ಧಾರ್ಮಿಕ

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ

ಪುತ್ತೂರು : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವದ ಎ.2 ಹಾಗೂ 3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಎ.2 ರಂದು ಬೆಳಿಗ್ಗೆ ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಿಂದ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಏ.3 ಸೋಮವಾರ ಬೆಳಿಗ್ಗೆ 8.30 ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, […]

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ Read More »

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ಬರ ದೇವಸ್ಥಾನದಲ್ಲಿ ಏ.10 ರಿಂದ 17 ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಶನಿವಾರ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದ ಬಳಿಕ ದೇವಸ್ಥಾನದ ಪಕ್ಕದ ತೋಟವೊಂದರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ,

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ Read More »

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ

ಇಂದೋರ್ : ರಾಮನವಮಿ ನಿಮಿತ್ತ ಇಂದೋರ್’ನ ಬೇಲೇಶ್ವರ ದೇವಸ್ಥಾನದಲ್ಲಿ ಹೋಮ ಹವನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಬಂದು ನೂಕು ನುಗ್ಗಲು ಏರ್ಪಟ್ಟಿತ್ತು. ಈ ವೇಳೆ ದೇಗುಲದ ಬಾವಿ ಬಳಿಯ ಭೂಮಿ ಕುಸಿದಿದ್ದು, ಇದರ ಪರಿಣಾಮ ಅಲ್ಲೇ ಇದ್ದ ಬಾವಿಯ ಕಬ್ಬಿಣದ ಸರಳಿನ ಮೇಲ್ಛಾವಣಿಯೂ ಕುಸಿದು ಬಿದ್ದಿತ್ತು. ಈ ವೇಳೆ ಸ್ಥಳದಲ್ಲಿದ್ದ ಹಲವು ಮಂದಿ ಭಕ್ತರು ಬಾವಿಗೆ ಬಿದ್ದಿದ್ದರು. ದುರ್ಘಟನೆಯಲ್ಲಿ ಈ ವರೆಗೂ 35 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ Read More »

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವೇ ಹೀಗೆ. ಸಡಗರ, ಸಂಭ್ರಮದೊಂದಿಗೆ ಸ್ವಚ್ಛತೆ, ಶೃಂಗಾರಕ್ಕೂ ಇಲ್ಲಿದೆ ಆದ್ಯತೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ವರ್ಷಾವಧಿ ಜಾತ್ರೆಗೆ ಅಣಿಯಾಗುತ್ತಿದ್ದಂತೆ ಇಡೀ ಆಲಯ ಶೃಂಗಾರ ವರ್ಣ ಬಣ್ಣಗಳಿಂದ ಭಕ್ತರ ಕಣ್ಮನ ಸೆಳೆಯುತ್ತಿರುವುದು ನಿಜ. ಪ್ರತೀ ವರ್ಷ ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ವಠಾರ ಸಹಿತ ಒಳಾಂಗಣ, ಹೊರಾಂಗಣ, ರಥಬೀದಿ ಹೀಗೆ ಇಂಚಿಂಚು ಬಿಡದೆ ಸ್ವಚ್ಛಗೊಳಿಸುವುದರ ಜತೆಗೆ ಸುತ್ತುಪೌಳಿಯ ಒಳಾಂಗಣ, ಹೊರಾಂಗಣದ ಗೋಡೆ, ಉಪ ದೇವರ ಗುಡಿಗಳು ಸಹಿತ ದೇವಸ್ಥಾನದ ಎದುರಗಡೆ

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ Read More »

ಮಂಗಳೂರು ದೇವಸ್ಥಾನಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ

ಪುತ್ತೂರು: ಮಂಗಳೂರು ಶ್ರೀ ವಿನಾಯಕ ಕಾಳಿಕಾಂಭ ದೇವಸ್ಥಾನದ ವಾರ್ಷಿಕ ಯುಗಾದಿ ಜಾತ್ರಾ ಮಹೋತ್ಸವಕ್ಕಾಗಿ ಪುತ್ತೂರಿನಿಂದ ವಿಶ್ವಕರ್ಮ ಬಂಧುಗಳು ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಿದರು. ಬೊಳುವಾರು ವಿಶ್ವಕರ್ಮ ಸಭಾಭವನದಿಂದ ಹೊರಟ ಹೊರೆಕಾಣಿಕೆಯನ್ನು ಮಂಗಳೂರು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಮಂಗಳೂರು ಶ್ರೀ ಕಾಳಿಕಾಂಭ ವಿನಾಯಕ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ವಿ. ಪುರುಷೋತ್ತಮ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಪುತ್ತೂರು ವಲಯ ಸಂಚಾಲಕ ಜಗದೀಶ್ ಎಸ್.ಎನ್., ವಿಶ್ವಬ್ರಾಹ್ಮಣ ಸೇವಾ ಸಂಘದ ಕಾರ್ಯದರ್ಶಿ ಶ್ರೀಧರ್ ಕೆ., ವಿಶ್ವಕರ್ಮ ಮಹಿಳಾ ಮಂಡಳಿ ಜತೆ ಕಾರ್ಯದರ್ಶಿ ಪ್ರಭಾ ಹರೀಶ್,

ಮಂಗಳೂರು ದೇವಸ್ಥಾನಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ Read More »

ಇಂದು (ಮಾ.31) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.31 ಶುಕ್ರವಾರ ಜಾತ್ರೋತ್ಸವದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಉತ್ಸವದ ಅಂಗವಾಗಿ ಬೆಳಿಗ್ಗೆ 8 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5 ಗಂಟೆಗೆ ಭಂಡಾರ ತೆಗೆದು ವಾರಹಿ, ರಕ್ತೇಶ್ವರಿ, ಗುಳಿಗ ದೈವಗಳಿಗೆ ನೇಮೋತ್ಸವ ಜರಗಲಿದೆ

ಇಂದು (ಮಾ.31) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ | ಎಡನೀರು ಶ್ರೀಗಳ ದಿವ್ಯಹಸ್ತದಿಂದ ಪುಷ್ಪರಥ ಸಮರ್ಪಣೆ

ಪುತ್ತೂರು : ನರಿಮೊಗರು ಗ್ರಾಮದ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇ.ಮೂ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿ ಹಾಗೂ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 5 ರಿಂದ 108 ಕಾಯಿ ಮಹಾಗಣಪತಿ ಹೋಮ, 6.32 ರಿಂದ 7.10 ರ ವರೆಗಿನ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 10.30 ಕ್ಕೆ ದಾನಿಗಳಿಂದ ನೀಡಲಾದ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ | ಎಡನೀರು ಶ್ರೀಗಳ ದಿವ್ಯಹಸ್ತದಿಂದ ಪುಷ್ಪರಥ ಸಮರ್ಪಣೆ Read More »

ಬ್ರಹ್ಮರಥದ ಎದುರಿನ ಗದ್ದೆಗೆ ಇಂಟರ್ ಲಾಕ್ | ದಾನಿಗಳ ನೆರವಿನಿಂದ ಶ್ರೀ ಮಹಾಲಿಂಗೇಶ್ವರ ದೇವಳ ಮುಂಭಾಗ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ಒಂದೊಂದೇ ಸಾಕಾರಗೊಳ್ಳುತ್ತಿದ್ದು, ಇದೀಗ ದೇವಸ್ಥಾನದ ಬಲಭಾಗದಲ್ಲಿರುವ ರಥಮಂದಿರದ ಬಳಿ ಇಂಟರ್ ಲಾಕ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದಾನಿಗಳ ಅಭಿಷ್ಟೇಯಂತೆ ಅವರ ಸಹಕಾರದೊಂದಿಗೆ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಯನ್ನು ದೇವಸ್ಥಾನದ ವತಿಯಿಂದ ನಡೆಸಲಾಗುತ್ತಿದೆ. ಇಂಟರ್ ಲಾಕ್ ಅಳವಡಿಕೆಗೆ ದಾನಿಗಳಾದ ಸುಜಿತ್ ರೈ ಮೈಸೂರು 1 ಲಕ್ಷ ರೂ. ಹಾಗೂ ಸತೀಶ್ ರೈ 50 ಸಾವಿರ ರೂ.ವನ್ನು ಈಗಾಗಲೇ ಆಡಳಿತ ಮಂಡಳಿಗೆ ದೇಣಿಗೆಯಾಗಿ ನೀಡಿದ್ದಾರೆ. ರಥಬೀದಿಯ ಒಂದು

ಬ್ರಹ್ಮರಥದ ಎದುರಿನ ಗದ್ದೆಗೆ ಇಂಟರ್ ಲಾಕ್ | ದಾನಿಗಳ ನೆರವಿನಿಂದ ಶ್ರೀ ಮಹಾಲಿಂಗೇಶ್ವರ ದೇವಳ ಮುಂಭಾಗ ಪಾರ್ಕಿಂಗ್ ವ್ಯವಸ್ಥೆ Read More »

ಅನ್ಯಾಡಿ :  “ನಂದಗೋಕುಲ” ಗೃಹಪ್ರವೇಶದಲ್ಲಿ ಶ್ರೀ ಕ್ಷೇತ್ರ ಅರಿಕೋಡಿಯ ಧರ್ಮದರ್ಶಿ ಶ್ರೀ ಹರೀಶ್  ಉಪಸ್ಥಿತಿ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಅನ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿದ “ನಂದಗೋಕುಲ”ದ ಗೃಹಪ್ರವೇಶೋತ್ಸವ ಮಾ.30 ಗುರುವಾರ ನಡೆಯಿತು. ಗೃಹಪ್ರವೇಶಕ್ಕೆ ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಹರೀಶ್ ಆಗಮಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮನೆಯ ಯಜಮಾನ ಹರೀಶ್, ಕುಸುಮ, ಮಕ್ಕಳಾದ ಚಿತ್ರೇಶ್, ವೈಷ್ಣವಿ, ಊರವರು ಆಗಮಿಸಿ ಧರ್ಮದರ್ಶಿಗಳನ್ನು ಗೌರವಿಸಿದರು.

ಅನ್ಯಾಡಿ :  “ನಂದಗೋಕುಲ” ಗೃಹಪ್ರವೇಶದಲ್ಲಿ ಶ್ರೀ ಕ್ಷೇತ್ರ ಅರಿಕೋಡಿಯ ಧರ್ಮದರ್ಶಿ ಶ್ರೀ ಹರೀಶ್  ಉಪಸ್ಥಿತಿ Read More »

error: Content is protected !!
Scroll to Top