ಪುತ್ತೂರು

ಹಿರಿಯರನ್ನು, ಅವರ ಪರಿಶ್ರಮವನ್ನು ಮರೆಯದಿರೋಣ | ಪುತ್ತೂರು ತಾಲೂಕು ಮಟ್ಟದ ಗಣರಾಜ್ಯೋತ್ಸವದಲ್ಲಿ ಗಿರೀಶ್ ನಂದನ್

ಪುತ್ತೂರು: ಭಾಷೆ, ಪಂಗಡ ಮೀರಿ ನಮ್ಮ ದೇಶವನ್ನು ಹಿರಿಯರು ಒಂದಾಗಿಸಿದರು. ಅವರ ಪರಿಶ್ರಮವನ್ನು ಹಾಗೂ ಅವರನ್ನು ಮರೆಯದಿರೋಣ ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿ ಮಾತನಾಡಿದರು. ಭಾರತ ಒಂದೊಮ್ಮೆ ಹರಿದು ಹಂಚಿ ಹೋಗಿತ್ತು. ಇದನ್ನು ಒಂದು ಮಾಡಲು ಸಾಕಷ್ಟು ಶ್ರಮ ವಹಿಸಬೇಕಾಯಿತು. ಆಗ ಎದುರಾದ ಹಲವು ಸಮಸ್ಯೆಗಳನ್ನು ಮೀರಿ, […]

ಹಿರಿಯರನ್ನು, ಅವರ ಪರಿಶ್ರಮವನ್ನು ಮರೆಯದಿರೋಣ | ಪುತ್ತೂರು ತಾಲೂಕು ಮಟ್ಟದ ಗಣರಾಜ್ಯೋತ್ಸವದಲ್ಲಿ ಗಿರೀಶ್ ನಂದನ್ Read More »

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ

ಪುತ್ತೂರು: ಇಂದು ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವವನ್ನು ಅಸ್ಥಿತ್ವಗೊಳಿಸಿದ ದಿನ. ಜನರು ತಮ್ಮ ಸ್ವಂತ ಆಯ್ಕೆಯ ಪ್ರಕಾರ ದೇಶದ ಆಡಳಿತಗಾರರನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ. ನಾವು ಸಂವೇದನಾಶೀಲರಾಗಿ ಆಯ್ಕೆ ಮಾಡಿದರೆ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್. ಹೇಳಿದರು. ಕಾಲೇಜಿನಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಮಾಡಿ ಮಾತನಾಡಿದರು.ಅಸಂಖ್ಯಾತ ನೇತಾರರು, ತ್ಯಾಗ ಬಲಿದಾನದ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ Read More »

ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ಜಿಲ್ಲೆಯ ನಂ.1 ಸೇವಾ ಪುರಸ್ಕಾರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸುಳ್ಯದ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಆರೋಗ್ಯ ಭಾರತ್ -ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (AB-PMJAY-ArK)) ಅತ್ಯುತ್ತಮ ಸೇವಾ ಪುರಸ್ಕಾರ ದೊರೆತಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರವಿ ಕುಮಾರ್ ಅವರಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ಪ್ರಶಂಸನಾ ಪತ್ರ ಸ್ವೀಕರಿಸಿದರು.

ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ಜಿಲ್ಲೆಯ ನಂ.1 ಸೇವಾ ಪುರಸ್ಕಾರ Read More »

ಕಾರ್ಪಾಡಿ ದೇವಳದ ಜೀರ್ಣೋದ್ಧಾರ ಹಿನ್ನೆಲೆ: ಬೈಲ್ವಾರು ಸಭೆ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಕಾರ್ಯ ಪ್ರಯುಕ್ತ ಒಳತ್ತಡ್ಕ, ಗೆಣಸಿನಕುಮೇರು, ಮೇಗಿನಪಂಜ, ಬಂಗಾರಡ್ಕ, ಕುಂಜೂರುಪಂಜ, ದೊಡ್ಡಡ್ಕ  ಭಾಗದ ಭಕ್ತಾಧಿಗಳ ಬೈಲ್ವಾರ್ ಸಭೆ  ದೇವಸ್ಯದ ಧರ್ಮಸ್ಥಳ ಸಭಾ ಭವನದಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ ಸಮತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲು, ಉಪಾಧ್ಯಕ್ಷ ನಾರಾಯಣ ನಾಯ್ಕ್ ಗೆಣಸಿನ ಕುಮೇರ್ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರಾದ ರುಕ್ಮಯ ಕುಲಾಲ್ ಸ್ವಾಗತಿಸಿದರು.

ಕಾರ್ಪಾಡಿ ದೇವಳದ ಜೀರ್ಣೋದ್ಧಾರ ಹಿನ್ನೆಲೆ: ಬೈಲ್ವಾರು ಸಭೆ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ಪುತ್ತೂರು: 75 ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ನೃತ್ಯೋಪಾಸನಾ ಕಲಾಕೇಂದ್ರ ಆಯೋಜನೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆಯುವ ಗಡಿನಾಡ ಸಂಸ್ಕೃತಿ ಉತ್ಸವ – ಗೌರವ ಸನ್ಮಾನ, ವಿಚಾರಗೋಷ್ಠಿ, ಸಾಂಸ್ಕೃತಿಕ ಉತ್ಸವಗಳಿಗೆ ಜ. 26ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ‘ಭಾರತದಲ್ಲಿನ ಮೂಲ ಚಿಂತನೆಗಳನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಲೇ ಇದೆ. ಆದರೂ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ Read More »

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ

ಪುತ್ತೂರು: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ರಥಸಪ್ತಮಿ ಅಂಗವಾಗಿ ಜ. 28ರಂದು ಬೆಳಿಗ್ಗೆ 5ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ದೇವಳದ ಮುಖಮಂಟಪದಲ್ಲಿ ಅಖಂಡ ಸೂರ್ಯನಮಸ್ಕಾರ ನಡೆಯಲಿದೆ. ಕರ್ನಾಟಕ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ನೇತ್ರಾವತಿ ವಲಯದ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ Read More »

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಬಳಿಕ ದೇವರಮಾರು ಗದ್ದೆಯಲ್ಲಿ ಬಿದ್ದಿದ್ದ ಕಸ – ತ್ಯಾಜ್ಯವನ್ನು ಹೆಕ್ಕುವ ಮೂಲಕ ಶಾಸಕ ಸಂಜೀವ ಮಠಂದೂರು ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಜಯಂತ್ಯೋತ್ಸವ ಸಂಸ್ಮರಣೆ ಬಳಿಕ ದೇವರಮಾರು ಗದ್ದೆಯಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಮತ್ತವರ ತಂಡ ತ್ಯಾಜ್ಯವನ್ನು ಹೆಕ್ಕಿದ್ದಾರೆ. ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ಈ ಮೂಲಕ ದೇವಸ್ಥಾನದ ಆವರಣವನ್ನು ಶುಚಿಯಾಗಿಡುವ ಕೆಲಸ

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ Read More »

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಸವಣೂರು ಗ್ರಾಮ ದೈವ ಶಿರಾಡಿ, ರಕ್ತೇಶ್ವರಿ, ಮಹಿಷಂತ್ತಾಯ ದೈವಗಳ ದೈವಸ್ಥಾನ ಮಾಲೆತ್ತಾರು ಹಾಗೂ ಚೌಕಿಮಠ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು. ಪೂರ್ವಾಹ್ನ ಮಾಲೆತ್ತಾರು ಶಿರಾಡಿ ದೈವಸ್ಥಾನದಲ್ಲಿ ಗಣಹೋಮ, ತಂಬಿಲ, ಸಂಜೆ ಚೌಕಿಮಠ ರಕ್ತೇಶ್ವರಿ ಮತ್ತು ಮಹಿಷಂತ್ತಾಯ ದೈವಸ್ಥಾನದಲ್ಲಿ ತಂಬಿಲ ಸೇವೆ ಜರಗಿತು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ಪೂಜಾ ವಿಧಿವಿಧಾನವನ್ನು ನೇರವೇರಿಸಿದರು. ಅರ್ಚಕ ಕಾರ್ತಿಕ್ ಬಡೆಕಿಲ್ಲಾಯ ಸಹಕರಿಸಿದರು. ದೈವಸ್ಥಾನದ ಆಡಳಿತದಾರರಾದ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ದೇಸೀಯ ಉತ್ಪನ್ನಗಳಿಗೆ ಬೆಂಬಲ ನೀಡಿದಾಗ ದೇಶ ಅಭಿವೃದ್ಧಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ವೆಂಚುರಾ – ವಾಣಿಜ್ಯ ಸ್ಪರ್ಧೆ ಸಮಾರೋಪದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ದೇಶದ ಬಗೆಗೆ ಅಭಿಮಾನವನ್ನು ಬೆಳೆಸುವಂತಹ ಕಾರ್ಯಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ಬೆಳೆಯಬೇಕು. ದೇಸೀಯ ಸಾಧಕರು, ಅವರ ಸಾಧನೆಗಳು ನಮ್ಮ ಆದರ್ಶವಾಗಬೇಕು. ನಮ್ಮನ್ನು ಆಕರ್ಷಿಸುವ ಅನೇಕ ವಿದೇಶೀ ಮೂಲದ ವಸ್ತುಗಳಿದ್ದರೂ ನಮ್ಮ ನೆಲದ ಉತ್ಪನ್ನಗಳಿಗೆ ನಾವು ಬೆಂಬಲ ನೀಡಬೇಕು. ದೇಶಕ್ಕೆ ಸಂಕಷ್ಟ ಒದಗಿದಾಗ ನೆರವಾಗುವವರು ನಮ್ಮವರೇ ಹೊರತು ಅನ್ಯರಲ್ಲ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ

ದೇಸೀಯ ಉತ್ಪನ್ನಗಳಿಗೆ ಬೆಂಬಲ ನೀಡಿದಾಗ ದೇಶ ಅಭಿವೃದ್ಧಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ವೆಂಚುರಾ – ವಾಣಿಜ್ಯ ಸ್ಪರ್ಧೆ ಸಮಾರೋಪದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ

ಪುತ್ತೂರು: ಸಂತಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ| ಡಾ| ಆಂಟನಿಪ್ರಕಾಶ್ ಮೊಂತೆರೊರವರು“ವಿದ್ಯಾರ್ಥಿಗಳು ತಮ್ಮ ವರ್ತನೆ, ವ್ಯಕ್ತಿತ್ವ ಮತ್ತು ಭಾಷೆಯ ಮೇಲೆ ಮುಖ್ಯವಾಗಿ ಗಮನ ಹರಿಸಬೇಕು. ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಮತ್ತು ಆಧ್ಯಾತ್ಮಿಕ ದೃಷ್ಟಿಕೋನಗಳನ್ನು ಅರ್ಥಪೂರ್ಣವಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ, ವಿದ್ಯಾರ್ಥಿಗಳು ಪಠ್ಯ,ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಹೃದಯ, ಬುದ್ಧಿ ಮತ್ತು ದೇಹಕ್ಕೆ ತರಬೇತಿ ನೀಡುವತ್ತ ಗಮನ ಹರಿಸಬೇಕು” ಎಂದು ಹೇಳಿದರು. ಈ ಸಂರ್ಭದಲ್ಲಿ ಕಾಲೇಜಿನ

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ Read More »

error: Content is protected !!
Scroll to Top