ಪುತ್ತೂರು

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ

ಪುತ್ತೂರು: ಇಂದು ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, ಈ ವೇಳೆ 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾ ತೀರಾ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಯಾರೂ ಇರದೇ ಇರುವುದರಿಂದ ಜೀವಕ್ಕೆ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಪಕ್ಕದಲ್ಲಿ ನಗರಸಭೆಯ ಟ್ರಾನ್ಸ್ ‘ಫಾರ್ಮರ್ ಇದ್ದು, ಕಾಂಪೌಂಡ್ ಬಿದ್ದಾಗ ರಸ್ತೆಗೆ ವಾಲಿಕೊಂಡು ಬಿಟ್ಟಿತ್ತು. ತಕ್ಷಣ ಮೆಸ್ಕಾಮ್ ಮಾಹಿತಿ ನೀಡಿ, […]

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ Read More »

ಭಾರತ ಸರ್ಕಾರದ ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆ – ಕರ್ನಾಟಕ ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ

ಪುತ್ತೂರು: ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್‌ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ) 2022-23ನೇ ಸಾಲಿನ ಸ್ಕಾಲರ್‌ಶಿಪ್‌ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಇದರ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆಯಾಗಿದ್ದಾರೆ. ಕರ್ನಾಟಕ ಕರಾವಳಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಸಿಸಿಆರ್‌ಟಿ   ಸ್ಕಾಲರ್‌ಶಿಪ್‌ಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ. ಕಳೆದ 10 ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ತೇಜಸ್ವಿರಾಜ್‌, 2018ರಲ್ಲಿ ಜೂನಿಯರ್‌, 2021ರಲ್ಲಿ ಸೀನಿಯರ್‌ ಪರೀಕ್ಷೆಯಲ್ಲಿ ವಿಶೇಷ

ಭಾರತ ಸರ್ಕಾರದ ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆ – ಕರ್ನಾಟಕ ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ | ಪಲ್ಲಕ್ಕಿ ಉತ್ಸವ, ವಸಂತ ಪೂಜೆ | ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳ ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಪತ್ತನಾಜೆ ಉತ್ಸವ ” ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಉತ್ಸವದ ಬಳಿಕ ಭಕ್ತರಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳನ್ನು ವಿತರಣೆ ಮಾಡಲಾಯಿತು. ಉತ್ಸವದ ಅಂಗವಾಗಿ ಬೆಳಗ್ಗೆ ಮತ್ತು ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ ಉತ್ಸವು ಉಡಿಕೆ, ಚೆಂಡೆ, ವಾದ್ಯ ಸುತ್ತು, ಪಲ್ಲಕಿ ಉತ್ಸವ ಮತ್ತು ಸೇವೆಯ ಬಳಿಕ ವಸಂತ ಪೂಜೆ ¸ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ | ಪಲ್ಲಕ್ಕಿ ಉತ್ಸವ, ವಸಂತ ಪೂಜೆ | ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳ ವಿತರಣೆ Read More »

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ

ಪುತ್ತೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚೆಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ಜರಿದು ಬಿದ್ದ ಪರಿಣಾಮ ಹೂವಿನ ವ್ಯಾಪಾರಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಳೆದ ಕೆಲವು ಸಮಯದಿಂದ ವಿನಾಯಕ ಪ್ಲವರ್ ಸ್ಟಾಲ್ ನ ಮಾಲಕತ್ವದ ಹೂವಿನ ಅಂಗಡಿ ಮೇಲೆ ಗೋಡೆ ಜರಿದು ಬಿದ್ದಿದೆ. ಈ ಸಂದರ್ಭ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದರು.

ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ Read More »

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಕಡಬ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗಿಂತಲೂ ಹೆಚ್ಚಿನ ಸಾಧನೆ ಮಾಡಿದಾಗ ನಿಜವಾದ ಗುರುಕಾಣಿಕೆ ನೀಡಿದಂತಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಬೇಕು. ಇಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಬೆವರಿಳಿಸಿ ದುಡಿದು ಗಳಿಸಿದ ಸ್ವಂತ ಸಂಪಾದನೆಯ ಒಂದು ಭಾಗವನ್ನು ಕಾಲೇಜಿನ ಬಿಸಿ ಊಟದ ವ್ಯವಸ್ಥೆಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ದುಡಿದು ಗಳಿಸಿ ಮುಂದಿನ

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ Read More »

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಎಂದು  ಮೈಸೂರಿನ ಎಸ್‌ ಡಿಎಂ ರಿಸರ್ಚ್ ಸೆಂಟರ್‌ನ ಪ್ರೋ. ಬಿ ವೆಂಕಟರಾಜ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನಾಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಆಯೋಜಿಸಿದ್ದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪ್ರಭಾವಶಾಲಿ ಸಂಶೋಧನಾ ಬರಹ

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ ಉಡಿಕೆ, ಚೆಂಡೆ, ವಾದ್ಯ ಸುತ್ತು ಪಲ್ಲಕಿ ಉತ್ಸವ ಮತ್ತು ಸೇವೆ, ವಸಂತ ಪೂಜೆ ಸೇವೆ ಮಾಡಿಸಿದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ. ದೇವರು ಗರ್ಭಗುಡಿ ಪ್ರವೇಶಿಸಿದ ಬಳಿಕ ಪತ್ತನಾಜೆ ಉತ್ಸವದ ಪ್ರಸಾದ ರೂಪವಾಗಿ ಫಲವಸ್ತುಗಳನ್ನು ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳಿಗೆ ವಿತರಣೆ ಮಾಡಲಾಗುವುದು ಎಂದು ದೇವಸ್ಥಾನದ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಪತ್ತನಾಜೆ ಉತ್ಸವ Read More »

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು

ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟಿ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿದೆ. ಚಾಲಕನು ಕಾರನ್ನು ಮುಖ್ಯ ರಸ್ತೆಯಿಂದ ಪಕ್ಕಕ್ಕೆ ಇಳಿಸುವ ಪ್ರಯತ್ನದಲ್ಲಿದ್ದಾಗ, ರಸ್ತೆಯ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಮಾರ್ಗವಾಗಿ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು, ಗಡಿಪಿಲ ಕರೆಮನೆ ಕಟ್ಟೆ ಬಳಿ ಬಂದಾಗ ಚಾಲಕನು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡಲು ಕಾರನ್ನು ರಸ್ತೆಯ ಅಂಚಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ,

ತೋಟಕ್ಕೆ ಉರುಳಿ ಬಿದ್ದ ಮಾರುತಿ ಎರ್ಟಿಗಾ ಕಾರು Read More »

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ

ಪುತ್ತೂರು: ಮಹಿಳೆಯೊಬ್ಬರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಕೆಲ ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮಾಡುತ್ತಿರುವ

ಕಾಂಕ್ರಿಟ್‍  ಮಿಕ್ಸಿಂಗ್‍ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ Read More »

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸ. ಪ್ರ.ದ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಮೇ 26 ಸೋಮವಾರ ನಡೆಯಲಿದೆ. ಪೂರ್ವಾಹ್ನ ಗಂಟೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಎ. ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ Read More »

error: Content is protected !!
Scroll to Top