ಪುತ್ತೂರು

ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ

ಪುತ್ತೂರು: ರಥಸಪ್ತಮಿ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು. ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ರಾಮದಾಸ ಗೌಡ, ಸಮಿತಿಯ ಪ್ರಾಂತ ಸಂಚಾಲಕ ಹರೀಶ್, ಕಾರ್ಯಕ್ರಮ ಸಂಚಾಲಕ ರಾಮಚಂದ್ರ, ಸಮಿತಿಯ ಮಹಾಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕಿ ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು. ಅ.ರಾ. ರಾಮಸ್ವಾಮಿ […]

ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ Read More »

ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಹಾಸಭೆ, ದಿನಚರಿ ಬಿಡುಗಡೆ

ಪುತ್ತೂರು : ಕರ್ನಾಟಕ ರಾಜ್ಯ ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಂಗಳೂರು ವಿಭಾಗದ ೨೦೨೨ನೇ ಸಾಲಿನ ಮಹಾಸಭೆ ಹಾಗೂ ೨೦೨೩ನೇ ಸಾಲಿನ ದಿನಚರಿ ಬಿಡುಗಡೆ ಸಮಾರಂಭ ಶನಿವಾರ ದರ್ಬೆ ಅಶ್ವಿನಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ದಿನಚರಿ ಬಿಡುಗಡೆ ಮಾಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಮಂಗಳೂರು ವಿಭಾಗಕ್ಕೆ ಪ್ರತ್ಯೇಕ ಸಮಸ್ಯೆಯಿದೆ. ಇದರ ಕುರಿತು ಸಿ.ಸಿ ಪಾಟೀಲ್ ಅರಣ್ಯ ಸಚಿವರಿರುವಾಗಲೇ ಚರ್ಚಿಸಲಾಗಿದೆ. ಈಗ ಅರಣ್ಯ ಇಲಾಖೆಯು ಮುಖ್ಯ ಮಂತ್ರಿಯವರಲ್ಲಿಯೇ ಇದ್ದು ಇಲಾಖೆ ಸಮಸ್ಯೆಗಳ ಸರಕಾರದ ಹಂತಗಳಲ್ಲಿ ಪರಿಹರಿಸಲು

ಉಪ ವಲಯಾರಣ್ಯಾಧಿಕಾರಿಗಳ ಸಂಘದ ಮಹಾಸಭೆ, ದಿನಚರಿ ಬಿಡುಗಡೆ Read More »

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಸಂಪ್ಯದಿಂದ ಕುಂಜೂರು ಪಂಜ ದೇವಸ್ಥಾನ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ 50 ಲಕ್ಷ ರೂಪಾಯಿ ಅನುದಾನ ನೀಡಿದ್ದು, ಕಾಮಗಾರಿಗೆ ಜ. 27ರಂದು ಚಾಲನೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ತಾಯಿಯ ಪಾತ್ರ ನಿರ್ವಹಿಸುತ್ತಾರೆ. ಹಲವು ಮಕ್ಕಳನ್ನು ತನ್ನ ಮಕ್ಕಳಂತೆ ಶಿಕ್ಷಕರು ಪೋಷಿಸುತ್ತಾರೆ, ಶಿಕ್ಷಣ ನೀಡುತ್ತಾರೆ. ಮಕ್ಕಳ ವಯಸ್ಸಿಗೆ ತಕ್ಕಂತೆ ಪ್ರೋತ್ಸಾಹ ನೀಡುತ್ತಾ, ನಮ್ಮ ಸಂಸ್ಕೃತಿಯನ್ನು ತಿಳಿಸಿಕೊಡುವ ಕೆಲಸವೂ ಶಾಲೆಗಳಲ್ಲಿ ಆಗುತ್ತದೆ ಎಂದರು.ಪ್ರೀತಮ್ ಪುತ್ತೂರಾಯ ಮಾತನಾಡಿ, ಮುಂದಿನ ಪೀಳಿಗೆಗೆ ಅನುಕೂಲ ಆಗುವಂತೆ ಕುಂಜೂರುಪಂಜದಿಂದ

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು Read More »

ನರಿಮೊಗರು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು: ನರಿಮೊಗರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ ಜ. 28ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಕಳೆದ 5 ವರ್ಷಗಳಲ್ಲಿ ಪುತ್ತೂರು ಕ್ಷೇತ್ರದ 111 ಸರಕಾರಿ ಶಾಲೆಗಳಿಗೆ ಕೊಠಡಿ, ಸ್ಮಾರ್ಟ್ ಕ್ಲಾಸ್, ಬೆಂಚು, ಡೆಸ್ಕ್ ನೀಡುವ ಕೆಲಸ ಆಗಿದೆ. ಶಾಲೆಗಳಿಗೆ ಮೂಲಸೌಲಭ್ಯಗಳನ್ನು ನೀಡುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವ ಕೆಲಸ ಆಗಿದೆ ಎಂದರು.ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣರಾಜ ಜೈನ್, ನಳಿನಿ ಲೋಕಪ್ಪ ಗೌಡ, ನರಿಮೊಗರು

ನರಿಮೊಗರು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಕಾವು ಶಾಲೆಯಲ್ಲಿ ಬಣ್ಣದ ಕಲರವ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು: ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬಣ್ಣದ ಕಲರವ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಜ. 28ರಂದು ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೋವಿಡ್ ನಂತರ ಸಾಮಾಜಿಕ ಬದಲಾವಣೆಗಳು ಬಹಳಷ್ಟು ಆಗಿವೆ. ಇದರ ನಡುವೆ ನಮ್ಮ ಜೀವನ ಹೇಗಿರಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ಬದುಕು ಚೆನ್ನಾಗಿರಬೇಕಾದರೆ, ಶಿಕ್ಷಣದಲ್ಲಿ ಬದಲಾವಣೆ ತೀರಾ ಅವಶ್ಯಕ. ಈ ಹಿನ್ನೆಲೆಯಲ್ಲಿ ಶಿಕ್ಷಣದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಲ್ಲಿ ಎಲ್ಲಾ ಶಾಲೆಗಳಿಗೂ ಸ್ಮಾರ್ಟ್ ಕ್ಲಾಸ್ ಕೊಡುವ ಕೆಲಸ

ಕಾವು ಶಾಲೆಯಲ್ಲಿ ಬಣ್ಣದ ಕಲರವ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು  ಹೊನಲು‌ ಬೆಳಕಿನ 30ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಿದ್ದರು. ಈ ಸಂದರ್ಭದಲ್ಲಿ  ಕಂಬಳ ಸಮಿತಿ ಗೌರವ

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ Read More »

ಶ್ರೀ ಸವಿತಾ ಮಹರ್ಷಿ ಜಯಂತಿ

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ‌ ವತಿಯಿಂದ  ಶ್ರೀ ಸವಿತಾ ಮಹರ್ಷಿ ಜಯಂತಿ ಶನಿವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು‌. ಪುತ್ತೂರು ಉಪವಿಭಾಗಾಧಿಕಾರಿ  ಗಿರೀಶ್ ನಂದನ್ ಸಂಸ್ಮರಣ ಜ್ಯೋತಿ ಪ್ರಜ್ವಲನೆ ಮಾಡಿ, ಸವಿತಾ ಸಮಾಜದವರು ಯಾವುದೇ ಮತ, ಭೇದವಿಲ್ಲದೆ ಸೇವೆ ಮಾಡುತ್ತಿದ್ದಾರೆ. ಸಮಾಜದ‌ ಶ್ರಿ ಸವಿತಾ ಮಹರ್ಷಿಗಳ ಆದರ್ಶ ಇಂದಿಗೂ ಪ್ರಸ್ತುತ. ಸಮಾಜದವರು ಉತ್ತಮ ಸೇವೆ ಮೂಲಕ ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಲಿ ಎಂದರು. ಗ್ರೇಡ್ 2 ತಹಶೀಲ್ದಾರ್ ದಯಾನಂದ ಸ್ವಾಗತಿಸಿದರು. ತಾಲೂಕು ಸವಿತಾ

ಶ್ರೀ ಸವಿತಾ ಮಹರ್ಷಿ ಜಯಂತಿ Read More »

ಪುರುಷರಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ

ಪುತ್ತೂರು: ಪುರುಷರಕಟ್ಟೆ ಶಿವಾಜಿ ಹಿಂದು ಜಾಗರಣ ವೇದಿಕೆ ಇವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆಯು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಬಗದಲ್ಲಿ ಇಂದು ಬೆಳಿಗ್ಗೆ ಗಣಹೋಮ ನಡೆಯಿತು. ಸಂಜೆ ಗಂಟೆ 6:30 ರಿಂದ ದುರ್ಗಾ ಪೂಜೆ ಹಾಗೂ ವನದುರ್ಗಂಬಿಕಾ ಭಜನಾ ಮಂಡಳಿ, ದೇವಿನಗರ ಪುರುಷರಕಟ್ಟೆ  ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7:30 ಕ್ಕೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, 9.30ರಿಂದ ವಿಶ್ವಕಲಾನಿಕೇತನ ಇನ್ ಸ್ಟಿಟ್ಯೂಷನ್  ಆಫ್ ಆರ್ಟ್ಸ್ &ಕಲ್ಚರಲ್ ಪುತ್ತೂರು ಇವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ

ಪುರುಷರಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ Read More »

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರಿನ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ಅಂಗವಾಗಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಒಳಮೊಗ್ರು ಗ್ರಾಮದ ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು ಸಾನಿಧ್ಯ ಕ್ಕೆ ಭೇಟಿ ನೀಡಿ ಪ್ರಾಥನೆ ಸಲ್ಲಿಸಿ ಬೂತು ಸಮಿತಿ  163 ರಲ್ಲಿ ಇಂದು ಮನೆ ಮನೆಗೆ ತೆರಳಿ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಧನೆಯ ಪತ್ರಕವನ್ನು ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ Read More »

ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದ್ದ ಶಾಸಕ ಸಂಜೀವ ಮಠಂದೂರು ನಮ್ಮ ಹೆಮ್ಮೆ | ಮೆಚ್ಚುಗೆ ವ್ಯಕ್ತಪಡಿಸಿದ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ

ಪುತ್ತೂರು: ನೆಕ್ಕಿಲಾಡಿಯಲ್ಲಿ ಎದುರಾದ ನೀರಿನ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಕೊಳವೆ ಬಾವಿಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಸಂಜೀವ ಮಠಂದೂರು ಅವರು ನಮ್ಮ ಹೆಮ್ಮೆ ಎಂದು ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಹೇಳಿದರು. ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ. 27ರಂದು ನಡೆದ ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ನೆಕ್ಕಿಲಾಡಿಯಲ್ಲಿ ಅತೀ ಹೆಚ್ಚು ನೀರಿನ ಸಮಸ್ಯೆ ಇತ್ತು. ಎಲ್ಲಾ ಕಡೆಯೂ ಗ್ರಾ.ಪಂ. ವತಿಯಿಂದ

ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದ್ದ ಶಾಸಕ ಸಂಜೀವ ಮಠಂದೂರು ನಮ್ಮ ಹೆಮ್ಮೆ | ಮೆಚ್ಚುಗೆ ವ್ಯಕ್ತಪಡಿಸಿದ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ Read More »

error: Content is protected !!
Scroll to Top