇರಳದ ಕಣ್ಣೂರಿನಿಂದ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಗಜಾನನ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಬಳಿಕ ಪಂಚಮುಖಿ ಆಂಜನೇಯನ ದರ್ಶನ ಪಡೆದು ನವರತ್ನ ಸಹಿತ ರಜತ ಗಧೆ ಅರ್ಪಿಸಿದರು. ಪಂಚಮುಖಿ ಆಂಜನೇಯ ಸನ್ನಿಧಿಯಲ್ಲಿ ವಿಶೇಷವಾಗಿ ನೀಡುವ ಪಂಚಮುಖಿ ಆಂಜನೇಯ ರಕ್ಷೆಯನ್ನು ಕ್ಷೇತ್ರದ ಅರ್ಚಕ ರಾಜೇಶ್ ಗಾಂವ್ಕರ್  ಅಮಿತ್ ಶಾ ಅವರ

ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರಿಂದ ಹನುಮಗಿರಿ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಣೆ | ಅಮರಗಿರಿ ಉದ್ಘಾಟನೆ | ಭೇಟಿಯ ಸವಿನೆನಪಿಗೆ ಸಂವಿಧಾನ ಮೂಲಪ್ರತಿಯಲ್ಲಿ ಹಸ್ತಾಕ್ಷರ Read More »

ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರಶಾಂತ್ ಲಾವಣ್ಯ ಅವರ ಮಗಳಾದ ಮಾನ್ಯ ಎಂಬ 5 ವರ್ಷದ  ಮಗು ಅಂಗವೈಕಲ್ಯದಿಂದ ಬಳಲುತ್ತಿದ್ದು, ಕುಟುಂಬವು ಚಿಕಿತ್ಸೆಗಾಗಿ ಪರದಾಡುತ್ತಿದೆ. ಇದನ್ನು ಮನಗಂಡು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ವತಿಯಿಂದ ನೊಂದವರ ಬಾಳಿಗೆ ನೆರವಿನ ಹಸ್ತವಾಗಿ 10111 ರೂಪಾಯಿ ಚೆಕ್ಕ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಗೌರವಾಧ್ಯಕ್ಷ ಉದಯ ಅರ್ಜುನಗೋಳಿ, ಅಧ್ಯಕ್ಷ ಡಿ. ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು ಉಪಸ್ಥಿತರಿದ್ದರು.

ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ Read More »

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಹುಲಿ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಫೆ.15 ಬುಧವಾರ ಸಂಜೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ಸಂಜೆ 5 ರಿಂದ ಭಜನಾ ಕಾರ್ಯಕ್ರಮ, 6 ಕ್ಕೆ ಭಂಡಾರ ಹಿಡಿಯುವುದು, ರಾತ್ರಿ 8 ರಿಂದ ಕಾಡೆತ್ತಿ ಪಂಜುರ್ಲಿ ದೈವದ ನೇಮೋತ್ಸವ, 8.30 ರಿಂದ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 10

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ Read More »

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಪುತ್ತೂರು: ಅಡಕೆಗೆ ಕೆಲವೊಂದು ಸವಾಲುಗಳಿದ್ದು, ಹಳದಿ ರೋಗ, ಎಲೆಚುಕ್ಕಿ ರೋಗ ಬಂದಿರುವುದು ಸಮಸ್ಯೆಯಾಗಿದೆ ಕಾಡಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿಯ ಬಜೆಟಿನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಭರವಸೆ ನೀಡಿದರು. ತೆಂಕಿಲ ವಿವೇಕಾನಂದ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ 6 ಲಕ್ಷ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಯುತ್ತಿದ್ದು, ಸಮಸ್ಯೆಗಳು ಅಷ್ಟೇ ಇದೆ. ಇದನ್ನು ಹೋಗಲಾಡಿಸಲು ಸರಕಾರ

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ Read More »

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಅವರ ಭಾಗವಹಿಸುವಿಕೆಯೊಂದಿಗೆ ಇಲ್ಲಿಯ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತಾ ಶಾ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ರಾಜ್ಯವನ್ನು ಎಟಿಎಂ ಆಗಿ ಮಾಡಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಬೇಕಾ ಎಂದು ನೆರೆದಿದ್ದವರನ್ನು ಪ್ರಶ್ನಿಸಿದ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ Read More »

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ Read More »

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು

ಮುತ್ತಿನ ನಗರಿಯಲ್ಲಿ ಚಾಣಕ್ಯ ಶಾ Read More »

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ

ಪುತ್ತೂರು: ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾದ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಮಂಗಲದ ಅಮರಗಿರಿಯಿಂದ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಹನುಮಗಿರಿಯ ಧರ್ಮಶ್ರೀ ಪ್ರತಿಷ್ಠಾನದಲ್ಲಿ ಅಮರಗಿರಿಯಲ್ಲಿ ಕಾರ್ಯಕ್ರಮ ಮುಗಿಸಿ, ಪುತ್ತೂರಿನ ತೆಂಕಿಲಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕಾಫ್ಟರಿನಲ್ಲಿ ಇದೀಗ ಹೊರಟಿರುವ ಅಮಿತ್ ಶಾ ಅವರು ಕೆಲವೇ ಕ್ಷಣದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡಿನಲ್ಲಿ ಇಳಿಯಲಿದ್ದಾರೆ. ಹೆಲಿಪ್ಯಾಡಿನಿಂದ ಝೀರೋ ಟ್ರಾಫಿಕಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ Read More »

error: Content is protected !!
Scroll to Top