ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ ಹಾಗೂ ವರ್ಷಾವಧಿ ನೇಮ ನಡಾವಳಿ ಕುರಿತು ಪೂರ್ವಭಾವಿ ಸಭೆ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿ, ಏ.16 ರಂದು ಸಲು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮಿಸಲಿದ್ದು,ಈ ನಿಟ್ಟಿನಲ್ಲಿ ಈ ಬಾರಿ ಬೆಳಗ್ಗೆಯಿಂದಲೇ ಹೂ ಅರ್ಪಿಸಿ ಪ್ರಸಾದ ಪಡೆದುಕೊಳ್ಳಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಭಂಡಾರ ಸಂಜೆ ಆಗಮಿಸಿದ ಬಳಿಕ […]

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಉತ್ಸವದ ಅಂಗವಾಗಿ ಸೋಮವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆಯಿತು. ಬಳಿಕ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಭಕ್ತಾದಿಗಳು ಸೇವಾ ಪೂಜೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರ ನಗರ, ಕಲ್ಲೇಗ ಪೇಟೆ ಸವಾರಿಗೆ ತೆರಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಸೋಮವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಂಟೆ 9.25 ರ ನಂತರದ ವೃಷಭ ಲಗ್ನ ಸುಮುಹೂರ್ತದಲ್ಲಿ ಭಕ್ತಾದಿಗಳ ಜಯ ಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ವಿವಿಧ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಸೋಮವಾರ ಮುಂಜಾನೆಯಿಂದಲೇ ಸೀಮೆಯ ಭಕ್ತಾದಿಗಳು ಫಲಪುಷ್ಪ, ಸೀಯಾಳ, ವಿವಿಧ ಹಸಿರುವಾಣಿಯನ್ನು ಶ್ರೀ ದೇವಸ್ಥಾನಕ್ಕೆ ಒತ್ತಾಯಿಸಿದರು. ಬಳಿಕ ಧ್ವಜಸ್ತಂಭದ ಕಟ್ಟೆಗೆ ಹಸಿರುವಾಣಿಯನ್ನು ಕಟ್ಟಿ ಶೃಂಗರಿಸಲಾಯಿತು. ಮಧ್ಯಾಹ್ನ ಮಹಾಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಧ್ವಜಾರೋಹಣದ ಮೂಲಕ ಚಾಲನೆ | ಇತಿಹಾಸದಲ್ಲಿ ಪ್ರಥಮ ಬಾರಿಗೆ ಶ್ರೀ ವರುಣ ದೇವರ ಪೂಜೆಯೊಂದಿಗೆ ಜಾತ್ರೆ ಆರಂಭ Read More »

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.

ಪುತ್ತೂರು: ಪುತ್ತೂರಿನ ಮಾಯಿದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಶನಿವಾರ ರಾತ್ರಿ ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ ಯೇಸುವನ್ನು ಶಿಲುಬೆಗೆ ಏರಿಸಿದಾಗ ಹೊಡೆದಿರುವoತಹ ಮೊಳೆಗಳನ್ನು ಚುಚ್ಚಲಾಗುತ್ತದೆ. ತದನಂತರ ಆಶೀರ್ವದಿಸಿದ ಹೊಸ ಬೆಂಕಿಯಿಂದ ಮೇಣದ ಬತ್ತಿಯನ್ನು ಹೊತ್ತಿಸಲಾಗುತ್ತದೆ. ಈ ಮೇಣದ ಬತ್ತಿಯನ್ನು ಹಿಡಿದ ಯಾಜಕರು ಜನರ ನಡುವಿನಿಂದ ಹೋಗುವಾಗ ಇದು ಯೇಸಕ್ರಿಸ್ತರ ಜ್ಯೋತಿಯು ಎಂದು ಉದ್ಗರಿಸಿದಾಗ ಎಲ್ಲಾ ಭಕ್ತಾದಿಗಳು ದೇವರಿಗೆ ಮಹಿಮೆ ಸಲ್ಲಲ್ಲಿ

ಪುತ್ತೂರು ಮಾಯಿದೇ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ. Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ “ಸ್ವಚ್ಛ ಜಾತ್ರೆ ಸ್ವಚ್ಛ ಪುತ್ತೂರು” ಎಂಬ ಕಲ್ಪನೆಯೊಂದಿಗೆ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಭಕ್ತಾದಿಗಳೊಂದಿಗೆ ಮೂರು ಬಾರಿ ಓಂಕಾರ ಹೇಳಿ ತೆಂಗಿನಕಾಯಿ ಒಡೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆ ಎಲ್ಲಿ ಇರುತ್ತದೋ ಅಲ್ಲಿ ದೇವರು ಇರುತ್ತಾರೆ. ಸ್ವಚ್ಛತಾ ಮನೋಭಾವದಿಂದ ದೇವಸ್ಥಾನದ ವಠಾರವನ್ನು ನಾವೆಲ್ಲರೂ ಸೇರಿಕೊಂಡು ಮುತುವರ್ಜಿ ವಹಿಸಿ ಕೆಲಸ ಮಾಡಿದರೆ

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸ್ವಚ್ಛತಾ ಕಾರ್ಯ Read More »

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರಿನಿಂದ ಸಾಗಿಬಂದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬೊಳುವಾರು ಶ್ರೀ ಶಕ್ತಿ ಆಂಜನೇಯ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಚೆಂಡೆ ವಾದ್ಯದೊಂದಿಗೆ ಕಲಶ ಹಿಡಿದ ಮಹಿಳೆಯರು, ಕುಣಿತ ಭಜನೆ ಸಾಗಿಬಂದಿತು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ,

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ Read More »

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ಜಾತ್ರೆಯ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡುತ್ತಿದ್ದಂತೆ, ಚಿಕ್ಕಮುಡ್ನೂರು ಭಾಗದಿಂದಲೂ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ದರ್ಬೆ ಹಾಗೂ ಬೊಳುವಾರಿನಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಈ ಮೆರವಣಿಗೆಗೆ ಚಿಕ್ಕಮುಡ್ನೂರು ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿದರು. ಚಿಕ್ಕಮುಡ್ನೂರು ಗ್ರಾಮದ ಬೀರಿಗ, ಕೆಮ್ಮಾಯಿ, ಬೀರ್ನಹಿತ್ಲು, ಕೃಷ್ಣನಗರ ಮೊದಲಾದ ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿ ಪುನೀತರಾದರು.

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ Read More »

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು. ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ‌ ಶ್ರಿ ವಜ್ರದೇಹಿ ಮಠದ‌ ಶ್ರೀ ರಾಜಶೇಖರಾನಂದ‌ ಸ್ವಾಮಿಜಿ ತೆಂಗಿನಕಾಯಿ‌ ಒಡೆಯುವ ಮೂಲಕ‌ ಉದ್ಘಾಟಿಸಿದರು. ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ,

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ Read More »

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ

​​ಗೋ ಗರ್ಭ ಅಣೆಕಟ್ಟು ದಾಟಿದ ತಿಮ್ಮಪ್ಪನ ದರ್ಶನದ ಸಾಲು ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಲ್ಲಿ ಸಾಲುಗಟ್ಟಿ ನಿಂತ ಭಕ್ತಸಮೂಹ ಪುತ್ತೂರು : ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತಜನಸಾಗರವೇ ಹರಿದು ಬರುತ್ತಿದೆ. ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ಅಧಿಕ ಸಂಖ್ಯೆಯಲ್ಲಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ತಿರುಮಲದಲ್ಲಿ ದೇವರ ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಬೇಕೆಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ. ತಿರುಮಲ

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ Read More »

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:  ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಕಲ್ವಾರಿ ಬೆಟ್ಟದ ಮೇಲೆ ಪ್ರಭು ಕ್ರಿಸ್ತರು ಮನುಕುಲದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಆ ದಿನದಂದು ಜಗತ್ತಿನಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಆದರೆ ಅರ್ಥವತ್ತಾದ ಆರಾಧನೆ ಮತ್ತು ಪ್ರಾರ್ಥನೆಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಆಯಾ ಚರ್ಚ್ ಗಳಲ್ಲಿ ನಡೆಯುತ್ತದೆ.

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ Read More »

error: Content is protected !!
Scroll to Top