ಧಾರ್ಮಿಕ

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.26ರಂದು ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಲಿದೆ.  ಬಳಿಕ ಸಂಜೆ 7:30ಕ್ಕೆ ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖೆಯಲ್ಲಿ ಉತ್ಸವದಲ್ಲಿ ಭಾಗವಹಿಸಿ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ Read More »

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ

90 ಸಾವಿರ ಕೈದಿಗಳಿಗಾಗಿ ಜೈಲಿಗೆ ಹರಿಯಲಿದೆ ತ್ರಿವೇಣಿ ಸಂಗಮದ ಜಲ ಪ್ರಯಾಗ್‌ರಾಜ್‌: ಉತ್ತರ ಪ್ರದೇಶ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ. ಉತ್ತರ ಪ್ರದೇಶದ ಜೈಲು ಆಡಳಿತ ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಂಬಾರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಫೆ.13 ರಿಂದ ಫೆ. 21ರವರೆಗೆ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಫೆ.13ರಂದು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ನಡೆಯಿತು. ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಹಾಗೂ ಪರಮಪೂಜ್ಯ ರಾಜರ್ಷಿ ಡಾ| ಶ್ರೀ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್

ವಿಟ್ಲ : ಖಾಸಗಿ ಬಸ್‌ನಲ್ಲಿ ಹಾಕಿದ ಬೆಲೆಬಾಳುವ ಪಾರ್ಸೆಲ್‌ವೊಂದನ್ನು ಅಪರಿಚಿತರು ಬಸ್ ಡ್ರೈವರ್ ಬಳಿ ಕೇಳಿ ಕೊಂಡೊಯ್ದ ಘಟನೆ ವಿಟ್ಲದಲ್ಲಿ ನಡೆದಿದೆ. ಫೆ 13 ರಂದು ಬಿಸಿ ರೋಡಿನಿಂದ 12:45 ಕ್ಕೆ ಹೊರಡುವ ಫಾಲ್ಗುಣಿ (KA 20 AC 0719) ಬಸ್ಸಲ್ಲಿ ಬಿ ಸಿ ರೋಡ್ ಏಜೆಂಟ್ ಆದ ಭಾಸ್ಕರ್ ನ ಮುಖಾಂತರ ಸಂತೋಷ್ ಕೆಲಿಂಜ ಎಂಬವರ 15000 ಬೆಲೆಬಾಳುವ ಒಂದು ಪಾರ್ಸೆಲ್ ಕೆಲಿಂಜಕ್ಕೆ ಕಳುಹಿಸಲಾಗಿತ್ತು 1.15 ಕ್ಕೆ ಮುಟ್ಟಬೇಕಾದ ಬಸ್ 1.05 ಕ್ಕೆ ಕೆಲಿಂಜ ಮಾರ್ಗದಲ್ಲಿ

ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್ Read More »

ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ | ಜಾಗ ತೆರವುಗೊಳಿಸಲು ಹಣ ಪಡೆದರೆ ದೇವರ ಋಣ ಉಳಿದಂತೆ ಆಗುತ್ತದೆ | ರಕ್ತೇಶ್ವರಿ ದೇವಿಯ ಅನುಸ್ಮರಣೆ ಮೂಲಕ ಶಾಂತಗೊಳಿಸುವುದು ಅಗತ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಒಟ್ಟು ನಡೆಯಬೇಕಾದ ಅಭಿವೃದ್ಧಿಯ ಹಿನ್ನಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ್ ಆಡಳಿತ ಕಚೇರಿಯಲ್ಲಿ ನಡೆಯಿತು. ಜ್ಯೋತಿಷಿ ಪ್ರಸನ್ನ ಆಚಾರ್ಯ  ನಿಟ್ಟೆ ಅವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಿತು. ಬೆಳಗ್ಗೆ ಸುಮಾರು 10.30 ಕ್ಕೆ ಜ್ಯೋತಿಷಿ ಪ್ರಸನ್ನ ಆಚಾರ್ಯ ಅವರನ್ನು ಬ್ಯಾಂಡ್‍ ವಾದ್ಯಗಳೊಂದಿಗೆ ದೇವಸ್ಥಾನದ ಒಳಾಂಗಣಕ್ಕೆ ಸ್ವಾಗತಿಸಲಾಯಿತು. ಬಳಿಕ ಶ್ರೀ ದೇವಸ್ಥಾನದ ಗರ್ಭಗುಡಿ ಒಳಗೆ ಪ್ರವೇಶಿಸಿ ಪೂಜಾ ಕಾರ್ಯ ನೆರವೇರಿಸಿದರು. ಬಳಿಕ ದೇವಸ್ಥಾನದ

ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ | ಜಾಗ ತೆರವುಗೊಳಿಸಲು ಹಣ ಪಡೆದರೆ ದೇವರ ಋಣ ಉಳಿದಂತೆ ಆಗುತ್ತದೆ | ರಕ್ತೇಶ್ವರಿ ದೇವಿಯ ಅನುಸ್ಮರಣೆ ಮೂಲಕ ಶಾಂತಗೊಳಿಸುವುದು ಅಗತ್ಯ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವದಿ ಜಾತ್ರೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, 11 ರಿಂದ ಬೆಳಂದೂರು ಶ್ರೀ ಲಕ್ಷ್ಮಿ ಪ್ರಿಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆಯಲಾಯಿತು. 6ರಿಂದ ವೀರಮಂಗಲ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ದಾಸ ಸಂಕೀರ್ತನೆ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ Read More »

ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕುರಿತು ತಾಂಬೂಲ ಪ್ರಶ್ನೆ ಫೆ.16 ರಂದು ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ಬೆಳಿಗ್ಗೆ 9 ರಿಂದ ಸಂಜೆ ಗಂಟೆ 5 ರ ತನಕ ತಾಂಬೂಲ ಪ್ರಶ್ನೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ Read More »

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ

ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿದೊಡ್ಡ ಮಾನವ ಸಂಗಮ ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಿನ್ನೆಯ ತನಕ ದಾಖಲೆಯ 50 ಕೊಟಿಗೂ ಅಧಿಕ ಜನ ಪುಣ್ಯಸ್ನಾನ ಮಾಡಿದ್ದಾರೆ. ಮಹಾಕುಂಭ ಇನ್ನೂ ನಡೆಯುತ್ತಿದ್ದು, ಮಹಾಶಿವರಾತ್ರಿ ದಿನವಾದ ಫೆ.26ರ ಅಮೃತ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಈಗಾಗಲೇ 50 ಕೋಟಿಗೂ ಅಧಿಕ ಜನ ಪ್ರಯಾಗ್‌ರಾಜ್‌ಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜನವರಿ 13ರಂದು ಪ್ರಾರಂಭವಾದಾಗಿನಿಂದ ಪ್ರಯಾಗರಾಜ್‌ನಲ್ಲಿ ನಡೆದ ಮಹಾ

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ Read More »

ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವ | ಡಾ |ಡಿ.ವೀರೇಂದ್ರ ಹೆಗ್ಗಡೆಯವರಿಂದ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಮತ್ತು ಶೌರ್ಯ ಸದಸ್ಯರ ಕರ್ತವ್ಯಕ್ಕೆ  ಶ್ಲಾಘನೆ

ವಿಟ್ಲ: ಇಲ್ಲಿನ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವದ ಧಾರ್ಮಿಕ ಸಭೆ ಫೆ.13ರಂದು ನಡೆಯಿತು. ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವದ ಅಂಗವಾಗಿ ಕರ್ತವ್ಯ ನಿರ್ವಹಿಸಿದ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕರ್ತರು ಹಾಗೂ  ಶೌರ್ಯ ವಿಪತ್ತು ತಂಡದ ಸದಸ್ಯರಿಗೆ  ಪೂಜ್ಯ ವೀರೇಂದ್ರ ಹೆಗ್ಗಡೆಯವರು ಕರ್ತವ್ಯದ ಕುರಿತಾಗಿ ಶ್ಲಾಘನೆಯನ್ನು ವ್ಯಕ್ತಪಡಿಸಿದರು ಮಾತನಾಡಿದ ಅವರು ಶೌರ್ಯ ವಿಪತ್ತು ತಂಡ ಸಮಾಜಕ್ಕೆ  ಉಪಯುಕ್ತ ತಂಡ ಎಂದು ಹೇಳಿದರು. ಬಳಿಕ ಗ್ರಾಮಾಭಿವೃದ್ಧಿ

ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವ | ಡಾ |ಡಿ.ವೀರೇಂದ್ರ ಹೆಗ್ಗಡೆಯವರಿಂದ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಮತ್ತು ಶೌರ್ಯ ಸದಸ್ಯರ ಕರ್ತವ್ಯಕ್ಕೆ  ಶ್ಲಾಘನೆ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ

ವೀರಮಂಗಲ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದಲ್ಲಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ಹಿರಿತನದಲ್ಲಿ ವರ್ಷಾವದಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮ ಫೆ.15ರಂದು ನಡೆಯಲಿದೆ. ಬೆಳಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 11ರಿಂದ ಶ್ರೀ ಲಕ್ಷ್ಮೀ ಪ್ರಿಯ ಭಜನಾ ಮಂಡಳಿ ಬೆಳಂದೂರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ.  ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಸಂಜೆ 5 ಗಂಟೆಗೆ ದೈವಗಳ ಭಂಡಾರ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ Read More »

error: Content is protected !!
Scroll to Top