ಧಾರ್ಮಿಕ

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ

ಪುತ್ತೂರು : ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತೀಯ ಸೇನೆಗೆ ಒಳಿತಾಗಲಿ ಹಾಗೂ ಸೇನೆಗೆ ಮತ್ತಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ಗುರುವಾರ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ […]

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ Read More »

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಕಾಶ್ಮೀರದಲ್ಲಿ ಪಹಲ್ಗಾಮದಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸಿಂಧೂರ ಆಪರೇಷನ್‍ ಹಾಗೂ ಮುಂದಿನ ದಿನಗಳಲ್ಲಿ ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‍.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ

ಪುತ್ತೂರು: ಇಲ್ಲಿಯ ಕಿಲ್ಲೇ ಮೈದಾನ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 11 ರಂದು ಬೆಳಿಗ್ಗೆ 8.26 ರ ಶುಭಮುಹೂರ್ತದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ದೇವಸ್ಥಾನದಲ್ಲಿ ಅರಾಧ್ಯ ದೇವಿಯಾದ ಹತ್ತೂರಿಗೆ ಸಂಬಂಧಪಟ್ಟ ಪದ್ಮಾವತಿ ಎಂಬ ಖ್ಯಾತಿಯ ಪನ್ನಗ ಕನ್ನಿಕಾದೇವಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡಿಕೊಂಡು ಬಂದಿದ್ದರು. ಬಳಿಕ ದಿನಗಳಲ್ಲಿ ದೇವಸ್ಥಾನ

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ Read More »

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ

ಪುತ್ತೂರು: :ಮುಳಿಯ  ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ  ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತದೊಂದಿಗೆ ನೆರವೇರಿತು.  ಸತತವಾಗಿ  3 ವರ್ಷಗಳಿಂದ  ಮಾತಾಭಗಿನಿಯರಿಗೆ ಲಲಿತಾ ಸಹಸ್ರನಾಮ  ಹೇಳಿಕೊಟ್ಟ  ನೆಲೆಯಲ್ಲಿ 

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ

ಪುತ್ತೂರು:  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಸುಮಾರು 16 ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ನ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಕೆನರಾ ಬ್ಯಾಂಕ್ ನ 10 ಲಕ್ಷ ರೂ.,  ಕರ್ಣಾಟಕ ಬ್ಯಾಂಕ್ ನ 5 ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು. ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ Read More »

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ಇರುಮುಡಿ ಹೊತ್ತು ಅಯ್ಯಪ್ಪನ ಸನ್ನಿಧಾನಕ್ಕೆ ಹೋಗಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ ಇಳಿಯಲು ಸನ್ನಿಧಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು ಆದರೆ ವಿರೋಧದಿಂದಾಗಿ ಆ ಆಲೋಚನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ನಿಲಕ್ಕಲ್‌ನಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲಿದ್ದಾರೆ.

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು

ಪುತ್ತೂರು: ಇಡಿಯ ದೇಶದಲ್ಲೇ ಪ್ರಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲು ಯೋಜಿಸಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಧಾರ್ಮಿಕ ಶಿಕ್ಷಣದ ಮಾರ್ಗದರ್ಶಕರೂ, ಪ್ರೇರಕರೂ ಆದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ ಧರ್ಮ ಶಿಕ್ಷಣ ತರಗತಿ – ಧರ್ಮಾಭ್ಯುದಯವನ್ನು  ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಸ್ವಾಮೀಜಿಗಳು, ಹಿಂದೂ ಧರ್ಮವೆಂಬುದು ಅನಾದಿ ಕಾಲದಿಂದಲೂ ಬಂದ ಸನಾತನ ಧರ್ಮ. ಎಷ್ಟೇ ಜನ ಈ ಧರ್ಮವನ್ನು ನಾಶಗೊಳಿಸುತ್ತೇವೆಂದು ಅಂದುಕೊಂಡರೂ ಅದು

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು Read More »

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಕಡಬ: ತಾಲೂಕಿನ ಸವಣೂರು ಗ್ರಾಮದ ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್‍ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 12 ಸೋಮವಾರ ಬೆಳಿಗ್ಗೆ 9.30 ಕ್ಕೆ ಹಸಿರುಹೊರೆಕಾಣಿಕೆ ಸಮರ್ಪಣೆ, ಉಪಾಹಾರ, ಅಲಂಕಾರ ಸೇವೆ, ಸ್ವಚ್ಛತೆ, ಸಂಜೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ಕ್ಕೆ ಸಾರ್ವಜನಿಕ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹ ಪ್ರಾಸಾದ ಶುದ್ಧಿ,

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ Read More »

ಮೇ. 6 : ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ  ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 6 ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಮೆರವಣಿಗೆಯಲ್ಲಿ ಸಾಗಿ ಶ್ರೀ ದೇವಳಕ್ಕೆ ಹೊರೆಕಾಣಿಕೆ ಸಮರ್ಪಣೆ,  ಮಧ್ಯಾಹ್ನ 12.15 ರಿಂದ ತುಲಾಭಾರ ಸೇವೆ, ಮಧ್ಯಾಹ್ನ 1ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಲಿದೆ. ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, ಬೆಳಿಗ್ಗೆ

ಮೇ. 6 : ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕಾಣಿಯೂರು (ಮೇ. 11) : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮ| ಸತ್ಯನಾರಯಣ ಪೂಜೆ

ಕಾಣಿಯೂರು : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮದ ವತಿಯಿಂದ 49ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ನರಸಿಂಹ ಜಯಂತಿ, ವಿಶೇಷ ಪೂಜೆ ಮೇ.11 ಭಾನುವಾರದಂದು ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮೇ. 6 ಮಂಗಳವಾರದಿಂದ ಪ್ರತಿದಿನ ಸಂಜೆ 6ಗಂಟೆಯಿಂದ 9ಗಂಟೆಯವರೆಗೆ ಆಹ್ವಾನಿತ ಭಜನಾ ತಂಡಗಳಿಂದ ಸುವರ್ಣ ಸಂಭ್ರಮದ ಪ್ರಯುಕ್ತ ವಿಶೇಷ ಭಜನಾ ಸೇವೆ, ಶ್ರೀ ರಾಮತೀರ್ಥ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್‍ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮೇ.11 ಭಾನುವಾರ ಬೆಳಗ್ಗೆ

ಕಾಣಿಯೂರು (ಮೇ. 11) : ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ(ರಿ) ಕಾಣಿಯೂರು ಸುವರ್ಣ ಸಂಭ್ರಮ| ಸತ್ಯನಾರಯಣ ಪೂಜೆ Read More »

error: Content is protected !!
Scroll to Top