ಧಾರ್ಮಿಕ

ಜ. 7ರಂದು ಪಾಂಗಳಾಯಿ ನೇಮೋತ್ಸವ

ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ನೇತೃತ್ವದಲ್ಲಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ. 7ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಾರನಾಥ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ನಡೆಯಲಿದೆ. ದೈವಸ್ಥಾನದಲ್ಲಿ ಶ್ರೀ ಅರಸು ಮುಂಡ್ಯತ್ತಾಯ, […]

ಜ. 7ರಂದು ಪಾಂಗಳಾಯಿ ನೇಮೋತ್ಸವ Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿಡಿ. 31ರಿಂದ ಜ. 7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮಾಚಿಲ ಶ್ರೀ ಉಳ್ಳಾಕ್ಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಲಿದೆ. 31ರಂದು ಬೆಳಿಗ್ಗೆ 8ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, 8:30ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರಕಾಣಿಕೆ ತರಲಾಗುವುದು. 9ಕ್ಕೆ ದೇವಾಲಯದಲ್ಲಿ ತೋರಣ ಮುಹೂರ್ತ, 12ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ. ರಾತ್ರಿ 7ಕ್ಕೆ ಪ್ರಾಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ Read More »

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ

ಪುತ್ತೂರು: ಭಜನೆ ಹಾಗೂ ಭಜಕರ ಬಗ್ಗೆ, ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಗಳನ್ನು ಫೇಸ್ ಬುಕ್ ಹಾಗೂ ವಾಟ್ಸ್ ಆ್ಯಪ್ ಗಳಲ್ಲಿ ಹರಿಬಿಟ್ಟು ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಉಪವಲಯ ಅರಣ್ಯ ಅಧಿಕಾರ ಸಂಜೀವ ಪೂಜಾರಿ ಕಾಣಿಯೂರ್ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣೆಗಳಲ್ಲಿ ಗುರುವಾರ ವಿಶ್ವ ಹಿಂದು ಪರಿಷದ್ ಹಾಗೂ ಭಜರಂಗದಳ ಏಕಕಾಲದಲ್ಲಿ ಪ್ರತಿಭಟನೆ ನಡೆಸಿತು. ಪುತ್ತೂರು ನಗರ ಪೊಲೀಸ್

ಸಂಜೀವ ಪೂಜಾರಿ ಅಮಾನತಿಗೆ ಆಗ್ರಹಿಸಿ ಏಕಕಾಲದಲ್ಲಿ ಪ್ರತಿಭಟನೆ | ಪುತ್ತೂರು ನಗರ ಪೊಲೀಸ್ ಠಾಣೆ, ಉಪ್ಪಿನಂಗಡಿ, ಬೆಳ್ಳಾರೆ, ಕಡಬ, ಬೆಳ್ತಂಗಡಿ, ಸುಳ್ಯ ಪೊಲೀಸ್ ಠಾಣಾ ಮುಂಭಾಗ ಧರಣಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವದ ಅಂಗವಾಗಿ ಡಿ. 29ರಂದು ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 28 ಹಾಗೂ 29ರಂದು ಕಿರುಷಷ್ಠಿ ಉತ್ಸವ ನಡೆಯಿತು. ಡಿ. 29ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಗಂಧ – ಪ್ರಸಾದ, ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆ ಜರಗಿತು. ಮಧ್ಯಾಹ್ನದ ನಂತರ ಶ್ರೀ ವ್ಯಾಘ್ರ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಬಲಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ

ಪುತ್ತೂರು: ತಾಲೂಕಿನ ಕಾರಣಿಕ ದೇವಸ್ಥಾನವಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಧ್ಯಾಹ್ನ ಕಿರುಷಷ್ಠಿ, ರಾತ್ರಿ ದೇವರ ಬಲಿ ಉತ್ಸವ ನಡೆದು, ನೃತ್ಯ ಬಲಿ ಸೇವೆ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಕಿರುಷಷ್ಠಿ ಉತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ತುಲಾಭಾರ, ಮಹಾಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ 6.30ಕ್ಕೆ ದುರ್ಗಾಪೂಜೆ ನಡೆದು, ಬಳಿಕ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ, ಬಲಿ ಉತ್ಸವ, ನೃತ್ಯ ಬಲಿ ಸೇವೆ Read More »

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಿಗ್ಗೆ 9ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಿರು ಷಷ್ಠಿ ಹಿನ್ನೆಲೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ Read More »

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ

ಪುತ್ತೂರು: ಜಾತ್ರೋತ್ಸವ ಸಂಭ್ರಮದಲ್ಲಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರಸೇವೆ ಮಾಡಿದ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕುಂಜೂರುಪಂಜ ಒಕ್ಕೂಟದ ಸದಸ್ಯರಿಗೆ ದೇವಸ್ಥಾನದಲ್ಲಿ ಪ್ರಸಾದ ನೀಡಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ್ ರಾವ್ ಆರ್ಯಾಪು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಲ್ನಾಡು ವಲಯದ ಮೇಲ್ವಿಚಾರಕ ಹರೀಶ್ ಕೆ., ಸೇವಾ ಪ್ರತಿನಿಧಿ ಆಶಾಲತಾ, ಶೌರ್ಯ ತಂಡದ ಪ್ರತಿನಿಧಿಗಳಾದ ವಿನಯ್ ಕೋಟ್ಲಾರ್, ಸದಸ್ಯರಾದ ಜಗದೀಶ್, ನವೀನ, ವಿನೋದ್, ಅರುಣ, ಸಂಧ್ಯಾ, ದಿವ್ಯಾ, ಧನ್ಯಾ, ಸ್ವಾತಿ,

ಕಾರ್ಪಾಡಿ ದೇವಸ್ಥಾನದಲ್ಲಿ ಕರಸೇವೆ Read More »

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು: ಶಾಂತಿಮೊಗರು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 28ರಂದು ಕಿರು ಷಷ್ಠಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಇಂದು ಕುದ್ಮಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಕಿರುಷಷ್ಠಿ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ Read More »

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ

ಆಸ್ತಿ ರಕ್ಷಣೆಗೆ ಕ್ರಮ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ಬೆಳಗಾವಿ : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇವಾಲಯಗಳು ಮತ್ತು ಅವುಗಳ ಆಸ್ತಿ ವಿವರಗಳನ್ನ ಸಮಗ್ರ ಸಮೀಕ್ಷೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ದತ್ತಿ

ದೇವಸ್ಥಾನಗಳ ಸಮಗ್ರ ಸಮೀಕ್ಷೆಗೆ ನಿರ್ಧಾರ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ಮಂಡಲ ರಂಗಪೂಜೆಯು ಮಂಗಳವಾರ ರಾತ್ರಿ ನಡೆದ ದೊಡ್ಡ ರಂಗಪೂಜೆಯೊಂದಿಗೆ ಸಮಾಪನಗೊಂಡಿತು. ಬುಧವಾರ ಹಾಗೂ ಗುರುವಾರ ದೇವಸ್ಥಾನದ ವಾರ್ಷಿಕ ಕಿರುಷಷ್ಠಿ ಉತ್ಸವ ನಡೆಯಲಿದೆ. ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ನಡೆದು, ಮಧ್ಯಾಹ್ನ ಉಗ್ರಾಣ ಪೂಜೆ, ಮಹಾಪೂಜೆ ನೆರವೇರಿತು. ಸಂಜೆ ಗಣೇಶ ಪ್ರಾರ್ಥನೆ, ದೀಪಾರಾಧನೆ ನಡೆದು ಬಳಿಕ ದೊಡ್ಡರಂಗಪೂಜೆ ಜರಗಿತು. ಕಳೆದ ೪೮ ದಿನಗಳಿಂದ ನಿರಂತರವಾಗಿ ರಂಗಪೂಜೆ ಜರಗಿತ್ತು. ವಿವಿಧ ಭಜನಾ ತಂಡಗಳು ಭಜನಾ ಸೇವೆ ನೆರವೇರಿಸಿಕೊಟ್ಟಿತು. ಕೊನೆ ದಿನವಾದ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ Read More »

error: Content is protected !!
Scroll to Top