ಧಾರ್ಮಿಕ

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ

ಪುತ್ತೂರು: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಆರ್ಯಾಪು ಗ್ರಾಮದ ಕೋಟ್ಲಾರು ನಿವಾಸಿ ಚನಿಯಪ್ಪ ನಾಯ್ಕ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ನೀಡಲಾಯಿತು. ತಾಲೂಕು ಯೋಜನಾಧಿಕಾರಿ ಶಶಿಧರ್ ವೀಲ್ ಚೇರ್ ವಿತರಿಸಿದರು. ಸೇವಾಪ್ರತಿನಿಧಿ ಆಶಾಲತಾ, ಶೌರ್ಯ ಘಟಕದ ಬಲ್ನಾಡು ಪ್ರತಿನಿಧಿ ವಿನಯ ನಾಯ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.

ಧರ್ಮಸ್ಥಳದ ಜನಮಂಗಳ ಯೋಜನೆಯಡಿ ವೀಲ್ ಚೇರ್ ಕೊಡುಗೆ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ

ಕಡಬ: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ ೧೧ರಿಂದ ಜೂ ೧೩ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ  ನಡೆಯಿತು. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯ ಇವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ನೆರವೇರಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಆಡಳಿತ ಮೊಕ್ತೇಸರ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಸುದರ್ಶನ ಹೋಮ Read More »

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

ಚಿಕ್ಕಬಳ್ಳಾಪುರ: ಪುರಾತನ ದೇವಾಲಯದ ಒಳಗಡೆ ರಕ್ತ ಹಾಗೂ ಮಾಂಸ ಹಾಕಿ, ಅಪವಿತ್ರಗೊಳಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಿಂದ ವರದಿಯಾಗಿದೆ. ರಕ್ತದ ಕೋಡಿ ದೇವರ ಮೂರ್ತಿಯ ಪಾದದವರೆಗೂ ಚೆಲ್ಲಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬ್ಯಾಟರಾಯ ಸ್ವಾಮಿ ದೇವಸ್ಥಾನದ ಕಿಟಕಿಯಿಂದ ರಕ್ತ, ಮಾಂಸವನ್ನು ಚೆಲ್ಲಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ, ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುರಾತನ ದೇವಳದ ಗರ್ಭಗುಡಿಯೊಳಗೆ ರಕ್ತ, ಮಾಂಸದ ಕೋಡಿ | ದುಷ್ಕರ್ಮಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ Read More »

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟ ಬೆಳಂದೂರು ಇದರ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನ ಅಗಳಿ ಇದರ ಸಹಕಾರದೊಂದಿಗೆ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮೇ 27ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಕಲ್ಪೋಕ್ತ ಶನೈಶ್ಚರ ಪೂಜೆ, ಮಹಾಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಗಳಿ ಶ್ರೀ ಸದಾಶಿವ

ಮೇ 27 – ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ, ಧಾರ್ಮಿಕ ಸಭೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಶ್ರೀ ದೇವರ ಪತ್ತನಾಜೆ ಬಲಿ ಉತ್ಸವ ನಡೆದ ಬಳಿಕ ಒಳಾಂಗಣ ಪ್ರವೇಶಿಸುವುದರೊಂದಿಗೆ ಗುರುವಾರ ಸಂಪನ್ನಗೊಂಡಿತು. ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸಿದರು. ಕುಕ್ಕೆಯಲ್ಲಿ ಮಾತ್ರ ದೀಪಾವಳಿ ಅಮವಾಸ್ಯೆಯಂದು ಉತ್ಸವ ಆರಂಭವಾಗಿ ಜೇಷ್ಠ ಶುದ್ಧಷಷ್ಠಿಯಂದು ಕೊನೆಯ ಉತ್ಸವವು ನಡೆಯುತ್ತದೆ. ಈ ಬಾರಿ ಜೇಷ್ಠ ಶುದ್ಧಷಷ್ಠಿಯ  ದಿನವಾದ  ಗುರುವಾರ ರಾತ್ರಿ ಮಹಾಪೂಜೆಯ ಬಳಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ

ಪುತ್ತೂರು: ದೈವಗಳಿಗೆ ಕೊನೆ ತಂಬಿಲ, ದೇವರ ನಿತ್ಯ ಉತ್ಸವದ ಕೊನೆ ದಿನ, ಯಕ್ಷಗಾನದ ಗೆಜ್ಜೆ ಬಿಚ್ಚಿಸುವುದು ಹೀಗೆ ನಾನಾ ವಿಧದ ಆಚರಣೆಗಳಿಗೆ ಪಾತ್ರವಾಗಿ, ತುಳುನಾಡಿನ ಸಂಪ್ರದಾಯದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಪತ್ತನಾಜೆ ಉತ್ಸವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ರಾತ್ರಿ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ನಡೆದು, ಬಳಿಕ ಪಲ್ಲಕ್ಕಿ ಉತ್ಸವ ಜರಗಿತು. ದೇವರ ಉತ್ಸವಾದಿಗಳು ನಡೆದು, ಬಳಿಕ ದೇವರು ಗರ್ಭಗುಡಿಯೊಳಗಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ‌ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಪ್ತಸಾದ್ ಆಳ್ವ, ಗ್ರಾಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ Read More »

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ

ಕಡಬ: ಕಡಬ ವಿದ್ಯಾನಗರದ ಕೋಟೆಂಬರ ಕೊಚ್ಚಿಯಲ್ಲಿನ ಶ್ರೀ ಕೊರತ್ತಿ, ಪಂಜುರ್ಲಿ, ಗುಳಿಗ ದೈವಗಳಿಗೆ ತಂಬಿಲ ಹಾಗೂ ಅಗೇಲು ಸೇವೆ ಮಂಗಳವಾರ ನಡೆಯಿತು. ಬೆಳಿಗ್ಗೆ ದೈವಜ್ಞ ಪ್ರಸಾದ್ ಕೆದಿಲಾಯ ಅವರ ನೇತೃತ್ವದಲ್ಲಿ ದೈವಗಳಿಗೆ ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಪ್ರಧಾನ ಪರಿಚಾರಕ ಶ್ರೀಧರ ನಾಯ್ಕ್ ಕುಂಡಿಲು ಅವರ ನೇತೃತ್ವದಲ್ಲಿ ದೈವಗಳಿಗೆ ಅಗೇಲು ಹಾಕಿ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಗೌರವಾಧ್ಯಕ್ಷ ವೆಂಕಟ್ರಮಣ ರಾವ್ ಮಂಕುಡೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ,

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ Read More »

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ಯೋಜನಾ ಕಚೇರಿಯಿಂದ ಬಡ್ತಿಗೊಂಡು ವರ್ಗಾವಣೆಯಾಗಿರುವ ಸಿಬ್ಬಂದಿಗಳಿಗೆ ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಡಬ ಯೋಜನಾ ಕಛೇರಿಯಲ್ಲಿ ಸಹಾಯಕ ಪ್ರಭಂದಕರಾಗಿ ಕೆಲಸನಿರ್ವಹಿಸುತ್ತಿದ್ದ ರೂಪಾರವರು ಕೇಂದ್ರ ಕಚೇರಿಯ ಡಾಟಾ ಸೆಂಟರ್ ವಿಭಾಗಕ್ಕೆ ಮ್ಶಾನೇಜರ್ ಆಗಿ ವರ್ಗಾವಣೆಯಾಗಿದ್ದಾರೆ.  ತಾಲೂಕಿನಲ್ಲಿ ನಗದು ಸಹಾಯಕರಾಗಿ ಹಾಗೂ ಪ್ರಭಾರ ಕೃಷಿ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸಿರುವ ರಮ್ಶಾ ಅವರು  ತೀರ್ಥಹಳ್ಳಿ ಯೋಜನಾ ಕಚೇರಿಯ ನಗದು ಸಹಾಯಕಿ ಮೇಲ್ವಿಚಾರಕಿಯಾಗಿ ಬಡ್ತಿಗೊಂಡು ವರ್ಗಾವಣೆಗೊಂಡಿದ್ದಾರೆ. ತಾಲೂಕಿನ ನಗದು ಸಹಾಯಕಿಯಾಗಿ ಕೆಲಸ

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ Read More »

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್

ಪುತ್ತೂರು: ಆರ್ಯಾಪು ಗ್ರಾಮದ ನೀಲಪ್ಪ ಕೋಟ್ಯಾನ್ ಅವರ ಮಗ ರಂಜಿತ್ ಪೂಜಾರಿ ಹಾಗೂ ಮಾಣಿ ಏನಾಜೆ ರಾಮಪ್ಪ ಪೂಜಾರಿ ಪುತ್ರಿ ಕವಿತಾ ಸಾಲ್ಯಾನ್ ಅವರ ನಿಶ್ಚಿತಾರ್ಥ ಮಾಣಿ ಏನಾಜೆ ವಧುವಿನ ಮನೆಯಲ್ಲಿ ನಡೆಯಿತು.

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್ Read More »

error: Content is protected !!
Scroll to Top