ಪುತ್ತೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ ಕುಂಜೂರುಪಂಜ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಯೋಜನೆಯ ಮೇಲ್ವಿಚಾರಕ ಹರೀಶ್ ಕೆ. ಮಾತನಾಡಿ, ಒಗ್ಗಟ್ಟಿನಿಂದ ಮುನ್ನಡೆದರೆ ಸಂಘವನ್ನು, ಘಟಕವನ್ನು ಮಾದರಿಯಾಗಿ ರೂಪಿಸಬಹುದು. ಎಲ್ಲರ ಸಹಕಾರ ಇದ್ದರೆ ತಂಡವನ್ನು ಬಲಪಡಿಸಬಹುದು ಎಂದ ಅವರು, ಶೌರ್ಯ ತಂಡದ ಸದಸ್ಯರು ಗ್ರಾಮಕ್ಕೆ ಸಂಬಂಧಪಟ್ಟ ಬೇರೆ ಬೇರೆ ಸೇವೆಗಳಲ್ಲಿ ಭಾಗವಹಿಸಬಹುದು. ತಿಂಗಳಿಗೆ ಒಂದು ಸೇವೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು. ಜಾತ್ರೋತ್ಸವ ಹಾಗೂ ನೇಮೋತ್ಸವದಲ್ಲಿ ಸೇವೆ ಸಲ್ಲಿಸಿದ ಸದಸ್ಯರಿಗೆ ಅಭಿನಂದನೆ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ Read More »

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳಿಯೂರುಕಟ್ಟೆ ವೆಂಕಟನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಜಯರಾಂ ಪೂಜಾರಿ ಮಾತನಾಡಿ, ಮನೆ ಪರಿಸರ, ಸ್ನೇಹಿತರ ಒಡನಾಟ, ಸಾಮಾಜಿಕ ವ್ಯವಸ್ಥೆಯಿಂದ ದುಶ್ಚಟಕ್ಕೆ ಬಲಿಯಾಗುವುದು ಇದೆ. ಒಮ್ಮೆ ಮಾದಕ ವಸ್ತು, ಕುಡಿತದ ಚಟಕ್ಕೆ ಬಲಿಯಾದರೆ, ಮುಂದೆ ಬಹಳ ಕಷ್ಟ ಪಡಬೇಕಾಗುತ್ತದೆ. ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ ಆಗಿರುವುದರಿಂದ, ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನವನ್ನು ಕಂಡುಕೊಳ್ಳಿ ಎಂದರು. ಬದುಕಿನಲ್ಲಿ ತಾಳ್ಮೆ, ಎಚ್ಚರಿಕೆ,

ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ  ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ಜ. 7ರಂದು ಸಂಪನ್ನಗೊಂಡಿತು. ಡಿ 31ರಿಂದ ಮೊದಲ್ಗೊಂಡು ಜ7ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಿತು. ಜ. 7ರಂದು ಬೆಳಿಗ್ಗೆ

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ Read More »

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ Read More »

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಮಾ. 9ರಂದು ನಡೆಯಲಿರುವ ಕುದ್ಮಾರು ಅನ್ಯಾಡಿ ಶ್ರೀ ಶಿರಡಿ ರಾಜನ್ ದೈವದ ನೇಮೋತ್ಸವ ಹಿನ್ನೆಲೆಯಲ್ಲಿ ಜ. 8ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೆಡೆಂಜಿ ಗುತ್ತಿನ ಪ್ರವೀಣ್ ಕುಮಾರ್ ಕೆಡೆಂಜಿ, ಆಡಳಿತ ಸಮಿತಿ ಉಪಾಧ್ಯಕ್ಷರಾದ ರೋಹಿತಕ್ಷ ಕೆಡೆಂಜಿಕಟ್ಟ, ಚೇನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ, ಕೋಶಾಧಿಕಾರಿ ಉಮೇಶ್, ಯೋಗೀಶ್ ಕೆಡೆಂಜಿ, ಉಮೇಶ್ ಕೆರೆನಾರು, ಊರಿನ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ Read More »

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕುಂಜೂರುಪಂಜ, ಜನಜಾಗೃತಿ ವೇದಿಕೆ ಬಲ್ನಾಡು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು, ಪುತ್ತೂರು ರೋಟರ್ಯಾಕ್ಟ್ ಕ್ಲಬ್‍, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ ಜ. 8ರಂದು ಕುಂಜೂರುಪಂಜ ಮಂಜುನಾಥ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀ ಕ್ಷೇತ್ರ

ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ Read More »

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಭಿಯಾದರೂ ನಮ್ಮ ಚಿತ್ತ ಪಾರಂಪರಿಕ ಕೃಷಿಯತ್ತ ಹರಿಯಬೇಕಾದ ಅಗತ್ಯವಿದೆ. ನಮ್ಮೆಲ್ಲರ ಬದುಕು ಆರಂಭ ಆಗಿರುವುದೇ ಕೃಷಿ ಅಂಗಳದಿಂದ. ಆದ್ದರಿಂದ ಪಾರಂಪರಿಕ ಕೃಷಿಗೆ ಹಿಂದಿರುಗಲು ನಮ್ಮ ಮನೆ ಅಂಗಳಕ್ಕೆ ನಾವು ಹಿಂದಿರುಗುವ ಕೆಲಸ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಸುದ್ದಿ ಮಾಹಿತಿ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ, ವಿವಿಧ ಒಕ್ಕೂಟ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಕಿಲ್ಲೆ ಮೈದಾನದಲ್ಲಿ ಆರಂಭಗೊಂಡ ಸಸ್ಯಜಾತ್ರೆಯನ್ನು ಉದ್ಘಾಟಿಸಿ

ಕೃಷಿ ಅಂಗಳದಿಂದ ಬದುಕಿನ ಆರಂಭ | ಸಸ್ಯಜಾತ್ರೆಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದು ತುಳುವಿನ ಮಾನ್ಯತೆ ಗಿಟ್ಟಿಸಿಕೊಳ್ಳಲು ಸಹಕಾರಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಂಟರ ಭವನದಲ್ಲಿ ಶನಿವಾರ ನಡೆದ ಪುತ್ತೂರು ತುಳುಕೂಟದ ಸುವರ್ಣ ಮಹೋತ್ಸವ ಹಾಗೂ ತಾಲೂಕು ತುಳುವೆರೆ ಮೇಳೊ-2023 ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಕಳಸೆಗೆ ಭತ್ತ ತುಂಬುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಒಂದು ಭಾಷೆ ಸಮಾಜದ ಜನಾಂಗ, ಸಂಸ್ಕೃತಿಯನ್ನು ಬೆಸುಗೆ ಮಾಡುವ ಮಹತ್ವವನ್ನು ಪಡೆದಿದೆ.

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ತುಳುವೆರೆ ಮೇಳೊ ಪೂರಕ | ತುಳುವೆರೆ ಮೇಳೊ 2023ಕ್ಕೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ

ಪುತ್ತೂರು: ಹಿಂದುತ್ವ ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ನೆಹರೂನಗರ ವಿವೇಕಾನಂದ ಕ್ಯಾಂಪಸ್‍್ನಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ಜರಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಎನ್ನುವ ಪರಮ ಸಂತನ ಹೆಸರಿನಲ್ಲಿ ಸಂಸ್ಕಾರವುಳ್ಳ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಬಂದಿದೆ.  ವಿದ್ಯಾಸಂಸ್ಥೆಗಳು ಕೇವಲ ಪದವಿ ನೀಡುವುದಲ್ಲ. ವಿದ್ಯಾಸಂಸ್ಥೆಗಳು ಸಾಮಾಜಿಕ ಹಿತ ಕಾಯಬೇಕು, ಸಾಮಾಜಿಕ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ

ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ Read More »

ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ

ಪುತ್ತೂರು: ಟಿಪ್ಪು ನಿಜ ಕನಸುಗಳು ನಾಟಕದ 21ನೇ ಪ್ರದರ್ಶನವು ಜ. 9ರಂದು ಸಂಜೆ 6.30ರಿಂದ ಪುತ್ತೂರು ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ರಂಗ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕ ರಚಿಸಿ, ನಿರ್ದೇಶನ ಮಾಡಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ಚರಿತ್ರೆಕಾರರು ಬರೆದದ್ದೇ ಸತ್ಯ ಎಂದು ಅದನ್ನು ಪಠ್ಯವಾಗಿಸಿ ಇದೇ ಸತ್ಯ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ನಡೆದು ಬಂದಿತ್ತು. ಇದನ್ನು ಮೀರಿದ ಟಿಪ್ಪು ಕುರಿತ ಸತ್ಯದ ಅನಾವರಣ ಈ ನಾಟಕ

ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ Read More »

error: Content is protected !!
Scroll to Top