ಪುತ್ತೂರು

ಶಾಂತಿಗೋಡು, ನರಿಮೊಗರು ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ | ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು ತಾಲೂಕು ಗ್ರಾಮಾಂತರ ಮಂಡಲ ವ್ಯಾಪ್ತಿಯ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರು ಮತ್ತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  ಸರಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ  ಪುತ್ತೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು  ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರುಮಾರು, ಶಾಂತಿಗೋಡು ಶಕ್ತಿ ಕೇಂದ್ರ ಅಧ್ಯಕ್ಷ ವಿಶ್ವನಾಥ್ […]

ಶಾಂತಿಗೋಡು, ನರಿಮೊಗರು ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ | ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ Read More »

ಪುತ್ತೂರು ತಾಲೂಕಿನ ಆರು ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಹಲವಾರು ಮನೆಗಳಿಗೆ ಹಾನಿ | ಮನೆಗಳಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ | ಮಾಧ್ಯಮದ ಮುಂದೆ ಕೇವಲ ಫೋಸ್‍ ನೀಡುತ್ತಿರುವ ಕ್ಷೇತ್ರದ ಶಾಸಕರು : ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಅತ್ರಮಜಲು ಆರೋಪ

ಪುತ್ತೂರು: ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ ಗ್ರಾಮದಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನಷ್ಟಕ್ಕೊಳಗಾದ ಮನೆಗಳಿಗೆ ಪರಿಹಾರ ಕೊಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ನಿಷ್ಟ್ರೀಯವಾಗಿದ್ದು, ಕ್ಷೇತ್ರದ ಶಾಸಕರು ಬೆಳ್ಳಿಪ್ಪಾಡಿಗೆ ಬಂದು ಮಾಧ್ಯಮದ ಮುಂದೆ ಪೋಸ್‍ ಕೊಡುವ ಕೆಲಸ ಮಾಡಿದ್ದಾರೆ ಹೊರತು ಪರಿಹಾರ ಕೊಡಿಸುವ ಕೆಲಸ ಈ ವರೆಗೆ ಮಾಡಿಲ್ಲ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ

ಪುತ್ತೂರು ತಾಲೂಕಿನ ಆರು ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಹಲವಾರು ಮನೆಗಳಿಗೆ ಹಾನಿ | ಮನೆಗಳಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ | ಮಾಧ್ಯಮದ ಮುಂದೆ ಕೇವಲ ಫೋಸ್‍ ನೀಡುತ್ತಿರುವ ಕ್ಷೇತ್ರದ ಶಾಸಕರು : ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಅತ್ರಮಜಲು ಆರೋಪ Read More »

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ. ಅಲ್ಲದೆ 11835 ನೇ ರ‍್ಯಾಂಕ್  (CRL) ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್ Read More »

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ವಿಟ್ಲ: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ  ದಾಖಲಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ರಿಯಾಝ್‌, ಸಮದ್‌,  ಕುಂಞಿಮೋನು, ರಹಿಮಾನ್‌, ಸುಲೈಮಾನ್‌ ಮತ್ತು ಇತರ 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿದ್ದರು. ಜೂ. 2ರಂದು ರಾತ್ರಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಕೆಲವರು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿದ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು Read More »

ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ದಮನಿಸುವ ಕೆಲಸ ಮಾಡಿದರೆ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ : ಅರುಣ್‍ ಕುಮಾರ್ ಪುತ್ತಿಲ | ರಾಜ್ಯ ಸರಕಾರದ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ಬೃಹತ್‍ ಖಂಡನಾ ಸಭೆ

ಪುತ್ತೂರು: ನನ್ನ ಮೇಲೆ ಗಡಿಪಾರು ಆದೇಶ ಇದ್ದರೂ ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಅರುಣ್‍ ಕುಮಾರ್‍ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಅವರು ಮಂಗಳವಾರ ಸಂಜೆ ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ

ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ದಮನಿಸುವ ಕೆಲಸ ಮಾಡಿದರೆ ಹಿಂದೂ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ : ಅರುಣ್‍ ಕುಮಾರ್ ಪುತ್ತಿಲ | ರಾಜ್ಯ ಸರಕಾರದ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಗಡಿಪಾರು ಆದೇಶ ವಿರೋಧಿಸಿ ಬೃಹತ್‍ ಖಂಡನಾ ಸಭೆ Read More »

ಸರಕಾರ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಗಡಿಪಾರು ಆದೇಶ | ಹಿಂದೂ ನಾಯಕರ ಮನೆಗಳಿಗೆ ತೆರಳಿ ಫೋಟೊ ತೆಗೆದು ಜಿಪಿಎಸ್‍ | ದ.ಕ. ದ ಹಿಂದೂ ನಾಯಕರ ಪ್ರಾಣಕ್ಕೆ ಅಪಾಯ ಉಂಟಾದರೆ  ಸರಕಾರ, ಪೊಲೀಸ್ ಇಲಾಖೆ ನೇರ ಹೊಣೆ : ರಾಜ್ಯ ಸರಕಾರ, ಪೊಲೀಸ್  ಇಲಾಖೆ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ ಎಸ್‍ ಎಸ್‍, ಬಿಜೆಪಿ, ಸಂಘ ಪರಿವಾರ ಸಂಘಟನೆಯ ಮುಖಂಡರನ್ನು ಟಾರ್ಗೆಟ್ ಮಾಡಿ ಗಡಿಪಾರು ಮಾಡುವ ಜತೆಗೆ ರಾತ್ರಿ ಹೊತ್ತಿನಲ್ಲಿ ಹಿಂದೂ ಮುಖಂಡರ ಮನೆಗಳಿಗೆ ತೆರಳಿ ಫೋಟೊ ತೆಗೆದು ಜಿಪಿಎಸ್‍ ಮಾಡುತ್ತಿರುವ ಪ್ರಕರಣ ಈಗಾಗಲೇ ನನ್ನ ಗಮನಕ್ಕೆ ಬಂದಿದ್ದು, ಏನಾದರೂ ಹೆಚ್ಚು ಕಡಿಮೆಯಾದರೆ ಇದಕ್ಕೆ ಯಾರು ಹೊಣೆ. ನಿಮ್ಮ ಸರಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಈ ರೀತಿ ಸರಕಾರದ ಕುಮ್ಮಕ್ಕಿನಲ್ಲಿ ಪೊಲೀಸ್‍ ಇಲಾಖೆ ಮಾಡುತ್ತಿದೆ ಎಂದು ರಾಜ್ಯ ಸರಕಾರ ಹಾಗೂ

ಸರಕಾರ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಗಡಿಪಾರು ಆದೇಶ | ಹಿಂದೂ ನಾಯಕರ ಮನೆಗಳಿಗೆ ತೆರಳಿ ಫೋಟೊ ತೆಗೆದು ಜಿಪಿಎಸ್‍ | ದ.ಕ. ದ ಹಿಂದೂ ನಾಯಕರ ಪ್ರಾಣಕ್ಕೆ ಅಪಾಯ ಉಂಟಾದರೆ  ಸರಕಾರ, ಪೊಲೀಸ್ ಇಲಾಖೆ ನೇರ ಹೊಣೆ : ರಾಜ್ಯ ಸರಕಾರ, ಪೊಲೀಸ್  ಇಲಾಖೆ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ಜೂ.6 ರಿಂದ 8 : ನವತೇಜಸ್ ಸಂಘಟಿಸುವ 7ನೇ ವರ್ಷದ ‘ಹಲಸು ಹಣ್ಣು ಮೇಳ’

ಪುತ್ತೂರು: ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ. 6 ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಳಿಯ ಪ್ರಾಪರ್ಟೀಸ್‍, ದ್ವಾರಕಾ ಕಾರ್ಪೋರೇಶನ್‍ ಪ್ರೈ.ಲಿ., ಕ್ಯಾಂಪ್ಕೋ ಮಂಗಳೂರು, ಗ್ರಾಮಜನ್ಯ, ಎಸ್‍ ಆರ್‍ ಕೆ. ಲ್ಯಾಡರ್ಸ್‍, ವಿಜಯ ಸೋಲಾರ್, ಕೊಕನಟ್‍ ಫಾರ್ಮಲ್‍ ಪ್ರೊಡ್ಯೂಸರ್ ಪ್ರೈ. ಲಿ., ಪಶುಪತಿ ಇಲೆಕ್ಟ್ರಾನಿಕ್ಸ್‍, ಹಾಗೂ ರಾಧಾಸ್ ಸಹಯೋಗದಲ್ಲಿ ಹಲಸು

ಜೂ.6 ರಿಂದ 8 : ನವತೇಜಸ್ ಸಂಘಟಿಸುವ 7ನೇ ವರ್ಷದ ‘ಹಲಸು ಹಣ್ಣು ಮೇಳ’ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್‌ ಎಪಿ ಲ್ಯಾಬ್ ಇಂಡಿಯಾದ ಡೆವೆಲಪ್‌ಮೆಂಟ್ ಎಕ್ಸ್ ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍ Read More »

ಇಂದು (ಜು.3) : ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಬೃಹತ್ ಖಂಡನಾ ಸಭೆ

ಪುತ್ತೂರು: ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಅರುಣ್‍ ಕುಮಾರ್ ಪುತ್ತಿಲ ಗಡಿಪಾರು ಆದೇಶ ವಿರೋಧಿಸಿ ಬೃಹತ್‍ ಖಂಡನಾ ಸಭೆ ಇಂದು (ಜೂ.3) ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ಖಂಡನಾ ಸಭೆ ನಡೆಯಲಿದೆ. ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಜು.3) : ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ಬೃಹತ್ ಖಂಡನಾ ಸಭೆ Read More »

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ . ತಲೆಗೊಂದು ಅಕ್ಷರ ಕಿರೀಟ, ಕೈಲೊಂದು ಬಲೂನ್, ಬ್ಯಾಂಡ್ ವಾಲಗದ ನಾದಕ್ಕೆ ಹೆಜ್ಜೆ ಇಡುತ್ತಾ ಬಂದ ಮಕ್ಕಳ ಮೊಗದಲ್ಲಿ  ಸಂಭ್ರಮದ ಕಲೆ.  ಹಸಿರು ಅಂಗಿ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಸಾಗಿ ಬಂದ ದೃಶ್ಯವನ್ನು ಸಂಭ್ರಮಿಸುವ ಕ್ಷಣಕ್ಕೆ ಪೋಷಕರು,ಶಿಕ್ಷಕರು ಸಾಕ್ಷಿಯಾದರು.  ಇಂದು ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಶಾಲೆ

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ Read More »

error: Content is protected !!
Scroll to Top