ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ

ಪುತ್ತೂರು: ದೈವಗಳಿಗೆ ಕೊನೆ ತಂಬಿಲ, ದೇವರ ನಿತ್ಯ ಉತ್ಸವದ ಕೊನೆ ದಿನ, ಯಕ್ಷಗಾನದ ಗೆಜ್ಜೆ ಬಿಚ್ಚಿಸುವುದು ಹೀಗೆ ನಾನಾ ವಿಧದ ಆಚರಣೆಗಳಿಗೆ ಪಾತ್ರವಾಗಿ, ತುಳುನಾಡಿನ ಸಂಪ್ರದಾಯದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಪತ್ತನಾಜೆ ಉತ್ಸವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ರಾತ್ರಿ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ನಡೆದು, ಬಳಿಕ ಪಲ್ಲಕ್ಕಿ ಉತ್ಸವ ಜರಗಿತು. ದೇವರ ಉತ್ಸವಾದಿಗಳು ನಡೆದು, ಬಳಿಕ ದೇವರು ಗರ್ಭಗುಡಿಯೊಳಗಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ‌ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಶಾಸಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಪ್ತಸಾದ್ ಆಳ್ವ, ಗ್ರಾಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ Read More »

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ

ಕಡಬ: ಕಡಬ ವಿದ್ಯಾನಗರದ ಕೋಟೆಂಬರ ಕೊಚ್ಚಿಯಲ್ಲಿನ ಶ್ರೀ ಕೊರತ್ತಿ, ಪಂಜುರ್ಲಿ, ಗುಳಿಗ ದೈವಗಳಿಗೆ ತಂಬಿಲ ಹಾಗೂ ಅಗೇಲು ಸೇವೆ ಮಂಗಳವಾರ ನಡೆಯಿತು. ಬೆಳಿಗ್ಗೆ ದೈವಜ್ಞ ಪ್ರಸಾದ್ ಕೆದಿಲಾಯ ಅವರ ನೇತೃತ್ವದಲ್ಲಿ ದೈವಗಳಿಗೆ ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಪ್ರಧಾನ ಪರಿಚಾರಕ ಶ್ರೀಧರ ನಾಯ್ಕ್ ಕುಂಡಿಲು ಅವರ ನೇತೃತ್ವದಲ್ಲಿ ದೈವಗಳಿಗೆ ಅಗೇಲು ಹಾಕಿ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಗೌರವಾಧ್ಯಕ್ಷ ವೆಂಕಟ್ರಮಣ ರಾವ್ ಮಂಕುಡೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ,

ವಿದ್ಯಾನಗರ ಶ್ರೀ ಕೊರತ್ತಿ ಪರಿವಾರ ದೈವಗಳಿಗೆ ತಂಬಿಲ ಅಗೇಲು ಸೇವೆ Read More »

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ಯೋಜನಾ ಕಚೇರಿಯಿಂದ ಬಡ್ತಿಗೊಂಡು ವರ್ಗಾವಣೆಯಾಗಿರುವ ಸಿಬ್ಬಂದಿಗಳಿಗೆ ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಡಬ ಯೋಜನಾ ಕಛೇರಿಯಲ್ಲಿ ಸಹಾಯಕ ಪ್ರಭಂದಕರಾಗಿ ಕೆಲಸನಿರ್ವಹಿಸುತ್ತಿದ್ದ ರೂಪಾರವರು ಕೇಂದ್ರ ಕಚೇರಿಯ ಡಾಟಾ ಸೆಂಟರ್ ವಿಭಾಗಕ್ಕೆ ಮ್ಶಾನೇಜರ್ ಆಗಿ ವರ್ಗಾವಣೆಯಾಗಿದ್ದಾರೆ.  ತಾಲೂಕಿನಲ್ಲಿ ನಗದು ಸಹಾಯಕರಾಗಿ ಹಾಗೂ ಪ್ರಭಾರ ಕೃಷಿ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸಿರುವ ರಮ್ಶಾ ಅವರು  ತೀರ್ಥಹಳ್ಳಿ ಯೋಜನಾ ಕಚೇರಿಯ ನಗದು ಸಹಾಯಕಿ ಮೇಲ್ವಿಚಾರಕಿಯಾಗಿ ಬಡ್ತಿಗೊಂಡು ವರ್ಗಾವಣೆಗೊಂಡಿದ್ದಾರೆ. ತಾಲೂಕಿನ ನಗದು ಸಹಾಯಕಿಯಾಗಿ ಕೆಲಸ

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ Read More »

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್

ಪುತ್ತೂರು: ಆರ್ಯಾಪು ಗ್ರಾಮದ ನೀಲಪ್ಪ ಕೋಟ್ಯಾನ್ ಅವರ ಮಗ ರಂಜಿತ್ ಪೂಜಾರಿ ಹಾಗೂ ಮಾಣಿ ಏನಾಜೆ ರಾಮಪ್ಪ ಪೂಜಾರಿ ಪುತ್ರಿ ಕವಿತಾ ಸಾಲ್ಯಾನ್ ಅವರ ನಿಶ್ಚಿತಾರ್ಥ ಮಾಣಿ ಏನಾಜೆ ವಧುವಿನ ಮನೆಯಲ್ಲಿ ನಡೆಯಿತು.

ವಿವಾಹ ನಿಶ್ಚಿತಾರ್ಥ | ರಂಜಿತ್ ಪೂಜಾರಿ – ಕವಿತಾ ಸಾಲ್ಯಾನ್ Read More »

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತಿವೆ. ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ Read More »

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕುರಿಯ ಗ್ರಾಮದ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಸಾನಿಧ್ಯದಲ್ಲಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಕಲಶ ಮೇ 24 ರಿಂದ 26 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮೇ 24 ಬುಧವಾರ ಬೆಳಿಗ್ಗೆ 6 ಗಂಟೆಗೆ ಸ್ಥಳ ಶುದ್ಧಿ, ಗಣಪತಿ ಹೋಮ, ರಾತ್ರಿ 7 ರಿಂದ ಗುಳಿಗ ದೈವದ ಕೋಲ ಹಾಗೂ ದೈವದ ಪ್ರತಿಷ್ಠೆ, ರಾತ್ರಿ 9 ರಿಂದ ಅನ್ನಸಂತರ್ಪಣೆ ಜರಗಲಿದೆ. ಮೇ 25 ಗುರುವಾರ ಸಂಜೆ 6

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ Read More »

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ

ಪುತ್ತೂರು: ಇಲ್ಲಿನ ಬಲ್ನಾಡು ವಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿ ಯೋಜನೆಯ ಆದೇಶದಂತೆ ಅರಿಯಡ್ಕ ವಲಯಕ್ಕೆ  ವರ್ಗಾವಣೆ ಆದ  ಮೇಲ್ವಿಚಾರಕ ಹರೀಶ್ ಕುಲಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ಅರಸೀಕೆರೆ ತಾಲೂಕಿನಿಂದ ವರ್ಗಾವಣೆ ಆಗಿ ಪುತ್ತೂರಿನ ಬಲ್ನಾಡು ವಲಯಕ್ಕೆ ಆಗಮಿಸಿದ ಪ್ರಶಾಂತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಹರೀಶ್ ಕುಲಾಲ್,  ಸಹಕಾರ  ನೀಡಿದ ಎಲ್ಲರಿಗೂ  ಕೃತಜ್ಞತೆ ಸಲ್ಲಿಸಿದರು. ನೂತನ  ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಎಲ್ಲರ  ಸಹಕಾರ  ಕೋರಿದರು. ಬಲ್ನಾಡು  ವಲಯದ  ಅಧ್ಯಕ್ಷ ಸತೀಶ್ ಒಳಗುಡ್ಡೆ, ಮಾಜಿ  ವಲಯಾಧ್ಯಕ್ಷ

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ Read More »

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗಾಗಮಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

error: Content is protected !!
Scroll to Top