ಧಾರ್ಮಿಕ

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ

ಪುತ್ತೂರು: ಪುತ್ತೂರಿನ ಕಾರಣಿಕದ ದೈವಬೀಡು ಬಲ್ನಾಡು ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ SPYSS ಸಮಿತಿಯ ಪುತ್ತೂರಿನ 10 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ವಿದ್ಯುಕ್ತವಾಗಿ ಪ್ರಾರಂಭಿಸಲಾಯಿತು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಭಗವಾನ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ಕಾಂತಿಲ ವ್ಯವಸ್ಥಾಪನಾ ಮಂಡಳಿಯ ಮಾಧವ ಗೌಡ ಅತಿಥಿಯಾಗಿ ಭಾಗವಹಿಸಿದರು. […]

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ Read More »

ಆಟೋದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ | ಸರಳತೆಯ ಸಂದೇಶ ಸಾರಿದ ಸ್ವಾಮೀಜಿ

ಪುತ್ತೂರು: ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಬುಧವಾರ ಆಟೊ ರಿಕ್ಷಾದಲ್ಲಿ ಬಂದು ಮತದಾನ ಮಾಡಿದರು. ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತದಾನಕ್ಕೆ ರಿಕ್ಷಾದಲ್ಲಿ ಬಂದು, ಸರಳತೆಯ ಟಚ್ ನೀಡಿದರು. ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.

ಆಟೋದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ | ಸರಳತೆಯ ಸಂದೇಶ ಸಾರಿದ ಸ್ವಾಮೀಜಿ Read More »

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೇರಲು ತಲೆಬೈಲು ಮಠದಲ್ಲಿ ಯತೀಶ್ ಆರ್ವಾರ್ ಪ್ರಾರ್ಥನೆ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರ ತಲೆಬೈಲು ಶ್ರೀ ನರಸಿಂಹ ದೇವರ ಮಠಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ, ಬಿಜೆಪಿಯ ಪ್ರಾಂತ ಸಹಸಂಘಟನಾ ಮಾಜಿ ಕಾರ್ಯದರ್ಶಿ ಯತೀಶ್ ಆರ್ವಾರ್ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಸರ್ಕಾರ ರಚಿಸುವಂತಾಗಬೇಕು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅತ್ಯಧಿಕ ಮತಗಳ ಅಂತರದಿಂದ ಜಯ ಗಳಿಸಬೇಕು ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಠದ ಮಂಜುನಾಥ್ ಉಡುಪ ಅವರು ಅನುಗ್ರಹ ಪ್ರಾರ್ಥನೆ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೇರಲು ತಲೆಬೈಲು ಮಠದಲ್ಲಿ ಯತೀಶ್ ಆರ್ವಾರ್ ಪ್ರಾರ್ಥನೆ Read More »

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಅಂಬಾರಿಯನ್ನು ಹೊರುತ್ತಿದ್ದ ಆನೆ ಬಲರಾಮನ ಅಂತ್ಯಕ್ರಿಯೆ ಸೋಮವಾರ ವಿಧಿವಿಧಾನ ಪೂರ್ವಕವಾಗಿ ನಡೆಯಿತು. ಬಲರಾಮನ ಕಿವಿಯಲ್ಲಿ ನಾರಾಯಣ… ನಾರಾಯಣ… ನಾರಾಯಣ… ಎಂದು ಮಾವುತ ಮೂರು ಬಾರಿ ಉಸುರುತ್ತಾ, ಕಣ್ಣೀರಿಡುತ್ತಾ ಅಂತಿಮ ವಿದಾಯ ಹೇಳುತ್ತಿದ್ದರೆ, ಆಗಮಿಸಿದ ಎಲ್ಲರ ಕಣ್ಣಂಚಿನಲ್ಲೂ ನೀರಾಡಿತು. ಸೌಮ್ಯ ಸ್ವಭಾವದ ಬಲರಾಮ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಮೈಸೂರಿನ ಗಜಪಡೆಯ ಸಾರಥಿ, ಅರಮನೆಯ ಮುಖ್ಯ ಆನೆ, ಬಲಾಢ್ಯ ಅಂಬಾರಿಯನ್ನೇ ಸಲೀಸಾಗಿ ಎತ್ತಬಲ್ಲ ಬಲರಾಮ, ಹೆಸರಿಗೆ ತಕ್ಕಂತೆ ಬಲರಾಮ. ಹಾಗೆಂದು ಎಲ್ಲಿಯೂ ತನ್ನ ಬಲ ಪ್ರದರ್ಶನ

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ Read More »

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನೆ ಮೇ 12 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಎನ್‍.ಕೆ.ಜಗನ್ನಿವಾಸ ರಾವ್ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿರ ವರ್ಷಗಳ ಇತಿಹಾಸ ಇರುವ ಪುತ್ತೂರು ಸೀಮೆಗೊಳಪಟ್ಟ ಈ ತೊಟ್ಟಿಲಕಯಕ್ಕೆ ಸಾಕ್ಷಿ ಎಂಬಂತೆ ಶ್ರೀ ದಂಡನಾಯಕ ಉಳ್ಳಾಲ್ತಿಯ ನೇಮನಡಾವಳಿಯಲ್ಲಿ ದರ್ಶನ ಪಾತ್ರಿಯ ಮೂಲಕ “ನಾನು ತೊಟ್ಟಿಲಕಯದಿಂದ ಅವಿರ್ಭಸಿದ್ದೇನೆ” ಎಂಬ ಮಾತನ್ನು ಉಚ್ಚರಿಸುವುದು ೈತಿಹಾಸಿಕ ವಿಷಯಕ್ಕೆ ಹಿಡಿದ

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ Read More »

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರವೆಂದೇ ಹೆಸರುವಾಸಿಯಾದ ಶ್ರೀ ತಲೆಬೈಲು ನರಸಿಂಹ ದೇವರ ಮಠಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಪತ್ನಿ ಶೈಲಜಾ ರೈ ಅವರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಮಂಜುನಾಥ್ ಉಡುಪ ಅವರು ಅನುಗ್ರಹ ಪ್ರಾರ್ಥನೆ ಸಲ್ಲಿಸಿದರು. ರಮಾನಾಥ ರೈ ಪುತ್ರಿ ಚರಿಷ್ಮಾ ರೈ, KPCC ಮಹಿಳಾ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಮಲ್ಲಿಕಾ ಪಕಳ ಮತ್ತು ವೀಣಾ ಉಪಸ್ಥಿತರಿದ್ದರು.

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ Read More »

ಮಹಾಲಿಂಗೇಶ್ವರನಿಗೆ ಆರತಿ ಬೆಳಗಿದ ಗೋರಖ್ ಪುರದ ಸಂತ | ಪುತ್ತೂರ ಈಶನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಗೋರಖಪುರದ ಸಂತ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಹಾರವನ್ನು ಹಾಕಿ ಸ್ವಾಗತಿಸಲಾಯಿತು. ಬಳಿಕ ಶ್ರೀ ಮಹಾಲಿಂಗೇಶ್ವರ ದೇವರ ಗರ್ಭಗುಡಿಯ ಮುಂಭಾಗದಲ್ಲಿ ದೇವರಿಗೆ ಆರತಿ ಬೆಳಗಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಸಂಸದ ನಳಿನ್

ಮಹಾಲಿಂಗೇಶ್ವರನಿಗೆ ಆರತಿ ಬೆಳಗಿದ ಗೋರಖ್ ಪುರದ ಸಂತ | ಪುತ್ತೂರ ಈಶನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ Read More »

ನಾಳೆ (ಮೇ 5) : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾಪೂಜೆ

ಕಡಬ: ಕಡಬ ತಾಲೂಕಿನ ಶಾಂತಿಮೊಗರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವ ವಿವಿಧ ವೈದಿಕ ಕಾರ್ಯಕ್ರಮಗಳು ಮೇ 5 ಶುಕ್ರವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲ್ಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ನಾಳೆ (ಮೇ 5) : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾಪೂಜೆ Read More »

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ ಮೇ 12 ರಂದು ವೇ.ಮೂ.ಜಗದೀಶ್ ಭಟ್ ಭಟ್ರಪಾಡಿ ಅವರ ನೇತೃತ್ವದಲ್ಲಿ ನಡೆಯಲಿದೆ. ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ದಕ್ಷಿಣಾಮ್ನಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರು ಹಾಗೂ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಪರಮಾನುಗ್ರಹದಿಂದ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬೆಳಿಗ್ಗೆ ಗಂಟೆ 8.22 ಕ್ಕೆ ಸಲುವ ವೃಷಭಲಗ್ನ ಸುಮುಹೂರ್ತದಲ್ಲಿ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ನಃಪ್ರತಿಷ್ಠಾಪನೋತ್ಸವ ನಡೆಯಲಿದೆ ಎಂದು ಪ್ರಕಟಣೆ

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ, ಪುನಃಪ್ರತಿಷ್ಠಾಪನೆ Read More »

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಪ್ರತಿಷ್ಠಾ ಮಹೋತ್ಸವ | ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ

ಪುತ್ತೂರು: ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಪುರುಷರಕಟ್ಟೆ ಶ್ರೀ ದುರ್ಗಾ ಭಜನಾ ಮಂಡಳಿ, ನೆಟ್ಟಣ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ುದಯಗಿರಿ ಶ್ರೀ ವಿಷ್ಣು ಭಜನಾ ಮಂಡಳಿ, ಪುರುಷರಕಟ್ಟೆ ಶ್ರೀ ವನದುರ್ಗ ಭಜನಾ ಮಂಡಳಿ, ಶಾಂತಿಗೋಡು ಶ್ರೀ ಅಯ್ಯಪ್ಪ ಭಜನಾ ಮಂಡಳಿ ಹಾಗೂ ಮುಕ್ವೆ ಶ್ರೀ, ಉಮಾಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ

ಶಾಂತಿಗೋಡು ಪಜಿರೋಡಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಪ್ರತಿಷ್ಠಾ ಮಹೋತ್ಸವ | ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ Read More »

error: Content is protected !!
Scroll to Top