ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ತೆನೆ ಪೂಜೆ | ಸಭಾಭವನದ ಹಾಸು ಕಲ್ಲು ಉದ್ಘಾಟನೆ
ಕಾಣಿಯೂರು: ಕುದ್ಮಾರಿನ ಜನತೆಯ ಪ್ರೀತಿ, ಸಹಕಾರ ಶ್ಲಾಘನೀಯವಾಗಿದ್ದು ದೇವಸ್ಥಾನದ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಯಶಸ್ವಿಯಾಗಿ ನಡೆದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು. ಅವರು ಆ.27 ರಂದು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದ ನೆಲಕ್ಕೆ ಅಳವಡಿಸಿದ ಹಾಸು ಕಲ್ಲನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಶಾಂತಿಮೊಗರು ಕ್ಷೇತ್ರವು […]










