ಧಾರ್ಮಿಕ

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ

ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ವ್ಯಾಘ್ರ ಚಾಮುಂಡಿ ದೈವಸ್ಥಾನ ಕೊರತಿಕಟ್ಟೆ ಮಾಡತ್ತಾರು ಕ್ಷೇತ್ರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ದ ಅಂಗವಾಗಿ ಕ್ಷೇತ್ರದಲ್ಲಿ  ಸ್ವಚ್ಛತೆಗಾಗಿ ಶ್ರಮದಾನ ಮಾಡಲಾಯಿತು. ದೇವಸ್ಥಾನದ ಸುತ್ತಮುತ್ತಲು ಗಿಡಗಂಟಿಗಳನ್ನು ತೆರವುಗೊಳಿಸಿ, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛತೆ ಮಾಡಲಾಯಿತು. ಶ್ರಮದಾನದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಜಯಶ್ರೀ, ಸಂಯೋಜಕಿ ಅಸ್ಮಿತಾ ಮತ್ತು ಶೌರ್ಯ  ಘಟಕದ  ಸದಸ್ಯರಾದ ರಮೇಶ್, ಗಿರೀಶ್, ಹರೀಶ್, […]

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ Read More »

ಮಾ.4 : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯಿಂದ 10ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ, ಧಾರ್ಮಿಕ ಸಭೆ

ಪುತ್ತೂರು : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ವತಿಯಿಂದ 10 ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ ಮತ್ತು ಧಾರ್ಮಿಕ ಸಭೆ ಮಾ. 4 ಶನಿವಾರ ಸಂಜೆ ಗಂಟೆ 5:30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ಗಂಟೆ 9ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅವರಿಂದ ತುಳು ಹಾಸ್ಯಮಯ ನಾಟಕ “ಮಲ್ಲ ಸಂಗತಿಯೇ ಅತ್ತ್” ಪ್ರದರ್ಶನಗೊಳ್ಳಲಿದೆ ಎಂದು ಹಿಂಜಾವೇ

ಮಾ.4 : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯಿಂದ 10ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ, ಧಾರ್ಮಿಕ ಸಭೆ Read More »

ಏ.2 ಹಾಗೂ 3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಪೂರ್ವಭಾವಿ ಸಭೆ | ಸಮಿತಿ ರಚನೆ

ಪುತ್ತೂರು : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇಸ್ಥಾನದಲ್ಲಿ ಏ.2 ಹಾಗೂ 3 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಪೂರ್ವಬಾವಿ ಸಭೆ ಹಾಗೂ ನೂತನ ಸಮಿತಿ ರಚನೆ ಸೋಮವಾರ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವವನ್ನು ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಈ ಕುರಿತು ಭಕ್ತಾದಿಗಳ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿ, ಅರ್ಚಕ ರಾಮಕೃಷ್ಣ ಭಟ್, ರಾಮಕೃಷ್ಣ ಭಟ್ ಗುಂಡಿಬೈಲ್, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ಹೋನಪ್ಪ ಗೌಡ

ಏ.2 ಹಾಗೂ 3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಪೂರ್ವಭಾವಿ ಸಭೆ | ಸಮಿತಿ ರಚನೆ Read More »

ಯಕ್ಷರಂಗದ ದಿಗ್ಗಜ ಡಾ.ಶ್ರೀಧರ ಭಂಡಾರಿ ಅವರ 2ನೆ ವರ್ಷದ ಅನುಸ್ಮರಣಾ ಕಾರ್ಯಕ್ರಮ | ಯಕ್ಷದೇಗುಲ ಪ್ರಶಸ್ತಿ ಪ್ರದಾನ | ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಪುತ್ತೂರು : ಯಕ್ಷಗಾನ ಅಕಾಡೆಮಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷರಂಗದ ದಿಗ್ಗಜ ಪುತ್ತೂರು ಡಾ.ಶ್ರೀಧರ್‍ ಭಂಡಾರಿ ಅವರ 2ನೇ ವರ್ಷದ ಅನುಸ್ಮರಣಾ ಕಾರ್ಯಕ್ರಮ ಹಾಗೂ ಡಾ.ಶ್ರೀಧರ ಭಂಡಾರಿ “ಯಕ್ಷದೇಗುಲ” ಪ್ರಶಸ್ತಿ ಪ್ರದಾನ, ಯಕ್ಷ ರಕ್ಷಾ ನಿಧಿ ವಿತರಣೆ ಭಾನುವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಿತು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಿ, ಶ್ರೀಧರ ಭಂಡಾರಿಯವರ ನೆನಪುಗಳು ಇನ್ನೂ ಹಸಿರಾಗಿರುವುದಕ್ಕೆ ಅವರು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ, ಪಡೆದ ಸಾಧನೆ

ಯಕ್ಷರಂಗದ ದಿಗ್ಗಜ ಡಾ.ಶ್ರೀಧರ ಭಂಡಾರಿ ಅವರ 2ನೆ ವರ್ಷದ ಅನುಸ್ಮರಣಾ ಕಾರ್ಯಕ್ರಮ | ಯಕ್ಷದೇಗುಲ ಪ್ರಶಸ್ತಿ ಪ್ರದಾನ | ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ Read More »

ಹಿಂದೂ ಸಮಾಜ ಹೆಮ್ಮೆಪಡುವಂತಹ ಕಾರ್ಯಕ್ರಮ | ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಕೃತಜ್ಞತಾ ಸಭೆ | ಒಗ್ಗಟ್ಟಿನ ಕಾರ್ಯಕ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಗೌಡ ಸಮುದಾಯ ಹಿಂದೂ ಸಮಾಜದ ಒಂದು ಕೊಂಬೆ. ಮರಕ್ಕೆ ಎಲ್ಲಿಯೂ ತೊಂದರೆ ಆಗದಂತೆ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವವನ್ನು ಗೌಡ ಸಮುದಾಯದ ಸಮಾವೇಶದಂತೆ ಮಾಡಿರುವುದು ಉತ್ತಮ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಫೆ. 19ರಂದು ನಡೆದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮದ ಕೃತಜ್ಞತೆ ಸಭೆಯಲ್ಲಿ ಅವರು ಮಾತನಾಡಿದರು. ಒಂದು ದೇವಸ್ಥಾನಕ್ಕೆ

ಹಿಂದೂ ಸಮಾಜ ಹೆಮ್ಮೆಪಡುವಂತಹ ಕಾರ್ಯಕ್ರಮ | ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಕೃತಜ್ಞತಾ ಸಭೆ | ಒಗ್ಗಟ್ಟಿನ ಕಾರ್ಯಕ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವವು ಫೆ 18 ಶನಿವಾರ ನಡೆಯಿತು. ದೇವಸ್ಥಾನದ ಅನುವಂಶಿಕ ಮೊಕ್ತೇಸರರು, ಅರ್ಚಕರು ಆಗಿರುವ ಜನೇಶ್ ಭಟ್ ಬರೆಪ್ಪಾಡಿಯವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಾನಗಳು ನಡೆಯಿತು. ಸಂಜೆ ಭಜನಾ ಕಾರ್ಯಕ್ರಮ, ಶ್ರೀ ದೇವರಿಗೆ 108 ಸೀಯಾಳ ಅಭಿಷೇಕ, ರುದ್ರಾಭಿಷೇಕ, ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ,

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »

ಫೆ.25 : ವಿಜಯನಗರ ಓಟೆಪಡ್ಪು ಕ್ಷೇತ್ರಾಭಿವೃದ್ಧಿ ಸೇವಾ ವಿಶ್ವಸ್ಥ ನಿಧಿಯ 32ನೇ ವರ್ಷದ ವಾರ್ಷಿಕೋತ್ಸವ | ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ವಿಜಯನಗರ ಓಟೆಪಡ್ಪು ಕ್ಷೇತ್ರಾಭಿವೃದ್ಧಿ ಸೇವಾ ವಿಶ್ವಸ್ಥ ನಿಧಿಯ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.25 ಶನಿವಾರ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹವನ, ಸಂಜೆ 7 ಕ್ಕೆ ಪೂಜೆ ಆರಂಭ, 7.30 ಕ್ಕೆ ಅಳಿಕೆ ಶ್ರೀ ಸ್ಕಂದ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ ನಡೆಯಲಿದೆ. ರಾತ್ರಿ 9 ಕ್ಕೆ ಮಹಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ

ಫೆ.25 : ವಿಜಯನಗರ ಓಟೆಪಡ್ಪು ಕ್ಷೇತ್ರಾಭಿವೃದ್ಧಿ ಸೇವಾ ವಿಶ್ವಸ್ಥ ನಿಧಿಯ 32ನೇ ವರ್ಷದ ವಾರ್ಷಿಕೋತ್ಸವ | ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಪುತ್ತೂರ ಒಡೆಯನ ಆಲಯದಲ್ಲಿ ಮಹಾಶಿವರಾತ್ರಿ ಜಾಗರಣೆ | ಅಷ್ಠಾವಧಾನ ಸೇವೆ | ರಾತ್ರಿ ಪಲ್ಲಕಿ ಉತ್ಸವ, ಬಂಡಿ ಉತ್ಸವ, ತೆಪ್ಪೋತ್ಸವ | ಹರಿದು ಬಂದ ಜನಸಾಗರ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರದ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಸಂಜೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬಳಿಕ ಕಂಡನಾಯಕ ಕಟ್ಟೆಯಲ್ಲಿ ಪೂಜೆ ನಡೆದು ಪಲ್ಲಕಿ ಉತ್ಸವ ನಡೆಯಿತು. ಬಳಿಕ ರಾತ್ರಿ ೯ ಗಂಟೆಯಿಂದ ಅಷ್ಠಾವಧಾನ ಸೇವೆ ಜರಗಿತು. ಸಂಜೆ ದೇವರ ಬಲಿ ಉತ್ಸವದ ಮೊದಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಹೊರಾಂಗಣದಲ್ಲಿ ಘೋಷ್

ಪುತ್ತೂರ ಒಡೆಯನ ಆಲಯದಲ್ಲಿ ಮಹಾಶಿವರಾತ್ರಿ ಜಾಗರಣೆ | ಅಷ್ಠಾವಧಾನ ಸೇವೆ | ರಾತ್ರಿ ಪಲ್ಲಕಿ ಉತ್ಸವ, ಬಂಡಿ ಉತ್ಸವ, ತೆಪ್ಪೋತ್ಸವ | ಹರಿದು ಬಂದ ಜನಸಾಗರ Read More »

ಫೆ.28 : ಬದೆಂಜ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು : ರಾಮಕುಂಜ ಗ್ರಾಮದ ಬದೆಂಜ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಫೆ.28 ರಂದು ನಡೆಯಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರೀಯವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. ಎಂದು ದೇವಸ್ಥಾನದ  ಪ್ರಕಟಣೆ ತಿಳಿಸಿದೆ.

ಫೆ.28 : ಬದೆಂಜ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಒಂದನೇ ಮಖೆಕೂಟ | ಭಕ್ತಾದಿಗಳಿಂದ ಉದ್ಭವ ಲಿಂಗಕ್ಕೆ ಸ್ವಯಂ ಅಭಿಷೇಕ

ಪುತ್ತೂರು : ದಕ್ಷಿಣ ಕಾಶಿ ಎಂದು ಕರೆಯುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಒಂದನೇ ಮಖೆಕೂಟದ ಅಂಗವಾಗಿ ನೇತ್ರಾವತಿ ನದಿಯಲ್ಲಿರುವ ಉದ್ಭವ ಲಿಂಗದ ಬಳಿ ಸ್ವಯಂ ಲಿಂಗಾಭಿಷೇಕ ಸೇವೆ ಶನಿವಾರ ನಡೆಯಿತು. ಬೆಳಿಗ್ಗೆಯಿಂದಲೇ ಊರ-ಪರವೂರಿನಿಂದ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಉದ್ವವ ಲಿಂಗಕ್ಕೆ ಎಕ್ಕದ ಹೂ ಸಹಿತ ವಿವಿಧ ಹೂವುಗಳಿಂದ ಹಲವು ಬಗೆಯ ಅಲಂಕಾರ ಮಾಡಿ ತಮ್ಮಕೈಯಾರೆ ಜಲಾಭಿಷೇಕ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಮರ್ಪಿಸಿದರು. ಶನಿವಾರ ಆರಂಭಗೊಂಡ ಅಖಂಡ ಭಜನಾ ಸೇವೆ ಭಾನುವಾರ ಸೂರ್ಯೋದಯದ ತನಕ ನಡೆಯಿತು. ಸಂಜೆ

ದಕ್ಷಿಣ ಕಾಶಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಒಂದನೇ ಮಖೆಕೂಟ | ಭಕ್ತಾದಿಗಳಿಂದ ಉದ್ಭವ ಲಿಂಗಕ್ಕೆ ಸ್ವಯಂ ಅಭಿಷೇಕ Read More »

error: Content is protected !!
Scroll to Top