ಧಾರ್ಮಿಕ

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ. ಸಂಯೋಜನೆಯಲ್ಲಿ ಶ್ರೀ ಮಹಾಭಾರತ ಸರಣಿಯ 113 ನೇ ತಾಳಮದ್ದಳೆ ಕರಂಡಕಾಸುರ ಕಾಳಗ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ದೇವಿ ಪ್ರಸಾದ ಆಚಾರ್ಯ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ್ತ ಪಾಂಗಣ್ಣಾಯ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ), ದಿನೇಶ್ ಭಟ್ ಬಳೆಂಜ (ಅರ್ಜುನ), ಶ್ರುತಿ ವಿಸ್ಮಿತ್ (ಶುಕತುಂಡ), ಅಂಬಾ ಪ್ರಸಾದ್ ಪಾತಾಳ (ಕಲುಷಗಾಮಿನಿ), […]

ಕರಾಯ ಬ್ರಹ್ಮಕಲಶದಲ್ಲಿ ಕರಂಡಕಾಸುರ ಕಾಳಗ ತಾಳಮದ್ದಳೆ Read More »

ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ

ಶ್ರೀ ವಿಷ್ಣುಮೂರ್ತಿ ವಯನಾಟ್‌ ಕುಲವನ್‌ ದೈವಸ್ಥಾನ ವಿಟ್ಲ: ಕನ್ಯಾನದ ಸಮೀಪ ಕುಟ್ಟಿತಡ್ಕದಲ್ಲಿರುವ ಶ್ರೀ ವಿಷ್ಣುಮೂರ್ತಿ ವಯನಾಟ್‌ ಕುಲವನ್‌ ಕ್ಷೇತ್ರದ ವಾರ್ಷಿಕ ಕೆಂಡಸೇವೆ ಮೇ 2ರಂದು ಜರುಗಲಿದೆ. ಬೆಳಗ್ಗೆ 6ಕ್ಕೆ ಮೆಲೇರಿ ರಚನೆ, ಸಂಜೆ 6ಕ್ಕೆ ದೀಪ ಪ್ರಜ್ವಲನೆ, 7ಕ್ಕೆ ವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ 7.30ಕ್ಕೆ ಭಂಡಾರ ತೆಗೆಯುವುದು, 8ಕ್ಕೆ ಮೆಲೇರಿಗೆ ಅಗ್ನಿಸ್ಪರ್ಶ, 10ಕ್ಕೆ ಅನ್ನ ಸಂತರ್ಪಣೆ, ರಾತ್ರಿ 12ರಿಂದ ಕುಳಿಚ್ಚಾಟಂ ದರ್ಶನ, ಮೇ 3ರಂದು ಮುಂಜಾನೆ 4ಕ್ಕೆ ವಿಷ್ಣುಮೂರ್ತಿ ದೈವದ ಕೆಂಡಸೇವೆ, ಬೆಳಗ್ಗೆ 5ಕ್ಕೆ

ಮೇ 2ರಂದು ಕನ್ಯಾನ ಕುಟ್ಟಿತಡ್ಕ ಕ್ಷೇತ್ರದಲ್ಲಿ ಕೆಂಡಸೇವೆ Read More »

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಮಹೇಶ ಮರ್ದಿನಿ ಯಕ್ಷಕಲಾ ಪ್ರತಿಷ್ಠಾನ (ರಿ )ಚಾರ – ಹೆಬ್ರಿ ಸಂಯೋಜನೆಯಲ್ಲಿ ಚಾರ ಪ್ರದೀಪ ಹೆಬ್ಬಾರ್ ರಚಿತ ಉಲೂಪಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ದೇವಿ ಪ್ರಸಾದ್ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥಧಾರಿಗಳಾಗಿ ಶ್ರೀಧರ ಎಸ್. ಪಿ. ಕೃಷ್ಣಾಪುರ (ಅರ್ಜುನ), ದಿವಾಕರ ಆಚಾರ್ಯ ಗೇರುಕಟ್ಟೆ(ಉಲೂಪಿ), ಸಂಜೀವ ಪಾರೆಂಕಿ (ಕೌರವ್ಯ), ಚಾರ ಪ್ರದೀಪ ಹೆಬ್ಬಾರ್( ದೃತರಾಷ್ಟ್ರ) ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ Read More »

ವಿಜೃಂಭಣೆಯಿಂದ ನಡೆದ ಪುತ್ತೂರು ಜಾತ್ರೆ: ಪಂಜಿಗುಡ್ಡೆ ಈಶ್ವರ ಭಟ್‌ಗೆ ಡಾ. ಪ್ರಸಾದ್ ಭಂಡಾರಿ ಪತ್ರ

ಪುತ್ತೂರು: ಈ ಬಾರಿ ನಡೆದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ನಡೆದಿದೆ.‌ ಈ ಬಗ್ಗೆ ಪುತ್ತೂರಿನ ಪ್ರಸಿದ್ಧ ಡಾಕ್ಟರ್ ಪ್ರಸಾದ್ ಭಂಡಾರಿ ಅವರು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಈ ಬಾರಿಯ ಜಾತ್ರೆ ಸೂಪರ್. ಬಹಳ ವಿಜೃಂಭಣೆಯಿಂದ ನಡೆದಿದೆ. ಇಷ್ಟು ಗ್ರಾಂಡ್ ಆಗಿ ಎಂದೂ ಜಾತ್ರೆ ನಡೆದಿಲ್ಲ. ಎಲ್ಲರಿಗೂ ಕಾಫಿ, ತಿಂಡಿ, ಊಟ, ಅದೂ ತಿನ್ನುವಷ್ಟು. ಯಾವಾಗಲೂ ನೀವೇ ಆಡಳಿತ ನಡೆಸಿದಲ್ಲಿ ಒಳ್ಳೆಯದು. ದೇವರು

ವಿಜೃಂಭಣೆಯಿಂದ ನಡೆದ ಪುತ್ತೂರು ಜಾತ್ರೆ: ಪಂಜಿಗುಡ್ಡೆ ಈಶ್ವರ ಭಟ್‌ಗೆ ಡಾ. ಪ್ರಸಾದ್ ಭಂಡಾರಿ ಪತ್ರ Read More »

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ, ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ Read More »

ಹಿಂದೂಗಳಿಗೆ ಚಾರ್ ಧಾಮ್ ಯಾತ್ರೆ ಆರಂಭ

ನವದೆಹಲಿ: ಇದೇ ಮೊದಲ ಬಾರಿಗೆ ಹಿಂದೂಯೇತರರನ್ನು ಹೊರತುಪಡಿಸಿ ಹಿಂದೂಗಳಿಗೆ ಮಾತ್ರ ಚಾರ್‌ಧಾಮ್ ಯಾತ್ರೆ ಆರಂಭವಾಗಿದೆ. ಈ ಬಾರಿ ಹಸಿರು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಯಾತ್ರಾರ್ಥಿಗಳು ಇದಕ್ಕೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಗಂಗೋತ್ರಿ ಮತ್ತು ಯಮುನೋತ್ರಿ ದ್ವಾರಗಳು ತೆರೆದಿದ್ದು, ಭಕ್ತರು ದೇವರ ದರ್ಶನಕ್ಕಾಗಿ ಕಾತರರಾಗಿದ್ದಾರೆ. ಇನ್ನು ಸನಾತನ ಹಿಂದೂ ಧರ್ಮೀಯರನ್ನು ಹೊರತು ಪಡಿಸಿ ಇನ್ನುಳಿದವರು ದೇವಾಲಯಕ್ಕೆ ಪ್ರವೇಶಿಸಬೇಕು ಎಂದು ಬಯಸಿದರೆ ಗೋಮೂತ್ರ, ಸಗಣಿ, ಹಾಲು, ಮೊಸರು, ತುಪ್ಪದ ಮಿಶ್ರಣವಾದ ಪಂಚಗವ್ಯ ಸೇವನೆ ಮಾಡಬೇಕು ಎಂದು ತಿಳಿಸಿದೆ. ಹಿಂದೂಯೇತರರು

ಹಿಂದೂಗಳಿಗೆ ಚಾರ್ ಧಾಮ್ ಯಾತ್ರೆ ಆರಂಭ Read More »

ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್

ಗೇರುಕಟ್ಟೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಎಸ್. ಡಿ. ಎಂ. ಸಿ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ದಾನಿಗಳ ಸಹಕಾರದಿಂದ ನಿರ್ಮಿಸಲಾದ ನೂತನ ತರಗತಿ ಕೊಠಡಿಯನ್ನು ಕಳಿಯ ಸಿ.ಎ. ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಖ್ಯ ಅತಿಥಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ್ ಜೈನ್ ಮಾತನಾಡಿ, ಹಣ, ಆಸ್ತಿ ಇದ್ದವರು ಶ್ರೀಮಂತರು ಎಂದು ಭಾವಿಸುವ ಕಾಲವೊಂದಿತ್ತು. ಆದರೆ ಸವಾಲುಗಳನ್ನು ಎದುರಿಸಿ

ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್ Read More »

ಬಯಲಾಟ ನೋಡುತ್ತಿದ್ದವರ ಮೇಲೆ ಸಿಮೆಂಟ್ ಬೋರ್ಡ್ ಬಿದ್ದು ಎರಡು ಸಾವು, ನಾಲ್ವರಿಗೆ ಗಾಯ

ರಾಯಚೂರು: ಬಯಲಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಚ ಘಟನೆ ನಡೆದಿದ್ದು, ಇದರಿಂದಾಗಿ ಇನ್ನಿಬ್ಬರು ಕಾಲುಗಳನ್ನೇ ಕಳೆದುಕೊಂಡಿದ್ದಾರೆ. ಬೈಲ್ ಮರ್ಚಡ್ ಗ್ರಾಮದಲ್ಲಿ ಹಳೆಯ ಕಟ್ಟಡ ಒಂದರ ಸಿಮೆಂಟ್ ಬೋರ್ಡ್ ಕುಸಿದು ಈ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳ ಪ್ರಾಣವೇ ಹೋಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಯಲಾಟವನ್ನು ಗ್ರಾಮಸ್ಥರು ಗ್ರಾಮದ ಚಾವಡಿ ಕಟ್ಟೆಯ ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಹಳೆಯದಾಗಿದ್ದ ಚಾವಡಿ ಕಟ್ಟಡದ ಮೇಲ್ಬಾಗದಲ್ಲಿದ್ದ ಸಿಮೆಂಟ್‌ನ ನಾಮಫಲಕದ ಬೋರ್ಡ್

ಬಯಲಾಟ ನೋಡುತ್ತಿದ್ದವರ ಮೇಲೆ ಸಿಮೆಂಟ್ ಬೋರ್ಡ್ ಬಿದ್ದು ಎರಡು ಸಾವು, ನಾಲ್ವರಿಗೆ ಗಾಯ Read More »

ಧಾರ್ಮಿಕ ಕೇಂದ್ರಗಳು ಎಲ್ಲರನ್ನು ಏಕ ಸೂತ್ರದಲ್ಲಿ ಬಂಧಿಸುತ್ತದೆ: ಎಡನೀರು ಶ್ರೀ

ಉಪ್ಪಿನಂಗಡಿ: ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಯಜ್ಞ ಯಾಗಾದಿಗಳು ಆ ಕ್ಷೇತ್ರಕ್ಕೆ ಮಾತ್ರ ಸಂಬಂಧಪಡದೆ ಲೋಕ ಕಲ್ಯಾಣದ ದೃಷ್ಟಿಯಿಂದ ನಡೆಯುತ್ತದೆ. ಎಲ್ಲಾ ಭೇದ ಭಾವವನ್ನು ಮರೆತು ನಾವು ಮಾಡುವ ಪ್ರಾರ್ಥನೆಯಿಂದ ಸಮಾಜಕ್ಕೆ ಭಗವದನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಗಳು ಆಶೀರ್ವಚನದಲ್ಲಿ ತಿಳಿಸಿದರು. ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರಗಿದ ಶ್ರೀ ಮಹಾವಿಷ್ಣುಯಾಗ ಸಂದರ್ಭದಲ್ಲಿ ದೇವಸ್ಥಾನದ ಹೊರಾಂಗಣಕ್ಕೆ ಶಾಶ್ವತ ಮೇಲ್ಚಾವಣಿ ಅಳವಡಿಸುವ ಕಾರ್ಯಕ್ಕೆ ಅವರು ಚಾಲನೆಯನ್ನು ನೀಡಿದರು. ಬಾರ್ಯ ಶ್ರೀ ಪಾಂಡುರಂಗ ಭಜನಾ ಮಂದಿರದ

ಧಾರ್ಮಿಕ ಕೇಂದ್ರಗಳು ಎಲ್ಲರನ್ನು ಏಕ ಸೂತ್ರದಲ್ಲಿ ಬಂಧಿಸುತ್ತದೆ: ಎಡನೀರು ಶ್ರೀ Read More »

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ರಿ. ಉಪ್ಪಿನಂಗಡಿ ಸುವರ್ಣ ಮಾಹೋತ್ಸವದ ಶ್ರೀ ಮಹಾಭಾರತ ಸರಣಿಯಲ್ಲಿ 111ನೇ ತಾಳಮದ್ದಳೆಯಾಗಿ ಘಟೋತ್ಕಚ ವಿವಾಹಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಕವಿ ಗುಂಡು ಸೀತಾರಾಮ್ ರಾವ್ ತಲವಾಟ ರಚಿತ ಚಕ್ರ ಚಂಡಿಕೆ ಪ್ರಸಂಗದಿಂದ ಆಯ್ದ ಆಖ್ಯಾನದಲ್ಲಿ ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳoತಿಲ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ. ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ನೇರೆಂಕಿ(ಮೌರ್ವಿ) ಶ್ರೀಧರ ಎಸ್.

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ Read More »

error: Content is protected !!
Scroll to Top