ಧಾರ್ಮಿಕ

ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ

ಪ್ರಸಾದ ವಿತರಿಸದಂತೆ ಹೈಕೋರ್ಟ್‌ ಆದೇಶ ಶಬರಿಮಲೆ : ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ‘ಅರವಣ ಪ್ರಸಾದ’ದಲ್ಲಿ ಕೀಟನಾಶಕ ಅಂಶ ಪತ್ತೆಯಾದ ಬಳಿಕ ಅದರ ತಯಾರಿಕೆ ಹಾಗೂ ಮಾರಾಟಕ್ಕೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೀಟನಾಶಕ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಾದವನ್ನು ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ. ಇದರಿಂದ ಆರೂವರೆ ಕೋಟಿ ರೂ. ಮೌಲ್ಯದ ಅರವಣ ಪ್ರಸಾದ ವ್ಯರ್ಥ ಆಗಲಿದೆ.ಪ್ರಸಾದ ತಯಾರಿಸಲು ಖರೀದಿಸುವ […]

ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಕಾಣಿಯೂರಿನ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜ. 11ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬುಧವಾರ ಬೆಳಿಗ್ಗೆ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಬುಧವಾರ ಸಂಜೆ ಅಗಳಿ ಶ್ರೀ ಸದಾಶಿವ ಭಜನಾ ಮಂಡಳಿ ಸದಸ್ಯರಿಂದ ಮತ್ತು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸದಸ್ಯರಿಂದ

ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಲಯವಾರು ಹಾಗೂ ಗ್ರಾಮವಾರು ಸಭೆ ನಡೆಸಲಾಗುತ್ತಿದೆ.

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ Read More »

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ

ಬಂಟ್ವಾಳ: ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ. 9ರಿಂದ ಜ. 16ರವರೆಗೆ ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ. ಸಜೀಪ ಮಾಗಣೆ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ವಾರ್ ಮೆಚ್ಚಿ ಜಾತ್ರೆಯ ಹಿನ್ನೆಲೆಯಲ್ಲಿ ಪಣೋಲಿಬೈಲು ದೈವಸ್ಥಾನದಲ್ಲಿ ಅಗೇಲು ಸೇವೆ ಮತ್ತು ಕೋಲ ಸೇವೆ ಜ. 16ರವರೆಗೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

ಪಣೋಲಿಬೈಲು: ಇಂದಿನಿಂದ ಜ. 16ರವರೆಗೆ ಅಗೇಲು, ಕೋಲ ಇಲ್ಲ Read More »

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ  ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ಜ. 7ರಂದು ಸಂಪನ್ನಗೊಂಡಿತು. ಡಿ 31ರಿಂದ ಮೊದಲ್ಗೊಂಡು ಜ7ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಮತ್ತು ಮಾಚಿಲ ಶ್ರೀ ಉಳ್ಳಾಕುಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಿತು. ಜ. 7ರಂದು ಬೆಳಿಗ್ಗೆ

ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ ಸಂಪನ್ನ, ನೇಮೋತ್ಸವ Read More »

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಪುತ್ತೂರು: ಬ್ರಹ್ಮ ಎಂದರೆ ನಿರಾಕಾರ. ವಟುಗಳಿಗೆ ಬ್ರಹ್ಮೋಪದೇಶ ನೀಡುವ ಮೂಲಕ ನಿರಾಕಾರ ತತ್ವವನ್ನು ಬೋಧಿಸಲಾಗಿದೆ. ಬ್ರಹ್ಮೋಪದೇಶ ಸಂಸ್ಕಾರ ಪಡೆದ ವಟುಗಳು ಮುಂದೆ ಸಂಸ್ಕಾರವಂತರಾಗಿ ಸಮಾಜದಲ್ಲಿ ಬೆಳಗುವಂತಾಗಲಿ ಎಂದು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಹೇಳಿದರು. ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ರವಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮೋಪದೇಶದಿಂದ ಸಂಸ್ಕಾರ ನೀಡುವ ಕಾರ್ಯ | ಬೊಳುವಾರು ವಿಶ್ವಕರ್ಮ ಸಭಾಂಗಣದಲ್ಲಿ ನಡೆದ ಉಚಿತ ಸಾಮೂಹಿಕ ಬ್ರಹ್ಮೋಪದೇಶದಲ್ಲಿ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ Read More »

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಮಾ. 9ರಂದು ನಡೆಯಲಿರುವ ಕುದ್ಮಾರು ಅನ್ಯಾಡಿ ಶ್ರೀ ಶಿರಡಿ ರಾಜನ್ ದೈವದ ನೇಮೋತ್ಸವ ಹಿನ್ನೆಲೆಯಲ್ಲಿ ಜ. 8ರಂದು ಪೂರ್ವಭಾವಿ ಸಭೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕೆಡೆಂಜಿ ಗುತ್ತಿನ ಪ್ರವೀಣ್ ಕುಮಾರ್ ಕೆಡೆಂಜಿ, ಆಡಳಿತ ಸಮಿತಿ ಉಪಾಧ್ಯಕ್ಷರಾದ ರೋಹಿತಕ್ಷ ಕೆಡೆಂಜಿಕಟ್ಟ, ಚೇನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ, ಕೋಶಾಧಿಕಾರಿ ಉಮೇಶ್, ಯೋಗೀಶ್ ಕೆಡೆಂಜಿ, ಉಮೇಶ್ ಕೆರೆನಾರು, ಊರಿನ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರಾಡಿ ರಾಜನ್ ದೈವದ ನೇಮೋತ್ಸವ | ಅನ್ಯಾಡಿಯಲ್ಲಿ ಪೂರ್ವಭಾವಿ ಸಭೆ Read More »

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಹಾಗೂ ಸಂಸ್ಮರಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಜತ್ತೂರು ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಜತ್ತೂರು ಕಾಂಚನ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿ ಮಾಡುವಂತೆ ಸಭೆಯಲ್ಲಿ ವಿನಂತಿಸಲಾಯಿತು.

ಕಾಂಚನ: ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಬಳ್ಪ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿವರಿಸಲಾಯಿತು. ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ‌ ಜೊತೆಗೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವದ ಹಾಗೂ ರಜತ ತುಲಾಭಾರ ಹಾಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ

ಬಳ್ಪಕ್ಕೆ ಭೇಟಿ ನೀಡಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ| ಜಯಂತ್ಯೋತ್ಸವ ಸಂಸ್ಮರಣೆಯ ಪೂರ್ವಭಾವಿ ಸಭೆ Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 5ರಂದು ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಅಷ್ಠಬಂಧ ಲೇಪನ, ಬೆಳಿಗ್ಗೆ 11.14ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಂಗಪೂಜೆ, ಶ್ರೀ ಭೂತ ಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ನಾಲ್ಕಂಭ ಕ್ಷೇತ್ರದಲ್ಲಿ ಕಟ್ಟೆ ಪೂಜೆ, ಮಂತ್ರಾಕ್ಷತೆ ಹಾಗೂ ಬೆಳಂದೂರು ಲಕ್ಷ್ಮೀಪ್ರಿಯಾ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಜ. 6ರ ಕಾರ್ಯಕ್ರಮ:ಜ. 6ರಂದು ಬೆಳಿಗ್ಗೆ ಉಳ್ಳಾಕ್ಲು ಭಂಡಾರ ತೆಗೆಯಲಾಗುವುದು. ರಾತ್ರಿ 9ರಿಂದ

ಕುಂಬ್ಲಾಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

error: Content is protected !!
Scroll to Top