ಪುತ್ತೂರು

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ  ಚಿನ್ನದ ಮಳಿಗೆ ಬೆಳ್ತಂಗಡಿ ಶಾಖೆಯ ಹೊಸ ವಿಸ್ತೃತ ಶೋರೂಮ್ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಮೇ  17 ರಂದು ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕೇಶವ ಭಟ್ಟರಿಂದ ಆರಂಭದ ಸಂಸ್ಥೆಯನ್ನು ಅವರ ಮೊಮ್ಮಕ್ಕಳದ ಕೇಶವ ಪ್ರಸಾದ್ ಹಾಗೂ ಕೃಷ್ಣನಾರಾಯಣ ಮುಳಿಯ ಇವರು ಮುನ್ನಡೆಸುತ್ತಿದ್ದಾರೆ . ಈ ವಿಶಾಲ ಶೋರೂಮ್ ಖ್ಯಾತ ಸಿನಿಮಾ ನಟ ಹಾಗೂ ಸ್ಪೂರ್ತಿಯ […]

ಮೇ 17 : ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್-  ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ  ಅತಿ ದೊಡ್ಡ ಶೋರೂಂ ಉದ್ಘಾಟನೆ Read More »

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಮೃತರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್

ಪುತ್ತೂರು: ಪುತ್ತೂರು ಕೆ.ಎಸ್.ಆರ್‍.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ  ಹೋಟೆಲ್‍ ಪಾರ್ಕಿಂಗಿಗೆ ಪೊಲೀಸ್‍ ಬ್ಯಾರಿಕೇಡ್‍ ಇಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚೆಗೆ ದಾರಿ ಮಾಡಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಪೊಲೀಸ್ ಬ್ಯಾರಿಕೇಡ್ ಬಳಕೆಯಾಗುವುದು ಎಲ್ಲಿ? ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್ Read More »

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ

ಪುತ್ತೂರು: ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿಯಾದ ಎನ್. ಗುಲಾಬಿ ಶೆಟ್ಟಿ ಕಂಪ ಅನಾರೋಗ್ಯದಿಂದ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ. ಇವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ದಾನಿ ಸ್ವಭಾವುಳ್ಳವರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ನಿಧನರಾದರು. ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‍ ಬುಕ್‍ ನಲ್ಲಿ ಅವಹೇಳನಕಾರಿ ಪೋಸ್ಟ್ | ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರ ವಿರುದ್ಧ ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಅವರ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗ ತೆರಳಿ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‍ ಬುಕ್‍ ನಲ್ಲಿ ಅವಹೇಳನಕಾರಿ ಪೋಸ್ಟ್ | ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರರ ವಿರುದ್ಧ ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

ವಿಎಚ್‍ ಪಿ, ಬಜರಂಗಳದಿಂದ ವೈದ್ಯಕೀಯ ಚಿಕಿತ್ಸೆಗೆ ಧನಸಹಾಯ ಹಸ್ತಾಂತರ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ  ವಿಶ್ವ ಹಿಂದೂ ಪರಿಷತ್. ಬಜರಂಗದಳ  ಹಿಂದೂ  ಸಂಘಟನೆ ಸೇವೆ ಎಂಬ  ಯಜ್ಞದಲ್ಲಿ ಕಳೆದ  ಹಲವು  ದಶಕಗಳಿಂದ  ಬಡ  ಕುಟುಂಬಗಳಿಗೆ ಸಹಾಯಹಸ್ತ ನೀಡುತ್ತಿದ್ದು ಇದೀಗ ಕೊಡಿಮರದ ಕುಸುಮ ಬಾಲಕೃಷ್ಣ ಪೂಜಾರಿ ಅವರಿಗೆ ಸಹಾಯಹಸ್ತ ಹಸ್ತಾಂತರಿಸಲಾಯಿತು. ಕುಸುಮ ಬಾಲಕೃಷ್ಣ ಪೂಜಾರಿ ಅವರ  ವೈದ್ಯಕೀಯ  ಚಿಕಿತ್ಸೆಗೆ  28000 ಧನ  ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರಾದ ಗಣೇಶ್‍ ಕೈಲಾಜೆ, ಯತಿನ್‍ ಕೋರ್ತಾಜೆ ಮತ್ತಿತರರು ಉಪಸ್ಥಿತರಿದ್ದರು.

ವಿಎಚ್‍ ಪಿ, ಬಜರಂಗಳದಿಂದ ವೈದ್ಯಕೀಯ ಚಿಕಿತ್ಸೆಗೆ ಧನಸಹಾಯ ಹಸ್ತಾಂತರ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ವೇ.ಮೂ ವಸಂತ ಕೆದಿಲಾಯ ಮತ್ತು ವೇ. ಮೂ.ವಿ.ಎಸ್ ಭಟ್ ಅವರ ವೈದಿಕತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು.ರಾತ್ರಿ ಶ್ರೀ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ಪಲ್ಲಕಿ ಉತ್ಸವ, ಬಂಡಿ ಉತ್ಸವ Read More »

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ. ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ  ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.

ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ Read More »

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು

ಕಡಬ: ಮೇ 12 ರಿಂದ 16 ರ ತನಕ ನಡೆಯುವ ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ತಾಯಿ ಪ್ರೀತಿಯೊಟ್ಟಿಗೆ ಕಾಲ ಕಾಲಕ್ಕೆ ಬರುವ ನಲ್ಮೆ ಗೆಲ್ಮೆ, ಮನಸ್ಸಿಗೆ ತನ್ಮಯ

ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ | ಸಮಾಜದ ಜನರ ಮನಸ್ಸು ಒಂದಾಗುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಆಗಿದೆ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ | ಆರೇಲ್ತಡಿ ದೈವಗಳು ಸಂಘಟನಾತ್ಮಕವಾಗಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಇಚ್ಛೆ ನೀಡಿದೆ : ನಳಿನ್‍ ಕುಮಾರ್ ಕಟೀಲ್‍ | ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವವರು ಕರಾವಳಿಗರು : ಭಾರತಿ ಶೆಟ್ಟಿ | ಧರ್ಮದ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ: ಭಾಗೀರಥಿ ಮುರುಳ್ಯ | ಸಾವಿರಾರು ಹೃದಯ, ಮನಸ್ಸುಗಳು ಸೇರಿ ಆರೇಲ್ತಡಿ ದೇವಭೂಮಿಯಾಗಿದೆ : ಸಂಜೀವ ಮಠಂದೂರು Read More »

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಕೊಟ್ಲಂಗಾಡ್‍: ಶ್ರೀ ದುರ್ಗಾಮಲ್ಲಿಕಾರ್ಜುನ (ಜಟ್ಟಿ ಮನೆ) ತರವಾಡು ಟ್ರಸ್ಟ್ ನಿಂದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರು, ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ ಕೇರಳ ರಾಜ್ಯದ ಚಿತ್ತಾರಿ ಕೊಟ್ಲಂಗಾಡ್‍ ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಖೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿ ವಿಶಿಷ್ಟಾದ್ಯ್ಯೆತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ. ಬ್ರ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳ ಶುಭಾಶೀರ್ವಾದಗಳೊಂದಿಗೆ, ಚಿತ್ತಾರಿ ಬಾರಿಕ್ಕಾಡು ಬ್ರಹ್ಮಶ್ರೀ

ವಿಜೃಂಭಣೆಯಿಂದ ಜರಗಿದ ಶ್ರೀ ದುರ್ಗಾಮಲ್ಲಿಕಾರ್ಜುನ ದೇವರ ಪ್ರತಿಷ್ಠೆ | ಜಟ್ಟಿಮನೆ ತರವಾಡಿನ ಗೃಹಪ್ರವೇಶ ಹಾಗೂ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

error: Content is protected !!
Scroll to Top