ಪುತ್ತೂರು

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ: ವೀಕ್ಷಿಸಿದ ಯುವತಿಯರಿಗೆ ಬಂತು ಬೆದರಿಕೆ ಕರೆ

ಪುತ್ತೂರು: ನಗರದ ಜಿ. ಎಲ್. ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪ್ರದರ್ಶಿಸಲಾಗಿದ್ದು, ಇದರ ಬೆನ್ನಲ್ಲೇ ಈ ವಿಷಯದ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿವೆ. ಕೆಲವು ರಾಜಕೀಯ ನಾಯಕರು ಈ ಚಿತ್ರದ ಪ್ರದರ್ಶನಕ್ಕೆ ಬೆಂಬಲ ಸೂಚಿಸಿದ್ದರು. ವಿದ್ಯಾರ್ಥಿಗಳು ಸಹ ಚಿತ್ರವನ್ನು ನೋಡಿದ್ದರು. ಅದಾದ ಬಳಿಕ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ವಿಚಾರಗಳನ್ನು ಕೆಲವು ವಿಘ್ನಸಂತೋಷಿಗಳು ಹರಡಲು ಆರಂಭಿಸಿದ್ದಾರೆ. ಜೊತೆಗೆ ಚಲನಚಿತ್ರದ ಬುಕ್ಕಿಂಗ್‌ಗಾಗಿ […]

ದಿ ಕೇರಳ ಸ್ಟೋರಿ 2 ಉಚಿತ ಪ್ರದರ್ಶನ: ವೀಕ್ಷಿಸಿದ ಯುವತಿಯರಿಗೆ ಬಂತು ಬೆದರಿಕೆ ಕರೆ Read More »

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ : ಮೂವರ ಬಂಧನ, ಐದು ಕೋಳಿ ವಶ

ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಪುತ್ತೂರು : ಬಜತ್ತೂರು ಗ್ರಾಮದ ಮಾಣಿಕ್ಕಳದಲ್ಲಿ ಅನುಮತಿಯಿಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಉಪ್ಪಿನಂಗಡಿ ಪೊಲೀಸರು ಮಂಗಳವಾರ ದಾಳಿ ನಡೆಸಿ ಮೂವರನ್ನು ಬಂಧಿಸಿ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೊಯಿಲ ಗ್ರಾಮದ ಸಬಲೂರು ನಿವಾಸಿ ಸತೀಶ್ (38), ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನ ಮುರಳಿ (30) ಮತ್ತು ವಳಲು ಕುಡತ್ತಡ್ಕ ನಿವಾಸಿ ಮೋನಪ್ಪ ಕೆ.(36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಉಪ್ಪಿನಂಗಡಿ ಎಸ್‌ಐ ಸುತೇಶ್ ಕೆ.ಪಿ ಮತ್ತು

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ : ಮೂವರ ಬಂಧನ, ಐದು ಕೋಳಿ ವಶ Read More »

ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿದ ಯುವಕ ಸೆರೆ

ಕಾರು ಚಾಲಕನನ್ನು ಅಡ್ಡಗಟ್ಟಿ ಪಿಸ್ತೂಲು ತೋರಿಸಿ ಬೆದರಿಸಿದ್ದ ಯುವಕ ಪುತ್ತೂರು: ಪುತ್ತೂರಿನ ರಿಲಯನ್ಸ್ ಮಾಲ್ ಬಳಿ ಕಾರು ಚಾಲಕರೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ, ಗುಂಡು ಹಾರಿಸಲು ಯತ್ನಿಸಿದ 19 ವರ್ಷದ ಯುವಕನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್‌ ಎಂದು ಗುರುತಿಸಲಾಗಿದೆ. ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು ನೀಡಿದ ದೂರಿನ ಪ್ರಕಾರ, ಮಾರ್ಚ್ 2ರ ಮಧ್ಯಾಹ್ನ ಹಕೀಂ ಪುತ್ತೂರಿನಿಂದ ಕೂರ್ನಡ್ಕಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಹೆಲ್ಮೆಟ್ ಧರಿಸದ

ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿದ ಯುವಕ ಸೆರೆ Read More »

ಪುತ್ತೂರು: ಪಿಸ್ತೂಲು ತೋರಿಸಿ ಬೆದರಿಸಿದ ಅಪರಿಚಿತ ವ್ಯಕ್ತಿ

ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿ ದರ್ಬೆ ಸಮೀಪ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ದೂರು ನೀಡಿದವರು. ಅವರು ದರ್ಬೆಯಲ್ಲಿ ಕಾರು ನಿಲ್ಲಿಸಿ ರಿಕ್ಷಾ ಚಾಲಕರ ಮಧ್ಯೆ ನಡೆದ ಮಾತಿನ ಚಕಮಕಿಯನ್ನು ಸಮಾಧಾನಿಸಿ ಹಿಂದಿರುಗಿ ಹೊರಡುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿ ಪಿಸ್ತೂಲ್ ತೋರಿಸಿ ಬೆದರಿಸಿದಾಗ ಹಕೀಂ ಮತ್ತು ಇತರರು ಸೇರಿ ಆತನನ್ನು ಹಿಡಿಯಲು ಹೋದಾಗ ವ್ಯಕ್ತಿ ಬೈಕ್‌

ಪುತ್ತೂರು: ಪಿಸ್ತೂಲು ತೋರಿಸಿ ಬೆದರಿಸಿದ ಅಪರಿಚಿತ ವ್ಯಕ್ತಿ Read More »

ಪುತ್ತೂರು : ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವಕ ಸಾವು

ಪುತ್ತೂರು: ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಯುವಕ ಸಾವಿಗೀಡಾದ ಘಟನೆ ಮಂಗಳವಾರ ರಾತ್ರಿ ಕುಂಬ್ರ-ಬೆಳ್ಳಾರೆ ರಸ್ತೆಯಲ್ಲಿ ಸಂಭವಿಸಿದೆ. ಕುಂಬ್ರ ಶಾಲೆಯ ಬಳಿಯ ನಿವಾಸಿ ಭುವನ್‌ (33) ಮೃತಪಟ್ಟಿರುವ ಯುವಕ. ನಿಂತಿಕಲ್ಲಿನ ಬಾರ್‌ ಒಂದರಲ್ಲಿ ಉದ್ಯೋಗಿಯಾಗಿರುವ ಭುವನ್‌ ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದರು. ಕೆಯ್ಯೂರು ಕಡೆಗೆ ಹೋಗಿ ರಾತ್ರಿ ಮನೆಗೆ ಬರುತ್ತಿದ್ದಾಗ ಅವರ ಬೈಕ್‌ ಅಪಘಾತಕ್ಕೀಡಾಗಿದೆ. ಬೈಕ್‌ ವೇಗವಾಗಿ ಬಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಭುವನ್‌ ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು

ಪುತ್ತೂರು : ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವಕ ಸಾವು Read More »

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ

ಪುತ್ತೂರು: ಭೂಮಿಯಿಂದ ಕೆಲವೇ ಮಟ್ಟಗಳ ದೂರದಲ್ಲಿ ಜೆಟ್ ವಿಮಾನವೊಂದು ಹಾರಾಟ ನಡೆಸಿದ್ದು, ಪುತ್ತೂರಿಗರಲ್ಲಿ ‌ಕೆಲಕಾಲ ಆಂತಕ ಸೃಷ್ಟಿಸಿದ ಘಟನೆ ನಡೆಯಿತು. ಮಂಗಳವಾರ ಮಧ್ಯಾಹ್ನ ಮಹಾಲಿಂಗೇಶ್ವರ ದೇಗುಲದ ಸಮೀಪದಲ್ಲಿ ಜೆಟ್ ವಿಮಾನ ಹಾರಾಟ ನಡೆಸಿದ್ದು, ಏನಿದು? ಯಾತಕ್ಕಾಗಿ ವಿಮಾನ ಹಾರಾಟ ನಡೆಸುತ್ತಿದೆ ಎಂಬ ಗೊಂದಲ ಕೆಲಕಾಲ ಸೃಷ್ಟಿಯಾಯಿತು. ಆ ಬಳಿಕ ಇದು ಭೂಮಿಯ ರಚನೆ, ಅಧ್ಯಯನಕ್ಕೆ ನಡೆದ ಜೆಟ್ ವಿಮಾನ ಸರ್ವೇ ಕಾರ್ಯ. ಭೂ ವಿಜ್ಞಾನಕ್ಕೆ ನಡೆದ ವೈಮಾನಿಕ ಸರ್ವೇ ಎಂದು ತಿಳಿದ ಬಳಿಕ ಜನರು ನಿರಾಳರಾದರು ಎಂದು

ಪುತ್ತೂರಿನಲ್ಲಿ ಹಾರಾಡಿ ಆತಂಕ ಸೃಷ್ಟಿಸಿದ ‌ಜೆಟ್ ವಿಮಾನ Read More »

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯಡಿ ಅಕ್ಷಯ ಕಾಲೇಜು ಪುತ್ತೂರು ವತಿಯಿಂದ “ನನ್ನ ಭಾರತಕ್ಕಾಗಿ ಯುವಜನತೆ – ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಆಶಯದೊಂದಿಗೆ ಆಯೋಜಿಸಲಾದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಶ್ರೀ ರಾಮಚಂದ್ರ ಪದವಿ ಪರ‍್ವ ವಿದ್ಯಾಲಯದಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಿದ್ದರು. ಅಧ್ಯಕ್ಷ ಜಯಂತ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಏಳು ದಿನಗಳ ಕಾಲ ಪರ್ನೆ ಪರಿಸರವನ್ನು ಆಯ್ಕೆ ಮಾಡಿಕೊಂಡು ಶಿಬಿರವನ್ನು

ಅಕ್ಷಯ ಕಾಲೇಜು ವಾರ್ಷಿಕ ಶಿಬಿರ 2025-26 ಸಮಾರೋಪ Read More »

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು

ಜಾತ್ರೋತ್ಸವದಲ್ಲಿ ಕುಣಿತ ಭಜನೆ ನಡೆಯುತ್ತಿರುವಾಗ ಸಂಭವಿಸಿದ ದುರಂತ ಈಶ್ವರಮಂಗಲ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂಬವರು ಕುಣಿತ ಭಜನೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಇಬ್ಬರು ಪುತ್ರರು ಹಾಗೂ

ಕುಣಿತ ಭಜನೆ ಮಾಡುತ್ತಿರುವಾಗಲೇ ಮಹಿಳೆ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಅಭಿವೃದ್ಧಿ ಹಿನ್ನೆಲೆ ದೇಗುಲಕ್ಕೆ ‌ಸೇರಿದ ಜಮೀನನ್ನು ಮರು ವಶ ಮಾಡಿಕೊಳ್ಳುವ ಕೆಲಸ ನಡೆಯುತ್ತಿದ್ದು, ನೆಲ್ಲಿಕಟ್ಚೆಯ ಅಶ್ವತ್ಥ ಮರದ ಸಮೀಪ ಇದ್ದ ಮನೆಯನ್ನು ಸೌಹಾರ್ಧಯುತವಾಗಿ ‌ತೆರವು ಮಾಡಲಾಗಿದೆ. ಈ ಜಮೀನು ವಾಲ್ಟರ್ ಲೋಬೋ ಎಂಬವರು 60 ವರ್ಷಗಳಿಂದ ಮನೆ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡುತ್ತಿದ್ದರು. ಸುಮಾರು ಎಂಟರಿಂದ ಹತ್ತು ಸೆಂಟ್ಸ್ ಜಾಗವನ್ನು ವಾಲ್ಟರ್ ಲೋಬೋ ಅವರು ದೇವಸ್ಥಾನಕ್ಕೆ ಪ್ರೀತಿಯಿಂದ ಬಿಟ್ಟುಕೊಟ್ಟಿದ್ದಾರೆ. ಇದರ ಮೌಲ್ಯ ಸುಮಾರು ಒಂದು ಕೋಟಿಗೂ ಅಧಿಕವಾಗಿದ್ದು,

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ Read More »

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ನೇತೃತ್ವದಲ್ಲಿ ನನ್ನ ಭಾರತಕ್ಕಾಗಿ ಯುವಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ವಾರ್ಷಿಕ ವಿಶೇಷ ಶಿಬಿರ 2025-26 ರಂದು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ ಇಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ನವೀನ್ ಪದಬರಿ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಪೆರ್ನೆ ಇವರು ವೇದಿಕೆಯನ್ನು ಅಲಂಕರಿಸಿ ಶಿಬಿರಾರ್ಥಿಗಳನ್ನು ಹಾಗೂ ಸಭೆಯನ್ನು ಕುರಿತು ಎರಡು ಸಾಲು ಪದ್ಯದ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಉಮ್ಮಪ್ಪ

ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ Read More »

error: Content is protected !!
Scroll to Top