ಧಾರ್ಮಿಕ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಬೃಂದಾವನದ 45ನೇ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯ 45ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ನಡೆಯಿತು. ಮಹೋತ್ಸವದ ಅಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ಪೂಜೆ, ಹೋಮಾದಿಗಳು, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಬೃಂದಾವನದ 45ನೇ ಪ್ರತಿಷ್ಠಾ ಮಹೋತ್ಸವ Read More »

ಏ.10 ರಿಂಧ 17 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ | ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಈ ಬಾರಿಯ ಜಾತ್ರೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಪೂರ್ಣ ಸಹಕಾರ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ವಿನಂತಿಸಿದ್ದಾರೆ. ಜಾತ್ರೋತ್ಸವದ ಅಂಗವಾಗಿ ವಿವಿಧ ಜವಾಬ್ದಾರಿಗೆ ಸಂಬಂಧಿಸಿ ಬುಧವಾರ ದೇವಸ್ಥಾನದ ಸಭಾಭವನದಲ್ಲಿ ನಡೆದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಾತ್ರೆಗೆ ಬರುವ ಜನಸಂಖ್ಯೆ, ವಾಹನಗಳ ಲೆಕ್ಕಾಚಾರ ಹಾಗೂ ಪೇಟೆ ಸವಾರಿ

ಏ.10 ರಿಂಧ 17 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ | ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ Read More »

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು

ಪೂಜಾ ವಿಧಿ ನೆರವೇರಿಸುವಾಗ ದುರಂತ- ಮಡಿದವರೆಲ್ಲ ಯುವ ಅರ್ಚಕರು ಚೆನ್ನೈ : ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು Read More »

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ

ಪುತ್ತೂರು : ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ ಮಂಗಳವಾರದಿಂದ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗದವರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ಯಕ್ಷಗಾನ ತಾಳಮದ್ದಳೆ ಶ್ರೀರಾಮ ದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಕು|ಸಿಂಚನಾ, ಮೂಡುಕೋಡಿ,  ಮದ್ದಳೆಯಲ್ಲಿ ಮಾ|ಅದ್ವೈತ್ ಕೃಷ್ಣ, ಪುತ್ತೂರು, ಚೆಂಡೆಯಲ್ಲಿ ಮಾ| ಅದ್ವೈತ್, ಕನ್ಯಾನ ಸಹಕರಿಸಿದರು. ಮುಮ್ಮೇಳದಲ್ಲಿ,ಪದ್ಮಾ ಕೆ ಆರ್ ಆಚಾರ್ಯ ಹನುಮಂತನಾಗಿ, ಜಯಲಕ್ಷ್ಮಿ ವಿ ಭಟ್, ವೀರಮಣಿಯಾಗಿ, ಪ್ರೇಮಾ ಕಿಶೋರ್ ಈಶ್ವರನಾಗಿ, ಶುಭಾ ಪಿ ಆಚಾರ್ಯ ಶತ್ರುಘ್ನನಾಗಿ,

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ Read More »

ಇಂದು ಹನುಮಾನ್‌ ಜಯಂತಿ

ಮಹಾ ಬ್ರಹ್ಮಚಾರಿ, ಅದ್ವಿತೀಯ ಪಂಡಿತ, ವ್ಯಾಕರಣಿ, ಮಹಾ ಮೇಧಾವಿ ಹನುಮಂತ ಯತ್ರ ಯತ್ರ ರಘುನಾಥ ಕೀರ್ತನಂತತ್ರ ತತ್ರ ಕೃತಮಸ್ತಕಾಂಜಲಿಮ್|ಭಾಷ್ಪವಾರಿ ಪರಿಪೂರ್ಣ ಲೋಚನಂಮಾರುತಿಂ ನಮತ ರಾಕ್ಷಸಾಂತಕಮ್||ಹನುಮಂತ ಸಪ್ತ ಚಿರಂಜೀವಿಗಳಲ್ಲಿ ಒಬ್ಬ, ಮಹಾ ಬ್ರಹ್ಮಚಾರಿ, ಅದ್ವಿತೀಯ ಪಂಡಿತ, ವ್ಯಾಕರಣಿ, ಮಹಾ ಮೇಧಾವಿ, ಸಂಗೀತ ತಿಳಿದವ, ವಾಸ್ಕೋವಿದ, ಕುಶಲಮತಿ, ಕವಿಕುಲಯೋಗಿ, ನೀತಿಕೋವಿದ, ಇಚ್ಛಾರೂಪಿ. ಎಂಥ ಕೆಲಸವನ್ನೂ ಮಾಡಬಲ್ಲ ಪರಾಕ್ರಮಿ. ಇಂಥ ಸಾಮರ್ಥ್ಯಗಳೆಲ್ಲ ಇದ್ದುದರಿಂದಲೇ ರಾಮನ ಪರಮಭಕ್ತನಾದ. ಇಂದಿಗೂ ಚಿರಂಜೀವಿಯೆಂದೇ ಪ್ರಸಿದ್ಧನಾಗಿರುವ ಆಂಜನೇಯ, ಎಲ್ಲಿ ರಾಮಕಥೆ, ರಾಮಕೀರ್ತನ ಜರುಗುತ್ತಿದೆಯೋ ಅಲ್ಲಿ ಭಕ್ತಿಯಿಂದ ಕೈಮುಗಿದು

ಇಂದು ಹನುಮಾನ್‌ ಜಯಂತಿ Read More »

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ

ಪುತ್ತೂರು: ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವದ ಇಂದು  ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ 8 ಕ್ಕೆ ನಾಗತಂಬಿಲ, 8.30 ಕ್ಕೆ ಮುಹೂರ್ತ ತೋರಣ, ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರು ಬಂದು ನೇತ್ರಾದಿ ಗರಡಿಯಲ್ಲಿ ದರ್ಶನ ನಡೆಯಿತು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ನಡೆಯುವ ನೇಮೋತ್ಸವ ನ್ಯೂಸ್ ಪುತ್ತೂರು ಯೂ ಟ್ಯೂಬ್ ಚಾನೆಲ್ನ ನಲ್ಲಿ  ನೇರ ಪ್ರಸಾರಗೊಳ್ಳಲಿದೆ.

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ Read More »

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ

ಪುತ್ತೂರು: ಸುಳ್ಯ ತಾಲೂಕಿನ  ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ ಏ.5 ಬುಧವಾರ ರಾತ್ರಿ ನಡೆಯಲಿದೆ. ಬುಧವಾರ ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರ ಹೊರಡುವುದು. ನೇತ್ರಾದಿ ಗರಡಿಯಲ್ಲಿ ದರ್ಶನ. ರಾತ್ರಿ 8 ಕ್ಕೆ ಬೈದೇರುಗಳು ಗರಡಿ ಇಳಿಯುವುದು. ರಾತ್ರಿ 2 ಕ್ಕೆ ಕಿನ್ನಿದಾರು ಗರಡಿ ಇಳಿಯುವುದು. ಪ್ರಾತಃಕಾಲ 3 .30 ಕ್ಕೆ ಎಣ್ಮೂರು ಕಟ್ಟಬೀಡಿಗೆ ಬೈದೇರುಗಳು ಹಾಲು ಕುಡಿಯಲು ಬಂದು ಬೀಡಿಗೆ ಕಾಣಿಕೆ ಅರ್ಪಿಸುವುದು. 5 ಕ್ಕೆ ಕೋಟಿ-ಚೆನ್ನಯರ ದರ್ಶನ ರಂಗಸ್ಥಳದಲ್ಲಿ (ಸೇಟು) ಬೈದೇರುಗಳ

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ Read More »

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಪುತ್ತೂರು: ಅಶೋಕ್ ಕುಮಾರ್ ರೈ ಅವರ ರಾಜಕೀಯ ಶ್ರೇಯಸ್ಸಿ ಗಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ಕಾಂಗ್ರೆಸ್ ಟಿಕೆಟ್ ಗೊಂದಲ ನಿವಾರಣೆ ಗಾಗಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಬನ್ನೂರುರವರು ಬನ್ನೂರು ಗ್ರಾಮದ ಶನಿಶ್ವರ ದೇವರ ಸನ್ನಿಧಿ ಯಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಶನಿಶ್ವರ ದೇವರ ಸನ್ನಿಧಿಯ ಅರ್ಚಕ  ದಿನೇಶ್ ಸಾಲಿಯಾನ್ ವಿಶೇಷ ಪ್ರಾರ್ಥನೆ ನೆರವೇರಿಸಿದರು ನವೀನ್ ರೈ ಬನ್ನೂರು ಅವರ ನೇತೃತ್ವ ದಲ್ಲಿ ನಡೆದ ವಿಶೇಷ ಪ್ರಾರ್ಥನೆ ಸಂದರ್ಭ

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ Read More »

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.5 ರಿಂದ 7 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು. ಸಂಜೆ ಕೊಡಿಪಾಡಿ ಶಾಲೆ, ಆನಾಜೆ, ಅರ್ಕ, ಓಜಾಲ, ಹನಿಯೂರು, ಪಲ್ಲತ್ತಾರು ಮೂಲಕ ಹಸಿರುವಾಣಿ ಮೆರವಣಿಗೆ ಸಾಗಿ ಬಂದ ಮೆರವಣಿಗೆಗೆ ಚೆಂಡೆ, ವಾದ್ಯಗಳು, ಮುತ್ತು ಕೊಡೆಗಳು ಮೆರೆಗು ನೀಡಿತು. ಬಳಿಕ ತೆಂಕಿಲ ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಹಲಸಿನಮಕ್ಕಿ ನರಸಿಂಹ ಶಾಸ್ತ್ರೀ ವೀರಚಿತ “ಶ್ರೀರಾಮ ದರ್ಶನ” ಯಕ್ಷಗಾನ ತಾಳಮದ್ದಳೆ ಜರಗಿತು. ರಾತ್ರಿ ಶ್ರೀ ಮಹಾಗಣಪತಿ

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ Read More »

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಮಂಗಳವಾರ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ ನಡೆಯಿತು. ಭಗವಾನ್ ಮಹಾವೀರ ಅವರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಿ ಮಾತನಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್, ಭಗವಾನ್ ಮಹಾವೀರರು ಸತ್ಯ, ಅಹಿಂಸಾ, ತತ್ವಾದರ್ಶಗಳು ವಿಶ್ವಕ್ಕೆ ಮಾದರಿ. ಅವರು ನೀಡಿರುವ ಶಾಂತಿಯ ಸಂದೇಶ ಜಗತ್ತಿಗೆ ಮಾದರಿ. ಅದನ್ನು ನಾವು ಪಾಲನೆ ಮಾಡುವುದು ಇಂದಿನ ಅಗತ್ಯ ಎಂದರು.

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ Read More »

error: Content is protected !!
Scroll to Top