ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು ಪೂರ್ವಭಾವಿ ಸಭೆ
ಪುತ್ತೂರು : ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ ವೃತಾಚರಣೆಯ ಕುರಿತು ಪುತ್ತೂರು ವಲಯ ಸಮಿತಿ ವತಿಯಿಂದ ಸಭೆಯನ್ನು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಆಯೋಜಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಡಾ.ಭಾಸ್ಕರ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆಗೆ ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಸಮರ್ಪಣೆಯಾಗಲಿದ್ದು, ಈ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಜು.3 ರಿಂದ ಸೆ.25ರ ವರೆಗೆ ಚಾತುರ್ಮಾಸ ನಡೆಯಲಿದ್ದು, ಜು.೧೦ ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ. […]










