ಪುತ್ತೂರು

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-ಶೇ. 100, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ಶೇ.100, ಡಾಟಾಸೈನ್ಸ್- ಶೇ.100, […]

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶ ಪ್ರಕಟ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿಗೆ ಶೇ.100 ಫಲಿತಾಂಶ Read More »

ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ

ಪುತ್ತೂರು : ಸರ್ವೆ ವ್ಯಾಪ್ತಿಯಲ್ಲಿರುವ  ಗೌರಿ ಹೊಳೆ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ ಸರ್ವೆ ಎಂಬಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ರಸ್ತೆಯ ಸಂಪರ್ಕ ಕಡಿತಗೊಂಡಿದ್ದು, ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಅಪಾಯದ ಮಟ್ಟದಲ್ಲಿದ್ದ ಮನೆ ಮಂದಿಯನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿದೆ. ಇದೇ ಮೊದಲ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಭೀತಿ ಸೃಷ್ಠಿಯಾಗಿದೆ ಎಂದು

ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ Read More »

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ

ಪುತ್ತೂರು : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ವವ ಮೇ 30 ರಂದು ಗಣಪತಿ ಹವನದ ಮೂಲಕ ಆರಂಭಿಸಲಾಯಿತು. ಪೋಷಕ ಹರಿಪ್ರಸಾದ್ ವೈಲಾಯ ಮತ್ತು ಬಳಗದವರು ಯಜ್ಞ ಕಾರ್ಯ ನೆರವೇರಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ದಂಪತಿ ಹವನದ ಕರ್ತೃತ್ವ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ Read More »

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು

ಪುತ್ತೂರು : ತಾಲೂಕಿನ ಬೆಳ್ಳಿಪಾಡಿ ಗ್ರಾಮದಲ್ಲಿ ಭೀಕರ ಭೂಕುಸಿತವಾಗಿದ್ದು,  ಬೆಳ್ಳಿಪ್ಪಾಡಿ ಕಠಾರ ಕೋಟೆಲು ಭಾಗಕ್ಕೆ ಸಂಪರ್ಕಿಸುವ ಸಕಲೇಶ್ವರ ದೇವಸ್ಥಾನದ ಬಳಿ ಇರುವ  ಗುತ್ತಿನಮನ ಎಂಬಲ್ಲಿ ರಸ್ತೆಗೆ ಧರೆ ಕುಸಿದುಬಿದ್ದು ದರಿಂದ ಸಂಪರ್ಕ ಕಡಿತವಾಗಿದೆ . ಮಣ್ಣು ಕೆಳಗಿನ ತೋಟಗಳಿಗೂ ನುಗ್ಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ಸ್ಥಳದಲ್ಲಿ ಭೂಕುಸಿತ ಸಂಭವಿಸಿದ್ದು, ಮೇಲ್ಬಾಗದಲ್ಲಿ ಎರಡು ಮನೆಗಳು ತೀರ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆಯನ್ನು ಉಪಯೋಗಿಸುವಂತೆ ಸ್ಥಳೀಯರು ತಿಳಿಸಿದ್ದಾರೆ. ಇಲಾಖೆ ತಕ್ಷಣ ಎಚ್ಚೆತ್ತುಕೊಂಡು

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು Read More »

ಗೌರಿ ಹೊಳೆ ಮುಳುಗಡೆ | ಸವಣೂರು ಸಂಪರ್ಕ ಕಡಿತ

ಪುತ್ತೂರು:  ಭಾರೀ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ. ಸರ್ವೆ ಸೇತುವೆ ಸಂಪೂರ್ಣ ಮುಳುಗಡೆಯಾದ  ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ಸಂಪರ್ಕ ಕಡಿತಗೊಂಡ ಹಿನ್ನಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಗೌರಿ ಹೊಳೆ ತುಂಬಿ ಸೇತುವೆ ಮುಳುಗಡೆಯಾಗಿ ಅಪಾಯ ಪರಿಸ್ಥಿತಿ ಉಂಟಾದರೂ ಸ್ಥಳಕ್ಕೆ ಪೊಲೀಸರು ಬರಲಿಲ್ಲ. ಮುಳುಗಡೆಯಾದ ಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.

ಗೌರಿ ಹೊಳೆ ಮುಳುಗಡೆ | ಸವಣೂರು ಸಂಪರ್ಕ ಕಡಿತ Read More »

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ

ಪುತ್ತೂರು : ತುಳು ಎಂಬುದು ಭಾಷೆ ಮಾತ್ರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ. ತುಳು ಮೂಲ ಜನಾಂಗದಲ್ಲಿ ಸತ್ಯ, ಧರ್ಮ ಮತ್ತು ನಿಷ್ಠೆಯಿದೆ. ಇಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಹಿಂಸೆಗಳು ತುಳು ಸಂಸ್ಕೃತಿಯಲ್ಲ. ಹೊರ ಸಂಸ್ಕೃತಿಯ ಆಗಮನದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು, ಬೇರೆಯವರು ಇಲ್ಲಿಗೆ ಆಗಮಿಸಿ ನಮ್ಮ ತುಳು ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದಾರೆ ಎಂದು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ  ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಸಿರಿಗಂಗೆ ಪ್ರಕಾಶ ತುಳುನಾಡು ವತಿಯಿಂದ ಕರ್ನಾಟಕ ಕಾರ್ಯನಿರತ

ಪ್ರಸ್ತುತ ನಡೆಯುತ್ತಿರುವ ಹೊಡಿ-ಬಡಿ ವಿದ್ಯಾಮಾನ ತುಳು ಸಂಸ್ಕೃತಿಯಲ್ಲ : ವೆಂಕಟ್ರಮಣ ಗೌಡ ಕಳುವಾಜೆ | ‘ಗೇನೊದ ಬುಲೆ’ ತುಳು ಕೃತಿ ಬಿಡುಗಡೆ Read More »

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮುಂದುವರಿದ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತವಾಗಿದ್ದು, ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದೆ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಬಹಳ ದೊಡ್ಡ ದುರಂತ ತಪ್ಪಿದೆ. ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಇದಾಗಿದ್ದು, ಇನ್ನೂ ಮೂರು ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎನ್ನಲಾಗಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ Read More »

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಹಾಗೂ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ’ ಎಂದು ತಿಳಿದು

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ Read More »

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ

 ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ Read More »

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ

ಪುತ್ತೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹು ನಿರೀಕ್ಷಿತ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಕರಾವಳಿಯಾದ್ಯಂತ ಮೇ ೩೦ ಶುಕ್ರವಾರ ತೆರೆ ಕಾಣಲಿದೆ. ಉಡುಪಿ, ದ.ಕ. ಜಿಲ್ಲೆಯ ಸುಮಾರು ೧೩ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಸುಮಾರು ೨೫ ಶಾಲೆಯ ೧೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷವಾಗಿದೆ. ಮೊದಲಿಗೆ

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ Read More »

error: Content is protected !!
Scroll to Top