ಧಾರ್ಮಿಕ

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತಿವೆ. ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು […]

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ Read More »

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕುರಿಯ ಗ್ರಾಮದ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಸಾನಿಧ್ಯದಲ್ಲಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಕಲಶ ಮೇ 24 ರಿಂದ 26 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮೇ 24 ಬುಧವಾರ ಬೆಳಿಗ್ಗೆ 6 ಗಂಟೆಗೆ ಸ್ಥಳ ಶುದ್ಧಿ, ಗಣಪತಿ ಹೋಮ, ರಾತ್ರಿ 7 ರಿಂದ ಗುಳಿಗ ದೈವದ ಕೋಲ ಹಾಗೂ ದೈವದ ಪ್ರತಿಷ್ಠೆ, ರಾತ್ರಿ 9 ರಿಂದ ಅನ್ನಸಂತರ್ಪಣೆ ಜರಗಲಿದೆ. ಮೇ 25 ಗುರುವಾರ ಸಂಜೆ 6

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ Read More »

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ

ಪುತ್ತೂರು: ಇಲ್ಲಿನ ಬಲ್ನಾಡು ವಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿ ಯೋಜನೆಯ ಆದೇಶದಂತೆ ಅರಿಯಡ್ಕ ವಲಯಕ್ಕೆ  ವರ್ಗಾವಣೆ ಆದ  ಮೇಲ್ವಿಚಾರಕ ಹರೀಶ್ ಕುಲಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ಅರಸೀಕೆರೆ ತಾಲೂಕಿನಿಂದ ವರ್ಗಾವಣೆ ಆಗಿ ಪುತ್ತೂರಿನ ಬಲ್ನಾಡು ವಲಯಕ್ಕೆ ಆಗಮಿಸಿದ ಪ್ರಶಾಂತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಹರೀಶ್ ಕುಲಾಲ್,  ಸಹಕಾರ  ನೀಡಿದ ಎಲ್ಲರಿಗೂ  ಕೃತಜ್ಞತೆ ಸಲ್ಲಿಸಿದರು. ನೂತನ  ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಎಲ್ಲರ  ಸಹಕಾರ  ಕೋರಿದರು. ಬಲ್ನಾಡು  ವಲಯದ  ಅಧ್ಯಕ್ಷ ಸತೀಶ್ ಒಳಗುಡ್ಡೆ, ಮಾಜಿ  ವಲಯಾಧ್ಯಕ್ಷ

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ Read More »

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗಾಗಮಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ

ಪುತ್ತೂರು : ಕಾಮಜಾಲು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನದಲ್ಲಿ ” ಕಲತ ಕಾರ್ಣಿಕ ” ಎಂಬ ಬ್ರಹ್ಮ ಮೊಗೇರ ದೈವಗಳ ಭಕ್ತಿಗೀತೆಯನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಆಡಳಿತ ಸಮಿತಿಯ ಸರ್ವ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಹಾಡಿನ ಕಲಾವಿದರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಭಾನುವಾರ ವಿವಿಧ ವೈದಿ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ದೇವಸ್ಥಾನದ ತಂತ್ರಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ 108 ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯುತ್ತಿದೆ. ‘ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರ ರೈ ಬಳ್ಳಮಜಲು, ಶೇಖರ್ ನಾರಾವಿ, ಭಕ್ತಾದಿಗಳು ಉಪಸ್ಥಿತರಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆ ಶುಕ್ರವಾರ ಬೆಳಗ್ಗೆ ಗಂಟೆ 8.22ಕ್ಕೆ ವೇದಮೂರ್ತಿ ಜಗದೀಶ ಭಟ್ ಭಟಪಾಡಿ ಇವರ ನೇತೃತ್ವದಲ್ಲಿ ನೆರವೇರಿತು. ಶ್ರೀ ಉಳ್ಳಾಲ್ತಿಯ ಈ ಮೂಲಸ್ಥಾನವನ್ನು ಸಂಪೂರ್ಣ ಶಿಲಾಮಯವನ್ನಾಗಿ ರೂಪಿಸಲಾಗಿದ್ದು, ಸುಮಾರು ರೂ. 30 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ನಡೆದಿದೆ. ವೈದಿಕ ಪಾರಂಪರಿಕವಾಗಿ ಆರಾಧನೆ ನಡೆಯುತ್ತಿದ್ದು, ಮಾರ್ಚ್ ಹುಣ್ಣಿಮಯ ದಿನದ ಹೂವಿನ ಪೂಜೆ, ಚಂಡಿಕಾ ಹೋಮ, ಗಣಹೋಮ ನಡೆಯುವುದು ಇಲ್ಲಿನ ವಿಶೇಷ. ಬಪ್ಪಳಿಗೆಯ ನಟ್ಟೋಜ ವಂಶಸ್ಥರ ಜಾಗದಲ್ಲಿರುವ ಈ

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠೆ Read More »

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಮಂಗಳೂರಿನ ಕುಲಶೇಖರಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ  ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮೇ 14 ರಿಂದ 25 ರ ತನಕ ನಡೆಯಲಿದ್ದು, ಮೇ.14 ರಂದು ಪುತ್ತೂರು ಕುಲಾಲರ ಯಾನೆ ಮೂಲ್ಯರ ಸಂಘದ ವತಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಕುಲಾಲ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 1200 ವರ್ಷಗಳ ಇತಿಹಾಸ ಇರುವ ದೇವಸ್ಥಾನ ಸುಮಾರು 10 ಕೋಟಿ ರೂ. ವಚ್ಚದಲ್ಲಿ ಪುನರ್ ನಿರ್ಮಾಣಗೊಂಡಿದ್ದು, ಈ ಭಾಗದ

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ Read More »

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ

ಪುತ್ತೂರು: ಬೆಟ್ಟಂಪಾಡಿ ಶ್ರೀ ಕ್ಷೇತ್ರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ದಿ SPYSS ಸಮಿತಿಯ ಪುತ್ತೂರಿನ 11 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ಪ್ರಾರಂಭಿಸಲಾಯಿತು. ಮುಖ್ಯ ಶಿಕ್ಷಕಿ ಆಶಾಲತಾ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಟ್ಟಂಪಾಡಿ ಅನುವಂಶಿಯ ಮೋಕ್ತೇಸರರು ವಿನೋದ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಾನ್ವಿತ ಮತ್ತು ಪ್ರಣತಿ ಪ್ರಾರ್ಥಿಸಿ,ಸಂಧ್ಯ ನಿರೂಪಿಸಿ, ಸಂತೋಷ ಸ್ವಾಗತಿಸಿ, ನಮಿತಾ ವಂದಿಸಿದರು.

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ Read More »

error: Content is protected !!
Scroll to Top