ಧಾರ್ಮಿಕ

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ

ಪುತ್ತೂರು : ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ. ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ […]

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 3ರಂದು ಪ್ರತಿಷ್ಠಾ ಮಹೋತ್ಸವ, ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಏ. 2ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ಭಜನ ಮಂದಿರದಿಂದ ದೇವಸ್ಥಾನದವರೆಗೆ ಹೊರೆಕಾಣಿಕೆ ಮೆರವಣಿಗೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ. 3ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆದು,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ Read More »

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ

ಪುತ್ತೂರು: ಮಾಡಾವು ಪಲ್ಲತ್ತಡ್ಕದ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವ ಏ. 5ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ, ಮಧ್ಯಾಹ್ನ ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಕೆಯ್ಯೂರು ಶ್ರೀ ದುರ್ಗಾ ಭಜನಾ ಮಂಡಳಿಯಿಂದ ಭಜನೆ, ಭಂಡಾರ ತೆಗೆದು ಅನ್ನಸಂತರ್ಪಣೆ ಬಳಿಕ ಶ್ರೀ ಹೊಸಮ್ಮ ದೈವದ ನೇಮೋತ್ಸವ,

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ Read More »

ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಬಿಡುಗಡೆಗೊಳಿಸಿದರು. ಏಪ್ರಿಲ್ 26, 27ರಂದು ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವ ನಡೆಯಲಿದೆ. ಅದೇ ದಿನ ಚಂಡಿಕಾ ಹೋಮ ಸಹಿತ ಮಹಾ ಉತ್ಸವ ನಡೆಯಲಿದೆ. ಶ್ರೀ ಅಮ್ಮನವರ ಬೆಳ್ಳಿಯ ಕತ್ತಿ ಮತ್ತು ಬೆಳ್ಳಿಯ ತ್ರಿಶೂಲ ಸಮರ್ಪಣೆಯೂ ನಡೆಯಲಿದೆ. ವಾರ್ಷಿಕ ಮಹೋತ್ಸವಕ್ಕೆ ಮೊದಲು ಅಂದರೆ ಏಪ್ರಿಲ್ 20ರಂದು ಗೊನೆ ಮುಹೂರ್ತ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಬಿಡುಗಡೆ Read More »

ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ

ಪುತ್ತೂರು: ತಟ್ಟಿ ಚಪ್ಪರಕ್ಕೆ ಸಾಂಪ್ರದಾಯಿಕ ಮನ್ನಣೆಯಿದೆ. ಜಾತ್ರೆಯಲ್ಲೂ ತಟ್ಟಿ ಚಪ್ಪರಕ್ಕೆ ಪ್ರಾಶಸ್ತ್ಯ ನೀಡಲಾಗುತ್ತದೆ. ಪುತ್ತೂರ ಈಶನ ಜಾತ್ರೆಯಲ್ಲಿ ತಟ್ಟಿ ಚಪ್ಪರದ ವಿಶೇಷ ಮೆರುಗು ಇರುತ್ತದೆ. ಈ ವರ್ಷದ ಹೆಚ್ಚುಗಾರಿಕೆ ಎಂದರೆ, ಅಡಿಕೆ ಕಂಬದ ಬದಲಿಗೆ ಶಾಶ್ವತ ಕಂಬದ ಅಳವಡಿಕೆ. ಪ್ರತೀ ವರ್ಷ ಒಳಾಂಗಣದಲ್ಲಿ ಹಾಕುವ ಚಪ್ಪರದ ಕಂಬಗಳನ್ನು ಅಡಕೆ ಮರದಿಂದ ತಯಾರಿಸಿದ ಕಂಬಗಳನ್ನು ಹಾಕಲಾಗುತ್ತದೆ. ಆದರೆ ಈ ಬಾರಿಯ ವಿಶೇಷತೆ ಎಂದರೆ ಶಾಶ್ವತ ಸ್ಟೀಲ್ ಕಂಬಗಳನ್ನು ಈಗಾಗಲೇ ಹಾಕಲಾಗಿದೆ. ಕಂಬದ ಮೇಲೆ ಕೇವಲ ತಟ್ಟಿಗಳನ್ನು ಹಾಕಲಾಗುತ್ತದೆ. ಜಾತ್ರೆ

ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ Read More »

ಕಟ್ಟಿ ನೇಮೊಡು ಜೀವ ಪೊ೦ಡ ಅರ್ದಲ ದೆಪ್ಪರೆ ಇಜ್ಜಿ | ಪರತಿ ಮಾಂಗಣೆ ಪಾಡ್ದನದಲ್ಲೂ ಉಲ್ಲೇಖ

ಪುತ್ತೂರು: ದೈವಾರಾಧನೆ ಕಲೆಯಲ್ಲ ಬದುಕು, ಆರಾಧನಾ ಪ್ರಾಕಾರ. ಇಲ್ಲಿನ ಪ್ರತಿಯೊಂದು ಆಚರಣೆಗೂ ಒಂದೊಂದು ಹಿನ್ನೆಲೆ ಇದೆ. ದೈವಾರಾಧನೆಯ ನಡೆಯಲ್ಲೇ ದೈವ ನರ್ತಕ ಮೃತಪಟ್ಟರೆ, ಅದಕ್ಕೂ ಒಂದು ಕ್ರಮವಿದೆ. ದೈವಾರಾಧನೆ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟ ಘಟನೆ ಇತ್ತೀಚೆಗೆ ದೋಳ್ಪಾಡಿಯಲ್ಲಿ ನಡೆದಿತ್ತು. ಕೆಲ ವರ್ಷಗಳ ಹಿಂದೆ ಉಡುಪಿಯಲ್ಲೂ ಇಂತಹದ್ದೇ ಘಟನೆ ನಡೆದಿತ್ತು. ಅಲ್ಲಿ ಬೈದರ್ಕಳ ನೇಮೋತ್ಸವದಲ್ಲಿ ಕೋಟಿ ದೈವದ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದರು. ಇಂತಹ ಘಟನೆ ನಡೆದಾಗ ಮುಖದ ಬಣ್ಣ ತೆಗೆಯದೇ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಕಟ್ಟಿ ನೇಮೊಡು ಜೀವ ಪೊ೦ಡ ಅರ್ದಲ ದೆಪ್ಪರೆ ಇಜ್ಜಿ | ಪರತಿ ಮಾಂಗಣೆ ಪಾಡ್ದನದಲ್ಲೂ ಉಲ್ಲೇಖ Read More »

ಏ.5 ರಿಂದ 8 : ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ

ಪುತ್ತೂರು: ರೆಂಜಿಲಾಡಿ ಗ್ರಾಮದ ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ ಏ.5 ರಿಂದ 8 ರ ತನಕ ನಡೆಯಲಿದೆ.ಏ.5 ರಂದು ಬೆಳಿಗ್ಗೆ ಧ್ವಜಾರೋಹಣ, ಉಗ್ರಾಣ ಮುಹೂರ್ತ, ಕ್ಷೇತ್ರ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕ್ಷೇತ್ರದ ದೈವಜ್ಞರಾದ ಬಾಲಕೃಷ್ಣ ನಾಯರ್ ಹಾಗೂ ಶಿಲ್ಪಿ ರಮೇಶ್ ಕಾರಂತ ಬೆದ್ರಡ್ಕದವರಿಗೆ ಗೌರವಾರ್ಪಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಏ.6 ರಂದು ನೂಜಿಗುತ್ತು ಮನೆಯಿಂದ ದೈವಗಳ ಆಭರಣವನ್ನು ಹಾಗೂ

ಏ.5 ರಿಂದ 8 : ನೂಜಿಬೈಲ್ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೋತ್ಸವ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಏ.4 ರಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಏ.4 ರಂದು ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು, ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಏ.5 ರಂದು ಬೆಳಿಗ್ಗೆ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಏ.3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ ಸಮರ್ಪಣೆ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶಾಂತಿಗೋಡು ವಿಷ್ಣುಮೂರ್ತಿ ಭಜನಾ ಮಂದಿರದಿಂದ ಭಕ್ತಾದಿಗಳು ಸಮರ್ಪಿಸಿದ ಹೊರೆಕಾಣಿಕೆ ಮೆರವಣಿಗೆ ಸಾಗಿ ಶ್ರೀ ದೇವಸ್ಥಾನದಲ ಉಗ್ರಾಣದಲ್ಲಿ ಜಮಾವಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ Read More »

error: Content is protected !!
Scroll to Top