ಪುತ್ತೂರು

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮಕ್ಕೆ ಮುನ್ನದಿನವಾದ ಜ. 21ರಂದು ಸಂಜೆ 3.30ಕ್ಕೆ ದರ್ಬೆ ದುಗ್ಗಣ್ಣ ದೇರಣ್ಣ ಸಭಾಭವನದ ಬಳಿಯಿಂದ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 3.30ಕ್ಕೆ ಸರಿಯಾಗಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. […]

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆಯವರೆಗೆ ನಡೆಯಲಿರುವ ಶೋಭಾಯಾತ್ರೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜೊತೆಯಲ್ಲಿ ಮಹಾಸಂಸ್ಥಾನದ ಎಲ್ಲಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ಮೂಡಿಬರುವಂತಾಗಲು ವಿವಿಧ ಸ್ತಬ್ದಚಿತ್ರಗಳು ಮೆರುಗು ನೀಡಲಿವೆ. ಸ್ತಬ್ಧಚಿತ್ರಗಳ್ಯಾವುವು:ಮುಂಭಾಗದಿಂದ ಶೋಭಾಯಾತ್ರೆಯ ಮಾಹಿತಿಯನ್ನು ಸಾರುತ್ತಾ,

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಮಾರಂಭಕ್ಕೆ ರಾಜ್ಯಾದ್ಯಂತ ಜನರು ಆಗಮಿಸುವ ಹಿನ್ನೆಲೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ವ್ಯವಸ್ಥೆ ಮಾಡಲಾಗಿದೆ. ಉಪ್ಪಿನಂಗಡಿ, ಬೆಳ್ತಂಗಡಿ, ಕಡಬ ಭಾಗದಿಂದ ಬರುವವರು ಪುತ್ತೂರು “ಎಪಿಎಂಸಿ ಮೈದಾನದಲ್ಲಿ ” ವಾಹನಗಳನ್ನು ಪಾರ್ಕ್ ಮಾಡಬಹುದು.ಸುಳ್ಯ ಭಾಗದಿಂದ ಬರುವವರು “ಕಿಲ್ಲೆ ಮೈದಾನ ಹಾಗೂ ಗೌಡ ಸಮುದಾಯ ಭವನದ ಎದುರು” ವಾಹನ ಪಾರ್ಕ್ ಮಾಡಲು ಅವಕಾಶ ಮಾಡಲಾಗಿದೆ. ಮಂಗಳೂರು, ಉಡುಪಿ ಭಾಗದಿಂದ ಬರುವವರು “ಬೈಪಾಸ್ ರಸ್ತೆಯಲ್ಲಿರುವ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ Read More »

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ನೂತನ ರಥ ಸಮರ್ಪಣೆ, 108 ತೆಂಗಿನಕಾಯಿ ಮಹಾಗಣಪತಿ ಹೋಮ ಜ. 20ರಿಂದ 23ರವರೆಗೆ ನಡೆಯಲಿದೆ.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ. 14ರಂದು ಗೊನೆ ಮುಹೂರ್ತ ನಡೆದಿದ್ದು, 15ರಂದು ನೂತನ ರಥ ಆಗಮಿಸಿದೆ. ಜ. 21ರಂದು ಬೆಳಿಗ್ಗೆ 7.30ಕ್ಕೆ ದೇವತಾ ಪ್ರಾರ್ಥನೆ ನಡೆದು, 8ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ನಾಗನಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ,

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ Read More »

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್

ಪುತ್ತೂರು: ಕಾಂಗ್ರೆಸಿನ ಪುತ್ತೂರು ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರು ಗಟ್ಟಿಯಾಗಿ ಕೇಳಿಬರುತ್ತಿರುವ ನಡುವೆಯೇ, ಅಶೋಕ್ ಕುಮಾರ್ ರೈ ಅವರು ಕಳೆದ 6 ವರ್ಷಗಳಿಂದ ಬಿಜೆಪಿ ಸದಸ್ಯತನವನ್ನೇ ನವೀಕರಿಸಿಲ್ಲ ಎಂಬ ಮಾಹಿತಿಯನ್ನು ಪುತ್ತೂರು ಬಿಜೆಪಿ ಪ್ರಮುಖರು ಖಾತ್ರಿ ಪಡಿಸಿದ್ದಾರೆ. ಅಶೋಕ್ ಕುಮಾರ್ ರೈ ಅವರು ಶಾಸಕ ಆಕಾಂಕ್ಷಿ ಅಭ್ಯರ್ಥಿ ಎನ್ನುವುದು ಕೆಲ ವರ್ಷಗಳಿಂದಲೇ ಪ್ರಚಲಿತದ್ದಲ್ಲಿತ್ತು. ಇದರಲ್ಲೇನು ಹೊಸತನವಿಲ್ಲ. ಆದರೆ ಏಕಾಏಕೀ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ್ದಾರೆ ಎಂದರೆ ಹಲವರ ಹುಬ್ಬು ಗಂಟ್ಟಿಕ್ಕುವಂತೆ ಮಾಡಿತ್ತು. ಇದೀಗ ಇದಕ್ಕೂ

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್ Read More »

ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ

ಪುತ್ತೂರು: ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ನೇತೃತ್ವದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ 8 ತಂಡಗಳ ಪ್ರೋ ಮಾದರಿಯ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ಜ. 21ರಂದು ದರ್ಬೆ ಮಂಗಳಾ ಹೊಟೇಲ್ ಮುಂಭಾಗ ನಡೆಯಲಿದೆ ಎಂದು ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ಗೌರವಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾಟದ ಉದ್ಘಾಟನೆಯನ್ನು ರಾತ್ರಿ

ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ Read More »

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವೆಗೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್ಶಿಪ್ ಅಭಿಯಾನ ನಡೆಯಲಿದೆ. 3 ವರ್ಷಗಳ ಹಿಂದೆ

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ Read More »

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್.

ಪುತ್ತೂರು: ವಾರಾಂತ್ಯ ಚಟುವಟಿಕೆಯಂತಹ ಕಾರ್ಯಕ್ರಮದಿಂದ ಬದುಕು ರೂಪಿಸಿಕೊಳ್ಳುವ ಶಿಕ್ಷಣ ಸಿಗಲಿದೆ. ಉತ್ತಮ ಬದುಕಿಗೆ ಪೂರಕವಾದ ಅನುಭವಾತ್ಮಕ ಕಲಿಕೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಳಪಡಲಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ತಿಳಿಸಿದರು.ರಾಜ್ಯ ಬಾಲಭವನ ಸೊಸೈಟಿ, ತಾಲೂಕು ಬಾಲಭವನ ಸೊಸೈಟಿ, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂಸಾರ ತಂಡ ಪುತ್ತೂರು ಇವುಗಳ ಸಹಯೋಗದಲ್ಲಿ

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್. Read More »

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023

ಪುತ್ತೂರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2023 ಜ. 22ರಂದು ಬೆಳಿಗ್ಗೆ 9.30ರಿಂದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ದ.ಕ.ಜಿ.ಪಂ. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ 3ನೇ ಸರಣಿ ಕಾರ್ಯಕ್ರಮ ಇದಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಉದ್ಘಾಟಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023 Read More »

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಫೆ. 8ರಿಂದ 10ರತನಕ ನಡೆಯುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರ ಬಿಡುಗಡೆ ಮತ್ತು ಜೀರ್ಣೋದ್ಧಾರ ಸಮಿತಿ ಸಭೆ ಬುಧವಾರ ರಾತ್ರಿ ನಡೆಯಿತು. ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆಯಲ್ಲಿ ಗ್ರಾಮದ ವಿವಿಧ ಭಾಗದ ಬೈಲ್ವಾರ್ ಸಮಿತಿಯ ಸಭೆ ನಡೆಸಲು ಜವಾಬ್ದಾರಿ ನೀಡಲಾಯಿತು. ಫೆ. 10ರಂದು ಬಾಲಾಲಯ ಪ್ರತಿಷ್ಠೆ ಬಳಿಕ ನಡೆಯುವ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಸರ್ವ

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ Read More »

error: Content is protected !!
Scroll to Top