ಧಾರ್ಮಿಕ

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ಶಾಂತಿಮೊಗರು ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜು.3 ಸೋಮವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.  ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

ಪುತ್ತೂರು : ಧರ್ಮ ಆಧಾರಿತ ರಾಜಕಾರಣ ಇರಬೇಕೆಂಬ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಅವರು ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ಶ್ರೀ ಶನೈಶ್ಚರ ಪೂಜೆಯ ಅಂಗವಾಗಿ ಹಮ್ಮಿಕೊಂಡ ಧಾರ್ಮಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಮಾತನಾಡಿ, ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡಲಿದೆ ಎಂದರು. ಈ

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅತೀ ಮುಖ್ಯವಾದ ಶ್ರೀಗಂಧವನ್ನು ಶನಿವಾರ ಸಮರ್ಪಿಸಲಾಯಿತು. ಸರಕಾರದ ಸಬ್ಸಿಡಿ ದರದಲ್ಲಿ ಸುಮಾರು 20 ಕೆ.ಜಿ. ಶ್ರೀಗಂಧದ ಕೊರಡುಗಳು ಶ್ರೀ ದೇವಸ್ಥಾನಕ್ಕೆ ಸಮರ್ಪಣೆಯಾದವು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್‍, ರಾಮದಾಸ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ. ಉಪಸ್ಥಿತರಿದ್ದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿ ಭೇಟಿ

ನರಿಮೊಗರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗೆ ಎಡನೀರು ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿಯವರು  ಜೂ.29ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಶೀರ್ಚನ ನೀಡಿದ ಶ್ರೀಗಳು, ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಹೊಂದಬೇಕು. ಇಂದಿನ ಶಿಕ್ಷಣವು ರಾಜಕೀಯಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಹಿಂದಿನ ಕಾಲದಲ್ಲಿ ಶಿಕ್ಷಣವು ಪುರಾಣಗಳನ್ನು ಸಂಬಂಧಿಸಿದ ಪಠ್ಯಕ್ರಮವಿತ್ತು. ಮನುಷ್ಯ ನಾಗಿ ಹುಟ್ಟುವುದು, ಉತ್ತಮ ಶಿಕ್ಷಣ, ವಿನಯ ದಿಂದ ಕೂಡಿದ ಜೀವನ ಪಡೆಯುವುದು ತುಂಬಾ ಸೌಭಾಗ್ಯಯುತವಾದುದು,ಎಲ್ಲರೂ ಸಂಸ್ಕಾರವನ್ನು ಬೆಳೆಸಿ ಉಳಿಸಿ ಉತ್ತಮ ಪ್ರಜೆಯಾಗಿ ಬಾಳಿ ಎಂದರು.

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿ ಭೇಟಿ Read More »

ತಪ್ತ ಮುದ್ರಧಾರಣೆ ಕಾರ್ಯಕ್ರಮ

ಪುತ್ತೂರು : ಪುತ್ತೂರು ತಾಲೂಕಿನ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನೆರವೇರಿಸಸಿದರು ಈ ಸಂದರ್ಭದಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಾಲ್ಗೊಂಡು ಮುದ್ರಾ ಧಾರಣೆ ಮಾಡಿಸಿಕೊಂಡು ಶ್ರೀ ದೇವರ ಹಾಗೂ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ತಪ್ತ ಮುದ್ರಧಾರಣೆ ಕಾರ್ಯಕ್ರಮ Read More »

ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು

ಪುತ್ತೂರು : ಸಂಭ್ರಮದ ಬಕ್ರೀದ್ ಹಬ್ಬವನ್ನು ಗುರುವಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸಿದರು. ಬ್ರಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಹೊಸ ಬಟ್ಟೆ ಧರಿಸಿ ಆಯಾ ತಾಲೂಕು, ವಲಯ ಪ್ರಾರ್ಥನಾ ಮಂದಿರಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಸೀದಿಗಳಲ್ಲಿ ಧರ್ಮಗುರುಗಳು ಸಂದೇಶ ನೀಡಿದರು. ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ಕೋರಿದರು. ಪುತ್ತೂರು ನಗರದಲ್ಲಿ ಹಬ್ಬದ ಹಿನ್ನಲೆಯಲ್ಲಿ ಜನಸಂಖ್ಯೆ ಭಾರೀ ವಿರಳ ಇದ್ದುದು ಕಂಡು ಬಂದಿದ್ದು, ಬಹುತೇಕ ಮುಸ್ಲಿಂ ಬಾಂಧವರು ತಮ್ಮ ಅಂಗಡಿ

ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು Read More »

ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನೂತನ ಅನ್ನಛತ್ತಕ್ಕೆ ದಾರಂದ ಮುಹೂರ್ತ ಜೂ.28 ರಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ನವರತ್ನವನ್ನು ದ್ವಾರ ಇಡುವಲ್ಲಿ ನ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು. ದೇವಳದ ಪ್ರಧಾನ ಅರ್ಚಕ ವೈದಿಕ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಧಾರ್ಮಿಕ ಪರಿಷತ್

ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ Read More »

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು,

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ

ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಗಿಡಗಳಿಂದ ವಿಶಿಷ್ಟವಾದ ತುಲಾಭಾರ ಸೇವೆ ಸಲ್ಲಿಸುವ ಮೂಲಕ ವಿನೂತನ ಪರಂಪರೆಗೆ ನಾಂದಿ ಹಾಡಲಾಯಿತು. ಹಿರಿಯ ವಿದ್ವಾಂಸ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ತನ್ನ ನಿವಾಸದಲ್ಲಿ ಸ್ವಾಮೀಜಿಯವರಿಗೆ ವೃಕ್ಷ, ಬೀಜ, ಸಸಿಗಳಿಂದ ಕೂಡಿದ ಹಲಸು, ಮಾವು, ಹರಿವೆ, ಅಲಸಂಡೆ, ಹಾಗಲ, ತುಂಬೆ ಮುಂತಾದ ಸಸಿಗಳಿಂದ ತುಲಾಭಾರ ನೆರವೇರಿತು. ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಭಕ್ತರೂ ತುಲಾಭಾರ ಸಸಿಗಳನ್ನು ತಂದಿದ್ದರು. ತುಲಾಭಾರದ ಬಳಿಕ ಈ ಗಿಡಗಳನ್ನು ಭಕ್ತರಿಗೆ

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ Read More »

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆಯು ಜೂ.25 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಶ್ರದ್ಧಾ ಕೇಂದ್ರಗಳನ್ನು ಭಕ್ತಿ ಶ್ರದ್ಧೆಯಿಂದ ಬೆಳೆಸಬೇಕು.ಇದರಿಂದ ಗ್ರಾಮದಲ್ಲಿ ಶಾಂತಿ,ಸೌಹಾರ್ದತೆ  ನೆಲೆಸಲು ಸಾಧ್ಯ.ಬ್ರಹ್ಮರಥದ ನಿರ್ಮಾಣ ಕೆಲಸ ನಡೆಯುತ್ತಿದ್ದು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಕ್ಷೇತ್ರದ ಶಿಲ್ಪಿಗಳಾದ ಮಹೇಶ ಮುನಿಯಂಗಳ ಅವರು ರಥ ನಿರ್ಮಾಣದ ರೂಪುರೇಷೆಗಳ

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ Read More »

error: Content is protected !!
Scroll to Top