ಧಾರ್ಮಿಕ

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ

ಪುತ್ತೂರು: ಜಾತ್ರೆಯ ಸಡಗರದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯಲ್ಲಿ ವರುಣನ ಕೃಪೆಗಾಗಿ ಗಂಗಾರತಿ ನಡೆಯಿತು. ದೇವಸ್ಥಾನದಲ್ಲಿ ದೇವರ ಬಲಿ ಹೊರಟು, ಕಟ್ಟೆಪೂಜೆ ನಡೆಯುವ ವೇಳೆಯಲ್ಲಿ ಗಂಗಾರತಿ ನಡೆಯಿತು. ಹಿನ್ನೆಲೆಯಲ್ಲಿ ಮಂತ್ರೋಚ್ಛಾರ ಕೇಳಿ ಬರುತ್ತಿದ್ದಂತೆ, ಪುಷ್ಕರಣಿಯ ನಾಲ್ಕು ದಿಕ್ಕುಗಳಲ್ಲಿ ನೆರೆದ ಭಕ್ತರು ತಮ್ಮ ಕೈಯಾರೆ ಆರತಿ ಬೆಳಗಿದರು. ಪುಷ್ಕರಣಿಯ ಕಟ್ಟೆ ನಾವೀನ್ಯಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ವರುಣನ ವಿಗ್ರಹ ಕಂಡು ಭಕ್ತರು ಪುನೀತಗೊಂಡಿದ್ದರು. ಬಿರುಬೇಸಗೆಯಿಂದ ಕಂಗೆಟ್ಟ ಜನರು ಇದೀಗ ಗಂಗಾರತಿ ಮಾಡಿ, ತಮ್ಮ ಮನದ ಅಭಿಲಾಷೆ […]

ವರುಣ ಕೃಪೆಗೆ ಗಂಗಾರತಿ | ಶ್ರೀ ಮಹಾಲಿಂಗೇಶ್ವರ ಪುಷ್ಕರಣಿಗೆ ಭಕ್ತರ ಆರತಿ Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ದೊರಕಿದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದಭ‍್ದಲ್ಲಿ ಬಲ್ನಾಡು ಬಿಜೆಪಿ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನಕ್ಕೆ ಭೇಟಿ | ಕಾರ್ಯಕರ್ತರಿಂದ ಸ್ವಾಗತ Read More »

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ. ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ Read More »

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ

ಪುತ್ತೂರು: ತುಳುವರ ಅತ್ಯಂತ ಮಹತ್ವದ ಹಬ್ಬ ಬಿಸು ಹಬ್ಬ ತುಳುವರ ಹೊಸ ವರ್ಷ ಎಂದೇ  ಪ್ರಚಲಿತದಲ್ಲಿದ್ದು, ಏ.15 ರಂದು ತುಳುನಾಡಿನಲ್ಲಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದ ಹಲವು ಕಡೆಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ, ಕರಾವಳಿ ಭಾಗದಲ್ಲಿ ಸೌರಮಾನ ಯುಗಾದಿಯನ್ನು ಅಚರಿಸಲಾಗುತ್ತದೆ. ಈ ದಿನ ಕುಟುಂಬದ ಸದಸ್ಯರೆಲ್ಲರೂ ಬೇವು – ಬೆಲ್ಲ ಸವಿದು ಹಿರಿಯರ ಆಶೀರ್ವಾದವನ್ನು ಪಡೆದು ನಂತರ ತಮ್ಮ ದಿನವನ್ನು ನಡೆಸುತ್ತಾರೆ. ಕೇರಳದಲ್ಲಿ ವಿಷು ಕಣಿ ಇಡುವ ಸಂಪ್ರದಾಯವಿದೆ. ಈ ದಿನ ವಿಷು ಕಣಿಗೆ ಇಟ್ಟ ವಸ್ತುಗಳನ್ನು ಮೊದಲು ನೋಡುವುದರಿಂದ

ಇಂದು ತುಳುವರ ಹಬ್ಬ ಬಿಸುಹಬ್ಬ | ತುಳುನಾಡಿನ ತುಳುವರ ಮನೆಗಳಲ್ಲಿ ಸಂಭ್ರಮದ ಆಚರಣೆ Read More »

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ

ಪುತ್ತೂರು: ಮುಡಿಪು ಬಳಿಯ ಕಟ್ಟೆಮಾರು ಪೆದಮಲೆಗೆ ಆಗಮಿಸಿದ್ದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪೆದಮಲೆ ನಾಗರಾಜ ಭಟ್ಟರ ಮನೆಯಲ್ಲಿ ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಇದೇ ಸಂದರ್ಭ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಜಿ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಕೆಎಸ್‍ಆರ್‍ ಟಿಸಿ ಪುತ್ತೂರು ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗಳ ವತಿಯಿಂದ ಅನ್ನಸಂತರ್ಪಣೆ ಜರಗಿತು. ಅಷ್ಟಾವಧಾನ ಸೇವೆ : ಜಾತ್ರೋತ್ಸವದ ಅಂಗವಾಗಿ ಶಿವನಿಗೆ ಇಷ್ಟವಾದ ಅಷ್ಟಾವಧಾನ ಸೇವೆ ಮಂಗಳವಾರ ರಾತ್ರಿ ನಡೆಯಿತು. ಋಗ್ವೇದ, ಯಜುರ್ವೇದ, ಸಾಮದೇದ, ಅಥರ್ವವೇದ, ಶಾಸ್ತ್ರಾ, ಪುರಾಣ, ಶಂಖನಾದ, ಪಂಚಾಂಗ, ಅಷ್ಟಕ, ಸಂಗೀತ, ವೀಣೆ, ನೃತ್ಯ, ಯಕ್ಷಗಾನ, ಗಾಯನ, ರುದ್ರವಾದ್ಯ, ವೀಣೆ, ಸ್ಯಾಕ್ಸೋಫೋನ್ ಮುಂತಾದ ಸರ್ವ ವಾದ್ಯಗಳ ಮೇಳೈಸುವಿಕೆಯೊಂದಿಗೆ ಅಷ್ಟಾವಧಾನ ಸೇವೆ ಜರಗಿತು. ಬಳಿಕ  ದೇವರ ಬಲಿ ಹೊರಟು ಉತ್ಸವ, ದೇವಸ್ಥಾನದ ವಠಾರದ ಕಟ್ಟೆಯಲ್ಲಿ ಪೂಜೆಗೊಂಡು ಬಳಿಕ ಶ್ರೀ ದೇವರು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ ಮಾಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ | ಅಷ್ಟಾವಧಾನ ಸೇವೆ | ಪೇಟೆ ಸವಾರಿ Read More »

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ

ಪುತ್ತೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಪುತ್ತೂರು ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಆಶಾ ತಿಮ್ಮಪ್ಪ ಅವರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜಾತ್ರಾ ಸಂಭ್ರಮದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತಮ್ಮ ದಿನಚರಿಗೆ ಚಾಲನೆ ನೀಡಿದರು. ದೇವಸ್ಥಾನದಿಂದ ಪುತ್ತೂರು ಬಿಜೆಪಿ ಪಕ್ಷದ ಕಚೇರಿಗೆ ತೆರಳಿದರು.

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ Read More »

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ

ಪುತ್ತೂರು: ಅನಾರೋಗ್ಯದ ವೇಳೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರನ್ನು ಗುರುತಿಸಿದ ಬಸವ, ಕೃತಜ್ಞತೆ ತೋರಿದ ಭಾವುಕ ಘಟನೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಸೋಮವಾರ ರಾತ್ರಿ ನಡೆಯಿತು. ಸೋಮವಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಆರಂಭವಾಗಿದೆ. ದೇವರ ಉತ್ಸವ, ಸವಾರಿ ಸಂದರ್ಭ ಮುಂಭಾಗದಿಂದ ದೇವರ ಬಸವ ಸಾಗುತ್ತದೆ. ಹೀಗೆ ಸಾಗುವಾಗ ದಾರಿ ಮಧ್ಯೆ ಎದುರಾದ ಪುತ್ತೂರು ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಅವರನ್ನು ಗುರುತಿಸಿ, ಕೃತಜ್ಞತಾ ಭಾವದಿಂದ ಪ್ರೀತಿ ತೋರಿಸಿತು.

ಶ್ರೀ ಮಹಾಲಿಂಗೇಶ್ವರ ದೇವರ ಬಸವನ ಕೃತಜ್ಞತೆ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ, ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಸಭೆ ನಡೆಯಿತು. ಕೋಶಾಧಿಕಾರಿ ನವೀನ್ ರೈ ಶಿಬಿರ ಬ್ರಹ್ಮಕಲಶೋತ್ಸವದ ಲೆಕ್ಕ ಪತ್ರ ಮಂಡಿಸಿದರು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಸದಸ್ಯ ಸುಜಯ ತಂತ್ರಿ ಅಭಿನಂದನಾ ಮಾತುಗಳನ್ನಾಡಿ, ಕಾರ್ಯಕರ್ತರ ಉತ್ತಮ ಸಂಘಟನೆ, ನಿಷ್ಠೆಯ ಶ್ರಮ, ಉತ್ತಮ ಬಾಂಧವ್ಯತೆಯಿಂದಾಗಿ ಕ್ಷೇತ್ರದಲ್ಲಿ ಏಳು ದಿನಗಳ ಕಾಲ ನಡೆದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರುವಲ್ಲಿ

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ : ಅಭಿನಂದನಾ ಸಭೆ Read More »

error: Content is protected !!
Scroll to Top