ರಕ್ತದಾನ, ನೇತ್ರದಾನ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ | ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರಿಗೆ ಆಹಾರ ಸಾಮಗ್ರಿ ವಿತರಣೆ
ಪುತ್ತೂರು: ವಿಷನ್ ಸಹಾಯ ನಿಧಿ ಸೇವಾ ಟ್ರಸ್ಟ್ ದಾನಿಗಳಿಂದ ಸಂಗ್ರಹಿಸಿದ ಹಣದಿಂದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಆಯ್ದ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ನೇತ್ರದಾನ ಶಿಬಿರ, ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಡಿ. 30ರಂದು ಅನುರಾಗ ವಠಾರದಲ್ಲಿ ನಡೆಯಿತು. ಆಹಾರ ಸಾಮಾಗ್ರಿ ವಿತರಿಸಿ ಮಾತನಾಡಿದ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶರತ್ ಕುಮಾರ್ ಮಾತನಾಡಿ, ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯಬೇಕು ಎಂದು ಹಿರಿಯರು ತಿಳಿಸಿಕೊಟ್ಟಿದ್ದಾರೆ. ಜನರ […]









