ಧಾರ್ಮಿಕ

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರಿನಿಂದ ಸಾಗಿಬಂದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬೊಳುವಾರು ಶ್ರೀ ಶಕ್ತಿ ಆಂಜನೇಯ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಚೆಂಡೆ ವಾದ್ಯದೊಂದಿಗೆ ಕಲಶ ಹಿಡಿದ ಮಹಿಳೆಯರು, ಕುಣಿತ ಭಜನೆ ಸಾಗಿಬಂದಿತು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, […]

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ Read More »

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ಜಾತ್ರೆಯ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡುತ್ತಿದ್ದಂತೆ, ಚಿಕ್ಕಮುಡ್ನೂರು ಭಾಗದಿಂದಲೂ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ದರ್ಬೆ ಹಾಗೂ ಬೊಳುವಾರಿನಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಈ ಮೆರವಣಿಗೆಗೆ ಚಿಕ್ಕಮುಡ್ನೂರು ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿದರು. ಚಿಕ್ಕಮುಡ್ನೂರು ಗ್ರಾಮದ ಬೀರಿಗ, ಕೆಮ್ಮಾಯಿ, ಬೀರ್ನಹಿತ್ಲು, ಕೃಷ್ಣನಗರ ಮೊದಲಾದ ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿ ಪುನೀತರಾದರು.

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ Read More »

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು. ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ‌ ಶ್ರಿ ವಜ್ರದೇಹಿ ಮಠದ‌ ಶ್ರೀ ರಾಜಶೇಖರಾನಂದ‌ ಸ್ವಾಮಿಜಿ ತೆಂಗಿನಕಾಯಿ‌ ಒಡೆಯುವ ಮೂಲಕ‌ ಉದ್ಘಾಟಿಸಿದರು. ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ,

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ Read More »

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ

​​ಗೋ ಗರ್ಭ ಅಣೆಕಟ್ಟು ದಾಟಿದ ತಿಮ್ಮಪ್ಪನ ದರ್ಶನದ ಸಾಲು ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಲ್ಲಿ ಸಾಲುಗಟ್ಟಿ ನಿಂತ ಭಕ್ತಸಮೂಹ ಪುತ್ತೂರು : ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತಜನಸಾಗರವೇ ಹರಿದು ಬರುತ್ತಿದೆ. ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ಅಧಿಕ ಸಂಖ್ಯೆಯಲ್ಲಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ತಿರುಮಲದಲ್ಲಿ ದೇವರ ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಬೇಕೆಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ. ತಿರುಮಲ

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ Read More »

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:  ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಕಲ್ವಾರಿ ಬೆಟ್ಟದ ಮೇಲೆ ಪ್ರಭು ಕ್ರಿಸ್ತರು ಮನುಕುಲದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಆ ದಿನದಂದು ಜಗತ್ತಿನಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಆದರೆ ಅರ್ಥವತ್ತಾದ ಆರಾಧನೆ ಮತ್ತು ಪ್ರಾರ್ಥನೆಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಆಯಾ ಚರ್ಚ್ ಗಳಲ್ಲಿ ನಡೆಯುತ್ತದೆ.

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ Read More »

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು :ಕೋಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಉತ್ಸವದ ಅಂಗವಾಗಿ ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ ನಡೆದು ಬಳಿಕ ಮಹಾಅನ್ನಸಂತರ್ಪಣೆ ಜರಗಿತು. ಬಳಿಕ ಪುತ್ತೂರು ಯಕ್ಷಸಾರಥಿ ಅವರಿಂದ ಶ್ರೀ ದೇವಿ ಲೀಲೆ ಯಕ್ಷಗಾನ ಬಯಲಾಟ ನಡೆಯಿತು.

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಏ. 7 ರಂದುನ ನಿಧನ ಹೊಂದಿದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರದ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕಿನ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂಡಬಿದಿರೆಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿದ್ದ ಇವರ ಅಂತ್ಯಸಂಸ್ಕಾರವು ಮಾರ್ನಾಡು ಕಲ್ಲಬೆಟ್ಟು ಗುತ್ತುಮನೆಯಲ್ಲಿ ನಡೆಯಿತು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ Read More »

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವಗಳ ಪೈಕಿ ಹೂತೇರು ಅಥವಾ ಪುಷ್ಪ ರಥಕ್ಕೆ ಹೆಚ್ಚಿನ ಮಹತ್ವ. ಬ್ರಹ್ಮರಥ, ಚಂದ್ರಮಂಡಲ ಇದ್ದರೂ, ಪುಷ್ಪರಥ ಅತೀ ಶ್ರದ್ಧೆಯ, ಭಕ್ತಿಯ ರಥ ಎಂದೇ ಜನಜನಿತ. ಹೂತೇರಿಗೆ ಮಡಿವಂತಿಕೆಯ ರಥ ಎಂದೂ ಕರೆಯಲಾಗುತ್ತದೆ. ಈ ರಥದ ಮೇಲ್ಭಾಗಕ್ಕೆ ಯಾರೆಂದರೆ ಯಾರು ಹೋಗುವಂತಿಲ್ಲ. ಅರ್ಚಕರು ರಥ ಏರಬೇಕಾದರೂ, ಮಡಿವಂತಿಕೆಯಲ್ಲಿ ಇರಬೇಕು ಎಂಬ ನಿಯಮವೂ ಇದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಧ್ವಜಾರೋಹಣ ಏರಿದ ತಕ್ಷಣ ನಂದಿ ಮಂಟಪದ ನಂದಿಗೆ ನೈವೇದ್ಯ ಸಮರ್ಪಣೆ ಮಾಡಲಾಗುತ್ತದೆ.

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ Read More »

ಏ. 9: ಪುತ್ತೂರು ಜಾತ್ರೆಗೆ ಕಡೇಶಿವಾಲಯ ಯುವಶಕ್ತಿಯಿಂದ ಶ್ರಮದಾನ

ಪುತ್ತೂರು: ಕಡೇಶಿವಾಲಯ ಯುವಶಕ್ತಿ ನೇತೃತ್ವದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 9ರಂದು ಶ್ರಮದಾನ ಸೇವೆ ನಡೆಯಲಿದೆ. ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ಮಿತ್ರಸಂಸ್ಥೆಗಳ ಒಗ್ಗೂಡುವಿಕೆಯೊಂದಿಗೆ ಶ್ರಮದಾನ ಸೇವೆ ಆಯೋಜಿಸಲಾಗಿದೆ. ಹತ್ತೂರು ಸಂಭ್ರಮಿಸುವ ಪುತ್ತೂರ ಒಡೆಯನ ಜಾತ್ರೋತ್ಸವದ ಶುಭಸಮಯದಿ ಶ್ರಮಸೇವೆಗೈಯೋಣ ಬನ್ನಿ ಎಂಬ ಧ್ಯೇಯವಾಕ್ಯದೊಂದಿಗೆ ಶ್ರಮದಾನ ನಡೆಯಲಿದೆ. ಈಗಾಗಲೇ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ಖ್ಯಾತಿ ಗಳಿಸಿರುವ ಕಡೇಶಿವಾಲಯ ಯುವಶಕ್ತಿ ತಂಡ ಏಪ್ರಿಲ್ 9ರಂದು ಜಾತ್ರೋತ್ಸವ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಮುಂದಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಏ. 9: ಪುತ್ತೂರು ಜಾತ್ರೆಗೆ ಕಡೇಶಿವಾಲಯ ಯುವಶಕ್ತಿಯಿಂದ ಶ್ರಮದಾನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ | ಏ.9 ರಂದು ಪುಷ್ಕರಣಿಯ ಶ್ರೀ ವರುಣ ದೇವರಿಗೆ ಸೇವಾ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ ಏ.10 ರಿಂದ 20 ರ ತನಕಿ ಕ್ಷೇತ್ರದ ತಂತ್ರಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಜಾತ್ರೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತಿಳಿಸಿದ್ದಾರೆ. ಅವರು ಶುಕ್ರವಾರ ದೇವಸ್ಥಾನದ ಕಚೇರಿಯಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಜಾತ್ರೋತ್ಸವದ ವಿಶೇಷತೆಗಳ ಕುರಿತು ಮಾಹಿತಿ ನೀಡಿ, ಈಗಾಗಲೇ ದೇವಸ್ಥಾನದ ಪುಷ್ಕರಣಿಯಲ್ಲಿರುವ ನೂತನ ಶಿಲಾಮಯ ಕಟ್ಟೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶನಿವಾರ ಸಂಪೂರ್ಣಗೊಳ್ಳಲಿದೆ. ಧ್ವಜಾರೋಹಣದ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ | ಏ.9 ರಂದು ಪುಷ್ಕರಣಿಯ ಶ್ರೀ ವರುಣ ದೇವರಿಗೆ ಸೇವಾ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶ Read More »

error: Content is protected !!
Scroll to Top