ಅಪರಾಧ ತಡೆ ಮಾಸಾಚಾರಣೆ, ಜಾಗೃತಿ ಜಾಥಾ | ರೋಟರಿ, ಇಂಟರ್ಯಾಕ್ಟ್, ಪೊಲೀಸ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯಿಂದ ಜಾಥಾ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ಇಂಟರ್ಯಾಕ್ಟ್ ಕ್ಲಬ್ ರಾಮಕೃಷ್ಣ ಯುವ, ದ.ಕ. ಜಿಲ್ಲಾ ಪೊಲೀಸ್, ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಸಂಚಾರ ಪೊಲೀಸ್ ಠಾಣೆ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಡಿ. 28ರಂದು ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ ನಡೆಯಿತು. ಕೊಂಬೆಟ್ಟಿನಿಂದ ಆರಂಭಗೊಂಡ ಜಾಗೃತಿ ಜಾಥಾ, ಗಾಂಧಿಕಟ್ಟೆಯಲ್ಲಿ ಸಮಾರೋಪಗೊಂಡಿತು. ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಪೊಲೀಸರಿಂದಷ್ಟೇ ಅಪರಾಧ ತಡೆ ಸಾಧ್ಯ ಎಂದುಕೊಂಡರೆ ತಪ್ಪು. ಸಾರ್ವಜನಿಕರು ಪೊಲೀಸರೊಂದಿಗೆ […]










