ಜ. ೨೨: ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಜಯಂತ್ಯೋತ್ಸವ | ಆಲಂಕಾರಿನಲ್ಲಿ ವಲಯ ಮಟ್ಟದ ಪೂರ್ವಸಿದ್ಧತಾ ಸಭೆ
ಪುತ್ತೂರು: ಪುತ್ತೂರಿನಲ್ಲಿ ಜ. ೨೨ರಂದು ನಡೆಯಲಿರುವ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಆಲಂಕಾರಿನಲ್ಲಿ ಸೋಮವಾರ ವಲಯವಾರು ಪೂರ್ವಸಿದ್ಧತಾ ಸಭೆ ನಡೆಯಿತು. ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚು ಜನ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು. ಇದಕ್ಕಾಗಿ ಸಮುದಾಯದ ಪ್ರತಿ ಮನೆಗೂ ಆಮಂತ್ರಣ ಪತ್ರವನ್ನು ತಲುಪಿಸಬೇಕು ಮತ್ತು ಪ್ರತಿಯೊಬ್ಬರೂ ಸಭೆಯಲ್ಲಿ ಭಾಗವಹಿಸಬೇಕು. ಕಾರ್ಯಕ್ರಮದಲ್ಲಿ ಅದ್ದೂರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದರಲ್ಲೂ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಲಾಯಿತು. ಸಭೆಯಲ್ಲಿ ರಾಮಣ್ಣ ದೋಳ, ಚಕ್ರಪಾಣಿ ಬಾಕಿಲ, ರಾಮಣ್ಣ […]










