ಧಾರ್ಮಿಕ

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ

ಪುತ್ತೂರು : ಕಾಮಜಾಲು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನದಲ್ಲಿ ” ಕಲತ ಕಾರ್ಣಿಕ ” ಎಂಬ ಬ್ರಹ್ಮ ಮೊಗೇರ ದೈವಗಳ ಭಕ್ತಿಗೀತೆಯನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು. ದೈವಸ್ಥಾನದ ಆಡಳಿತ ಸಮಿತಿಯ ಸರ್ವ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಹಾಡಿನ ಕಲಾವಿದರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಭಾನುವಾರ ವಿವಿಧ ವೈದಿ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ದೇವಸ್ಥಾನದ ತಂತ್ರಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ 108 ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯುತ್ತಿದೆ. ‘ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರ ರೈ ಬಳ್ಳಮಜಲು, ಶೇಖರ್ ನಾರಾವಿ, ಭಕ್ತಾದಿಗಳು ಉಪಸ್ಥಿತರಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆ ಶುಕ್ರವಾರ ಬೆಳಗ್ಗೆ ಗಂಟೆ 8.22ಕ್ಕೆ ವೇದಮೂರ್ತಿ ಜಗದೀಶ ಭಟ್ ಭಟಪಾಡಿ ಇವರ ನೇತೃತ್ವದಲ್ಲಿ ನೆರವೇರಿತು. ಶ್ರೀ ಉಳ್ಳಾಲ್ತಿಯ ಈ ಮೂಲಸ್ಥಾನವನ್ನು ಸಂಪೂರ್ಣ ಶಿಲಾಮಯವನ್ನಾಗಿ ರೂಪಿಸಲಾಗಿದ್ದು, ಸುಮಾರು ರೂ. 30 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ನಡೆದಿದೆ. ವೈದಿಕ ಪಾರಂಪರಿಕವಾಗಿ ಆರಾಧನೆ ನಡೆಯುತ್ತಿದ್ದು, ಮಾರ್ಚ್ ಹುಣ್ಣಿಮಯ ದಿನದ ಹೂವಿನ ಪೂಜೆ, ಚಂಡಿಕಾ ಹೋಮ, ಗಣಹೋಮ ನಡೆಯುವುದು ಇಲ್ಲಿನ ವಿಶೇಷ. ಬಪ್ಪಳಿಗೆಯ ನಟ್ಟೋಜ ವಂಶಸ್ಥರ ಜಾಗದಲ್ಲಿರುವ ಈ

ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠೆ Read More »

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಮಂಗಳೂರಿನ ಕುಲಶೇಖರಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ  ಪುನಃಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮೇ 14 ರಿಂದ 25 ರ ತನಕ ನಡೆಯಲಿದ್ದು, ಮೇ.14 ರಂದು ಪುತ್ತೂರು ಕುಲಾಲರ ಯಾನೆ ಮೂಲ್ಯರ ಸಂಘದ ವತಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಕುಲಾಲ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಸುಮಾರು 1200 ವರ್ಷಗಳ ಇತಿಹಾಸ ಇರುವ ದೇವಸ್ಥಾನ ಸುಮಾರು 10 ಕೋಟಿ ರೂ. ವಚ್ಚದಲ್ಲಿ ಪುನರ್ ನಿರ್ಮಾಣಗೊಂಡಿದ್ದು, ಈ ಭಾಗದ

ಮೇ 12 ರಿಂದ 25 : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ :ಮೇ 14 ರಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ Read More »

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ

ಪುತ್ತೂರು: ಬೆಟ್ಟಂಪಾಡಿ ಶ್ರೀ ಕ್ಷೇತ್ರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ದಿ SPYSS ಸಮಿತಿಯ ಪುತ್ತೂರಿನ 11 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ಪ್ರಾರಂಭಿಸಲಾಯಿತು. ಮುಖ್ಯ ಶಿಕ್ಷಕಿ ಆಶಾಲತಾ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಟ್ಟಂಪಾಡಿ ಅನುವಂಶಿಯ ಮೋಕ್ತೇಸರರು ವಿನೋದ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಾನ್ವಿತ ಮತ್ತು ಪ್ರಣತಿ ಪ್ರಾರ್ಥಿಸಿ,ಸಂಧ್ಯ ನಿರೂಪಿಸಿ, ಸಂತೋಷ ಸ್ವಾಗತಿಸಿ, ನಮಿತಾ ವಂದಿಸಿದರು.

ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ Read More »

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ

ಪುತ್ತೂರು: ಪುತ್ತೂರಿನ ಕಾರಣಿಕದ ದೈವಬೀಡು ಬಲ್ನಾಡು ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ SPYSS ಸಮಿತಿಯ ಪುತ್ತೂರಿನ 10 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ವಿದ್ಯುಕ್ತವಾಗಿ ಪ್ರಾರಂಭಿಸಲಾಯಿತು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಭಗವಾನ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದಂಡನಾಯಕ ಉಳ್ಳಾಳ್ತಿ ದೇವಸ್ಥಾನ ಕಾಂತಿಲ ವ್ಯವಸ್ಥಾಪನಾ ಮಂಡಳಿಯ ಮಾಧವ ಗೌಡ ಅತಿಥಿಯಾಗಿ ಭಾಗವಹಿಸಿದರು.

ಬಲ್ನಾಡು: SPYSS ಸಮಿತಿಯ ಪುತ್ತೂರಿನ 10ನೇ ಶಾಖೆ ಆರಂಭ Read More »

ಆಟೋದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ | ಸರಳತೆಯ ಸಂದೇಶ ಸಾರಿದ ಸ್ವಾಮೀಜಿ

ಪುತ್ತೂರು: ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಬುಧವಾರ ಆಟೊ ರಿಕ್ಷಾದಲ್ಲಿ ಬಂದು ಮತದಾನ ಮಾಡಿದರು. ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತದಾನಕ್ಕೆ ರಿಕ್ಷಾದಲ್ಲಿ ಬಂದು, ಸರಳತೆಯ ಟಚ್ ನೀಡಿದರು. ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.

ಆಟೋದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ | ಸರಳತೆಯ ಸಂದೇಶ ಸಾರಿದ ಸ್ವಾಮೀಜಿ Read More »

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೇರಲು ತಲೆಬೈಲು ಮಠದಲ್ಲಿ ಯತೀಶ್ ಆರ್ವಾರ್ ಪ್ರಾರ್ಥನೆ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರ ತಲೆಬೈಲು ಶ್ರೀ ನರಸಿಂಹ ದೇವರ ಮಠಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ, ಬಿಜೆಪಿಯ ಪ್ರಾಂತ ಸಹಸಂಘಟನಾ ಮಾಜಿ ಕಾರ್ಯದರ್ಶಿ ಯತೀಶ್ ಆರ್ವಾರ್ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಸರ್ಕಾರ ರಚಿಸುವಂತಾಗಬೇಕು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅತ್ಯಧಿಕ ಮತಗಳ ಅಂತರದಿಂದ ಜಯ ಗಳಿಸಬೇಕು ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಠದ ಮಂಜುನಾಥ್ ಉಡುಪ ಅವರು ಅನುಗ್ರಹ ಪ್ರಾರ್ಥನೆ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೇರಲು ತಲೆಬೈಲು ಮಠದಲ್ಲಿ ಯತೀಶ್ ಆರ್ವಾರ್ ಪ್ರಾರ್ಥನೆ Read More »

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಅಂಬಾರಿಯನ್ನು ಹೊರುತ್ತಿದ್ದ ಆನೆ ಬಲರಾಮನ ಅಂತ್ಯಕ್ರಿಯೆ ಸೋಮವಾರ ವಿಧಿವಿಧಾನ ಪೂರ್ವಕವಾಗಿ ನಡೆಯಿತು. ಬಲರಾಮನ ಕಿವಿಯಲ್ಲಿ ನಾರಾಯಣ… ನಾರಾಯಣ… ನಾರಾಯಣ… ಎಂದು ಮಾವುತ ಮೂರು ಬಾರಿ ಉಸುರುತ್ತಾ, ಕಣ್ಣೀರಿಡುತ್ತಾ ಅಂತಿಮ ವಿದಾಯ ಹೇಳುತ್ತಿದ್ದರೆ, ಆಗಮಿಸಿದ ಎಲ್ಲರ ಕಣ್ಣಂಚಿನಲ್ಲೂ ನೀರಾಡಿತು. ಸೌಮ್ಯ ಸ್ವಭಾವದ ಬಲರಾಮ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಮೈಸೂರಿನ ಗಜಪಡೆಯ ಸಾರಥಿ, ಅರಮನೆಯ ಮುಖ್ಯ ಆನೆ, ಬಲಾಢ್ಯ ಅಂಬಾರಿಯನ್ನೇ ಸಲೀಸಾಗಿ ಎತ್ತಬಲ್ಲ ಬಲರಾಮ, ಹೆಸರಿಗೆ ತಕ್ಕಂತೆ ಬಲರಾಮ. ಹಾಗೆಂದು ಎಲ್ಲಿಯೂ ತನ್ನ ಬಲ ಪ್ರದರ್ಶನ

ನಾರಾಯಣ… ನಾರಾಯಣ… ಎಂದು ಕೂಗುತ್ತಾ ಅಂಬಾರಿಯ ಬಲರಾಮನಿಗೆ ವಿದಾಯ Read More »

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನೆ ಮೇ 12 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಎನ್‍.ಕೆ.ಜಗನ್ನಿವಾಸ ರಾವ್ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿರ ವರ್ಷಗಳ ಇತಿಹಾಸ ಇರುವ ಪುತ್ತೂರು ಸೀಮೆಗೊಳಪಟ್ಟ ಈ ತೊಟ್ಟಿಲಕಯಕ್ಕೆ ಸಾಕ್ಷಿ ಎಂಬಂತೆ ಶ್ರೀ ದಂಡನಾಯಕ ಉಳ್ಳಾಲ್ತಿಯ ನೇಮನಡಾವಳಿಯಲ್ಲಿ ದರ್ಶನ ಪಾತ್ರಿಯ ಮೂಲಕ “ನಾನು ತೊಟ್ಟಿಲಕಯದಿಂದ ಅವಿರ್ಭಸಿದ್ದೇನೆ” ಎಂಬ ಮಾತನ್ನು ಉಚ್ಚರಿಸುವುದು ೈತಿಹಾಸಿಕ ವಿಷಯಕ್ಕೆ ಹಿಡಿದ

ಮೇ 12 : ಬಲ್ನಾಡು ಶ್ರೀ ಉಳ್ಳಾಲ್ತಿ ಮೂಲಸ್ಥಾನ ತೊಟ್ಟಿಲಕಯದ ಪುನಃ ಪ್ರತಿಷ್ಠಾಪನೆ Read More »

error: Content is protected !!
Scroll to Top