ಪುತ್ತೂರು

ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ಸಂಘದ ವಾರ್ಷಿಕ ಮಹಾಸಭೆ ಮೇ 1 ಗುರುವಾರ ಬೆಳಿಗ್ಗೆ 9.30 ಕ್ಕೆ ಬಪ್ಪಳಿಗೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್‍ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದಲ್ಲಿ ಶೈಕ್ಷಣಿಕವಾಗಿ ಆರು ಮಂದಿ ಸಾಧಕರಿಗೆ ಅಭಿನಂದಿಸಲಾಗುವುದು. ದೆಹಲಿ ಗಣರಾಜ್ಯೋತ್ಸವದಲ್ಲಿ ಪ್ರಧಾನಮಂತ್ರಿ ರ‍್ಯಾಲಿಯಲ್ಲಿ, ದೆಹಲಿ ಕರ್ತವ್ಯಪಥ ರಾಜ್ಯೋತ್ಸವ ಪಥಸಂಚಲನದಲ್ಲಿ, ಗಣರಾಜ್ಯೋತ್ಸವ ಕರ್ತವ್ಯಪಥದಲ್ಲಿ, ಸಾಂಸ್ಕೃತಿಕ […]

ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ Read More »

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ

ಪುತ್ತೂರು : ಕಾರು ಮತ್ತು ಅಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ  ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.24) ಗುರುವಾರ ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ Read More »

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏ.24 ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ . ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು, ಪಂಜ ಭಾಸ್ಕರ ಭಟ್ ,  ವಂದನಾ ಶಂಕರ್ ತಮ್ಮ ವಿಚಾರಧಾರೆಗಳನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ

ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ Read More »

ಕಾಶ್ಮೀರದ ಪಹಲ್ಗಾಮ್‍ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್‍, ಬಜರಂಗದಳದಿಂದ ಬೃಹತ್‍ ಪ್ರತಿಭಟನಾ ಸಭೆ

ಪುತ್ತೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ಬುಧವಾರ ಸಂಜೆ ಬಸ್‍ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯಲ್ಲಿ ನಡೆಯಿತು. ಪ್ರತಿಭಟನಾ ಸಭೆಯ ಮೊದಲು ನಗರದ ದರ್ಬೆ ವೃತ್ತದಿಂದ ದೊಂದಿಯೊಂದಿಗೆ ಬೃಹತ್‍ ಕಾಲ್ನಡಿಗೆ ಜಾಥಾ ಗಾಂಧಿಕಟ್ಟೆ ತನಕ ನಡೆಯಿತು. ಅಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ವಿಶ್ವ ಹಿಂದೂ ಪರಿಷದ್‍ ನ

ಕಾಶ್ಮೀರದ ಪಹಲ್ಗಾಮ್‍ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷದ್‍, ಬಜರಂಗದಳದಿಂದ ಬೃಹತ್‍ ಪ್ರತಿಭಟನಾ ಸಭೆ Read More »

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ

ಪುತ್ತೂರು : ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ  ಇದೆ ಏಪ್ರಿಲ್ 24, ಗುರುವಾರ  ಸಂಜೆ 6:30 ಕ್ಕೆ  “ಜಿ  ಸರಿಗಮಪ ಖ್ಯಾತಿಯ ಕಲಾವಿದರಿಂದ  ಮಧುರ ನೆನಪುಗಳಿಗೆ ನಾದ ಸ್ಪರ್ಶ ನೀಡಲಿರುವ – ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ  ಬಂದು ಸಂತೋಷದಿಂದ  ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವಿವರಣೆ   : ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ  ಸಂಗೀತ ಪ್ರಿಯರಿಗಾಗಿ ವಿಶೇಷ

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ Read More »

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ

ಪುತ್ತೂರು:  ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ  ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ Read More »

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಕುಂಟಾರು ಬಳಿ ಇಂದು ನಡೆದಿದೆ. ಯೋಗಿ ಎಂಬಾತ ಅಪಘಾತದಲ್ಲಿ ಮೃತಪಟ್ಟವರು ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಮೂಲತಃ ಕೊಟ್ಯಾಡಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’

ಪುತ್ತೂರು : ಇಂದು ಕೊನೆಯ ಪ್ರದರ್ಶನವೆಂದು ನಿಗದಿಯಾಗಿದ್ದ ‘ಭಾವ ತೀರ ಯಾನ’  ಸಿನಿಮಾ ಪ್ರದರ್ಶನ ಮುಂದುವರಿದು, ಏ. 24 ಗುರುವಾರದವರೆಗೆ GL ONE MALLನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿತರಕರು ಮತ್ತು ನಿರ್ಮಾಪಕರು ತಿಳಿಸಿದ್ದಾರೆ. ನಾಳೆ ಸಂಜೆ 4-45ಕ್ಕೆ ಪ್ರದರ್ಶನ ನಿಗದಿಯಾಗಿದ್ದು ಸಾಕಷ್ಟು ಮಂದಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ್ದಾರೆ. Book my show App ನಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’ Read More »

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ

ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಘೋಷಿಸಲಾಯಿತು.   ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಹಾಗು ಕಡಬ ತಾಲೂಕಿನ ನಾನಾ ಭಾಗಗಳಲ್ಲಿ ಗ್ರಾಮ ಸಮಿತಿಗಳು ರೂಪುಗೊಂಡಿದ್ದು, ಇದೀಗ ತಾಲೂಕು ಸಮಿತಿಯನ್ನು ರಚಿಸುವ ಮೂಲಕ ಧರ್ಮ ಶಿಕ್ಷಣದ ಜಾರಿಗೊಳಿಸುವಿಕೆಯ ಪ್ರಕ್ರಿಯನ್ನು ಮತ್ತೊಂದು ಹಂತಕ್ಕೆ ಒಯ್ಯಲಾಯಿತು. ಸಮಿತಿಯ ಗೌರವ

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ Read More »

error: Content is protected !!
Scroll to Top