ಪುತ್ತೂರು

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ

ಪುತ್ತೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚೆಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ಜರಿದು ಬಿದ್ದ ಪರಿಣಾಮ ಹೂವಿನ ವ್ಯಾಪಾರಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಳೆದ ಕೆಲವು ಸಮಯದಿಂದ ವಿನಾಯಕ ಪ್ಲವರ್ ಸ್ಟಾಲ್ ನ ಮಾಲಕತ್ವದ ಹೂವಿನ ಅಂಗಡಿ ಮೇಲೆ ಗೋಡೆ ಜರಿದು ಬಿದ್ದಿದೆ. ಈ ಸಂದರ್ಭ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದರು.

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ Read More »

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಕಡಬ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗಿಂತಲೂ ಹೆಚ್ಚಿನ ಸಾಧನೆ ಮಾಡಿದಾಗ ನಿಜವಾದ ಗುರುಕಾಣಿಕೆ ನೀಡಿದಂತಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಬೇಕು. ಇಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಬೆವರಿಳಿಸಿ ದುಡಿದು ಗಳಿಸಿದ ಸ್ವಂತ ಸಂಪಾದನೆಯ ಒಂದು ಭಾಗವನ್ನು ಕಾಲೇಜಿನ ಬಿಸಿ ಊಟದ ವ್ಯವಸ್ಥೆಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ದುಡಿದು ಗಳಿಸಿ ಮುಂದಿನ

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ Read More »

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಎಂದು  ಮೈಸೂರಿನ ಎಸ್‌ ಡಿಎಂ ರಿಸರ್ಚ್ ಸೆಂಟರ್‌ನ ಪ್ರೋ. ಬಿ ವೆಂಕಟರಾಜ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನಾಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಆಯೋಜಿಸಿದ್ದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪ್ರಭಾವಶಾಲಿ ಸಂಶೋಧನಾ ಬರಹ

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ ಸುತ್ತು ಪಲ್ಲಕಿ ಉತ್ಸವ ಮತ್ತು ಸೇವೆ, ವಸಂತ ಪೂಜೆ ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ದೇವರು ಗರ್ಭಗುಡಿ ಪ್ರವೇಶಿಸಿದ ಬಳಿಕ ಪತ್ತನಾಜೆ ಉತ್ಸವದ ಪ್ರಸಾದ ರೂಪವಾಗಿ ಫಲವಸ್ತುಗಳನ್ನು ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳಿಗೆ ವಿತರಣೆ ಮಾಡಲಾಗುವುದು ಎಂದು ದೇವಸ್ಥಾನದ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ Read More »

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು

ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟಿ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿದೆ. ಚಾಲಕನು ಕಾರನ್ನು ಮುಖ್ಯ ರಸ್ತೆಯಿಂದ ಪಕ್ಕಕ್ಕೆ ಇಳಿಸುವ ಪ್ರಯತ್ನದಲ್ಲಿದ್ದಾಗ, ರಸ್ತೆಯ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಮಾರ್ಗವಾಗಿ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು, ಗಡಿಪಿಲ ಕರೆಮನೆ ಕಟ್ಟೆ ಬಳಿ ಬಂದಾಗ ಚಾಲಕನು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡಲು ಕಾರನ್ನು ರಸ್ತೆಯ ಅಂಚಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ,

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು Read More »

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ

ಪುತ್ತೂರು: ಮಹಿಳೆಯೊಬ್ಬರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಕೆಲ ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮಾಡುತ್ತಿರುವ

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ Read More »

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸ. ಪ್ರ.ದ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಮೇ 26 ಸೋಮವಾರ ನಡೆಯಲಿದೆ. ಪೂರ್ವಾಹ್ನ ಗಂಟೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಎ. ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ Read More »

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು, 

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ

ಪುತ್ತೂರು: ಕಳೆದ 35 ವರ್ಷಗಳಿಂದ ಪೈಂಟ್ ಗಳ ಸೇವೆಯಲ್ಲಿ ಮನೆ ಮಾತಾಗಿರುವ ಏಳ್ಮುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ಟೋ ರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ಎಂಬ ವಿನೂತನ ವ್ಯವಸ್ಥೆ ಗುರುವಾರ ಪ್ರಾರಂಭಗೊಂಡಿತು. ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬದಲಾದ ಕಾಲ ಘಟ್ಟದಲ್ಲಿ ಜನರ ಬಳಿಗೆ ಸೇವೆಯನ್ನು ಜನರ ಬಳಿಗೆ ವಿಸ್ತರಿಸಬೇಕಾಗಿರುವುದೇ ಇಂದಿನ ಮಾರುಕಟ್ಟೆಯ ತಂತ್ರವಾಗಿದೆ. ಯಾವುದೇ ಸಾಮಾಗ್ರಿಗಳು ಮನೆ ಬಾಗಿಲಿಗೆ

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ Read More »

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್‍ (33) ಮೃತಪಟ್ಟವರು. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಪತ್ನಿಯ ಸೀಮಂತದಂದೇ ಕುಸಿದು ಬಿದ್ದು ಪತಿ ಮೃತ್ಯು Read More »

error: Content is protected !!
Scroll to Top