ಧಾರ್ಮಿಕ

ಇಂದಿನಿಂದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ.15ರಿಂದ ಫೆ.17ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ ಕ್ಷೇತ್ರವಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವರು ಅವಭೃತ ಸ್ನಾನಕ್ಕೆ ತೆರಳುವ ಸಂದರ್ಭ ವೀರಮಂಗಲ ಶ್ರೀ ವಿಷ್ಣುಮೂರ್ತಿ […]

ಇಂದಿನಿಂದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ Read More »

ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿಯ ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ಮಾ. 5ರಂದು ಶ್ರೀ ರಾಜಗುಳಿಗ ದೈವದ ಕೋಲವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಫೆ. 13ರಂದು ಬಿಡುಗಡೆಗೊಳಿಸಲಾಯಿತು. ಸಂಕ್ರಮಣದ ಪ್ರಯುಕ್ತ ತಂಬಿಲ ಸೇವೆ ನಡೆದ ಬಳಿಕ ದೈವ ನರ್ತಕರಿಗೆ ವೀಳ್ಯ ನೀಡುವುದರೊಂದಿಗೆ ಶ್ರೀ ರಾಜಗುಳಿಗ ದೈವದ ಕೋಲ ಹಾಗೂ ವೈದಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಎಸ್. ಮಾಧವ ರೈ ಕುಂಬ್ರ, ನವೀನ್ ಸಾಲ್ಯಾನ್ ಕಿನ್ನಿಮಜಲು, ದೇವದಾಸ್ ಕುರಿಯ, ದಾದು

ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ Read More »

ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು

ಪುತ್ತೂರು: ನರಿಮೊಗರು ಗ್ರಾಮದ ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಮೋನಪ್ಪ ಸಪಲ್ಯ ಅಗೇಲು ಸೇವೆಯನ್ನು ಹಾಗೂ ನಿತಿನ್ ಭಟ್ ದೇವರ ಪೂಜೆಯನ್ನು ನೆರವೇರಿಸಿದರು. ಜಗದೀಶ ಗೌಡ ಸಹಕರಿಸಿದರು.

ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು Read More »

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು : ಬೆಳ್ಳಿಪ್ಪಾಡಿ ಗ್ರಾಮದ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ಮಹಾದೇವ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸುಮಾರು ಎಂಟು ಕಿ.ಮೀ. ದೂರದಲ್ಲಿರುವ ಬೆಳ್ಳಿಪ್ಪಾಡಿಯಲ್ಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಇದೀಗ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಗೌಡ ಪಮ್ಮನಮಜಲು, ಕೋಶಾಧಿಕಾರಿ ಚಂದ್ರ ಶೆಟ್ಟಿಗಾರ್ ಆಲಂಗೋಡಿ ಮತ್ತಿತರರು

ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಿರ್ಣೋದ್ಧಾರ – ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ Read More »

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ

ಪುತ್ತೂರು: ಕುಂಜೂರುಪಂಜ  ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಫೆ. 15ರಂದು 20ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರಮದಾನ ಹಾಗೂ ಬಲ್ನಾಡು ಘಟಕದ ಮಾಸಿಕ ಸಭೆ ನಡೆಯಿತು. ಫೆ. 15ರಂದು ಮಂದಿರದಲ್ಲಿ ಸಾಮೂಹಿಕ  ದುರ್ಗಾ ಪೂಜೆ ಮತ್ತು ಅರ್ಧ ಏಕಾಹ ಭಜನೆ ನಡೆಯಲಿದೆ. ಮಾಸಿಕ ಸಭೆ: ಇದೇ ಸಂದರ್ಭ ಬಲ್ನಾಡು ಘಟಕದ  ಮಾಸಿಕ ಸಭೆ ನಡೆಯಿತು. ಲೆಕ್ಕಪರಿಶೋದಕಿ ಲತಾ, ವಲಯ ಮೇಲ್ವಿಚಾರಕ ಹರೀಶ್ ಮಾಹಿತಿ ನೀಡಿದರು. ಘಟಕದ ಸಂಯೋಜಕಿ ಆಶಾಲತಾ, ಪ್ರತಿನಿಧಿ ವಿನಯ, ಸದಸ್ಯರಾದ ಬಾಲಕೃಷ್ಣ, ಶಂಭು  ಪೂಜಾರಿ, ಹರಿಪ್ರಸಾದ್, ಸುನೀಲ್,

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ Read More »

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ

ಪುತ್ತೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಶಿವನ ದೇವಸ್ಥಾನಗಳಲ್ಲಿ ಫೆ.18ರಂದು ಮಹಾ ಶಿವರಾತ್ರಿ ಹಬ್ಬದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅದಕ್ಕೆ ತಗಲುವ ವೆಚ್ಚವನ್ನು ಆಯಾ ದೇವಾಲಯದ ನಿಧಿಯಿಂದ ಭರಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಶಿವರಾತ್ರಿಯ ಹಬ್ಬದ ದಿನದಂದು ವಿಶೇಷವಾಗಿ ಸಂಕಲ್ಪಿಸಿ ಆ ದಿನ ಪ್ರಾಂತ: ಕಾಲದಿಂದ ಮಧ್ಯಾಹ್ನದವರೆಗೆ ಯಾವುದಾದರೊಂದು ಸೂಕ್ತ ಸಮಯದಲ್ಲಿ ದೇವಾಲಯದ ದೈನಂದಿನ ಪೂಜಾವಿಧಿಗಳಿಗೆ ಧಕ್ಕೆಯಾಗದಂತೆ ರುದ್ರಾಭಿಷೇಕ ಮತ್ತು ರುದ್ರ ಹೋಮ ಪೂಜಾಕಾರ್ಯಗಳನ್ನು ವಿಶೇಷವಾಗಿ ನಡೆಸುವುದು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ Read More »

ಬನ್ನೂರು ಸ್ಪೂರ್ತಿ ಮೈದಾನದಲ್ಲಿ 18ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ | ಸ್ಪೂರ್ತಿ  ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು : ಬನ್ನೂರು ಸ್ಪೂರ್ತಿ ಮೈದಾನದಲ್ಲಿರುವ ಶ್ರೀ ಶನಿದೇವರ ಸನ್ನಿಧಿಯಲ್ಲಿ 18ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಹಾಗೂ ಸ್ಪೂರ್ತಿ ಯುವಕ, ಯುವತಿ ಮಂಡಲ, ಮಹಿಳಾ ಮಂಡಲ ಹಾಗೂ ಬಾಲಸಭಾದ 33ನೇ ವಾರ್ಷಿಕೋತ್ಸವ ಶನಿವಾರ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಶನೀಶ್ವರ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಶ್ರೀ ಮಹಿಷಮರ್ದಿನಿ ಮಹಿಳಾ ಕುಣಿತ ಭಜನಾ ಮಂಡಳಿಯವರಿಂದ ಕುಣಿತ ಭಜನೆ, ಸಂಜೆ ಅಂಗನವಾಡಿ

ಬನ್ನೂರು ಸ್ಪೂರ್ತಿ ಮೈದಾನದಲ್ಲಿ 18ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ | ಸ್ಪೂರ್ತಿ  ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭ Read More »

ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ

ಪುತ್ತೂರು : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ದೈವಗಳ ನೇಮೋತ್ಸವ ಫೆ.13 ಸೋಮವಾರ ಹಾಗೂ 14 ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಫೆ.13 ಸೋಮವಾರ ಬೆಳಿಗ್ಗೆ 8.45 ಕ್ಕೆ ಗೊನೆಮುಹೂರ್ತ, 9.30 ರಿಂದ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ, ಬಜತ್ತೂರು ಗುತ್ತಿನ ನಾಗತಂಬಿಲ, 10 ಕ್ಕೆ ತೋರಣ ಮುಹೂರ್ತ, ರಾತ್ರಿ 7.30 ಕ್ಕೆ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ

ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ Read More »

ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರಿಂದ ಹನುಮಗಿರಿ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಣೆ | ಅಮರಗಿರಿ ಉದ್ಘಾಟನೆ | ಭೇಟಿಯ ಸವಿನೆನಪಿಗೆ ಸಂವಿಧಾನ ಮೂಲಪ್ರತಿಯಲ್ಲಿ ಹಸ್ತಾಕ್ಷರ

ಈಶ್ವರಮಂಗಲ : ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿ ಅಮಿತ್ ಶಾ ಅವರು ಕ್ಷೇತ್ರದ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಿಸಿದರು. ಕೇರಳದ ಕಣ್ಣೂರಿನಿಂದ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಗಜಾನನ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಬಳಿಕ ಪಂಚಮುಖಿ ಆಂಜನೇಯನ ದರ್ಶನ ಪಡೆದು ನವರತ್ನ ಸಹಿತ ರಜತ ಗಧೆ ಅರ್ಪಿಸಿದರು. ಪಂಚಮುಖಿ ಆಂಜನೇಯ ಸನ್ನಿಧಿಯಲ್ಲಿ ವಿಶೇಷವಾಗಿ ನೀಡುವ ಪಂಚಮುಖಿ ಆಂಜನೇಯ ರಕ್ಷೆಯನ್ನು ಕ್ಷೇತ್ರದ ಅರ್ಚಕ ರಾಜೇಶ್ ಗಾಂವ್ಕರ್  ಅಮಿತ್ ಶಾ ಅವರ

ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಅವರಿಂದ ಹನುಮಗಿರಿ ಆಂಜನೇಯನಿಗೆ ನವರತ್ನ ಸಹಿತ ರಜತ ಗಧೆ ಅರ್ಪಣೆ | ಅಮರಗಿರಿ ಉದ್ಘಾಟನೆ | ಭೇಟಿಯ ಸವಿನೆನಪಿಗೆ ಸಂವಿಧಾನ ಮೂಲಪ್ರತಿಯಲ್ಲಿ ಹಸ್ತಾಕ್ಷರ Read More »

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಹುಲಿ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಫೆ.15 ಬುಧವಾರ ಸಂಜೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ಸಂಜೆ 5 ರಿಂದ ಭಜನಾ ಕಾರ್ಯಕ್ರಮ, 6 ಕ್ಕೆ ಭಂಡಾರ ಹಿಡಿಯುವುದು, ರಾತ್ರಿ 8 ರಿಂದ ಕಾಡೆತ್ತಿ ಪಂಜುರ್ಲಿ ದೈವದ ನೇಮೋತ್ಸವ, 8.30 ರಿಂದ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 10

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ Read More »

error: Content is protected !!
Scroll to Top