ಧಾರ್ಮಿಕ

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ

ಪುತ್ತೂರು: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ಮಾ.24 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.23 ಸೋಮವಾರ ಸಂಜೆ ಗ್ಗೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. ಮಾ.24 ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ […]

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ Read More »

ಯುಗದ ಆದಿ – ನೂತನ ವರ್ಷದ ಬುನಾದಿ

ಶೋಭಾಕೃತ್ ನಾಮ ಸಂವತ್ಸರದ ಶುಭಾಗಮನ ನಮ್ಮೆಲ್ಲ ಓದುಗ ಪ್ರಭುಗಳಿಗೆ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು. ಹಿಂದೂಗಳು ತಮ್ಮ ವರ್ಷದ ಮೊದಲ ದಿನವಾಗಿ ಆಚರಣೆ ಮಾಡುವ ದಿನ ಇದು. ಅಂತೆಯೇ ಇಂದು ಒಂದು ಸಂವತ್ಸರ ಕಳೆದು ಹೋಗಿ ಶೋಭಾಕೃತ್ ಸಂವತ್ಸರ ಹೊಸ್ತಿಲು ದಾಟಿ ಬಂದಿದೆ. ಪ್ರಕೃತಿಯ ದೃಷ್ಟಿಯಿಂದಲೂ ಯುಗಾದಿಯೆ ವರ್ಷದ ಆರಂಭ ಬ್ರಿಟಿಷ್ ಕ್ಯಾಲೆಂಡರ್ ಪ್ರಕಾರ ನಾವು ಜನವರಿ 1ರಂದು ಆಚರಿಸುವ ಹೊಸ ವರ್ಷ ಪ್ರಕೃತಿಗೆ ಪೂರಕವಿಲ್ಲ. ಆಗ ತೀವ್ರವಾದ ಶಿಶಿರದ ದಟ್ಟ ಪ್ರಭಾವದಿಂದ ಎಲೆಗಳೆಲ್ಲ ಉದುರಿಹೋಗಿ ಗಿಡ

ಯುಗದ ಆದಿ – ನೂತನ ವರ್ಷದ ಬುನಾದಿ Read More »

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ

ಪುತ್ತೂರು: ಹತ್ತೂರ ಭಕ್ತರಿಂದ ಆರಾಧನೆ ಪಡೆದುಕೊಳ್ಳುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಏ. 10ರಿಂದ 20ರವರೆಗೆ ನಡೆಯಲಿದೆ. ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮಾಹಿತಿ ನೀಡುತ್ತಾ, ಏ. 1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಪ್ರಾರ್ಥನೆ ನಡೆದು 9.35ರ ವೃಷಭ ಲಗ್ನದಲ್ಲಿ ಜಾತ್ರೆಗೆ ಗೊನೆ ಕಡಿಯಲಾಗುವುದು. ಏ. 10ರಂದು ಬೆಳಿಗ್ಗೆ 9.25ರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಕುರಾರ್ಪಣೆ, ಬಲಿ ಹೊರಟು ಉತ್ಸವ,

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ Read More »

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25 ರಿಂದ 31 ರ ತನಕ  ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಪುತ್ತೂರು ನಗರದಲ್ಲಿ ವಿತರಿಸಲಾಯಿತು. ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಯವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯ ಮೂಲಕ ದರ್ಬೆ, ಕೂರ್ನಡ್ಕದ ತನಕ ಆಮಂತ್ರಣ ವಿತರಿಸಿದರು. ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ

ಪುತ್ತೂರು: ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳದಲ್ಲಿ ಮಾರ್ಚ್ 24ರಂದು ಜನಜಾಗೃತಿ ಸಭೆ, ಆಶ್ಲೇಷ ಬಲಿ, ಧಾರ್ಮಿಕ ಸಭೆ, ಅರ್ಧ ಏಕಾಹ ಭಜನೆ ನಡೆಯಲಿದೆ ಎಂದು ಹಿಂಜಾವೇ ಮಂಗಳೂರು ವಿಭಾಗ ಸಹಸಂಚಾಲಕ ಅಜಿತ್ ರೈ ಹೊಸಮನೆ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 6ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 7ಕ್ಕೆ ಜನಜಾಗೃತಿ ಸಭೆ ಆಯೋಜಿಸಲಾಗಿದೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಕರಾನಂದ ಸ್ವಾಮೀಜಿ ಆಶೀರ್ವಚನ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ Read More »

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ

ಉಚಿತವಾಗಿ ಟ್ರಕ್‌ ಮತ್ತು ಚಾಲಕರನ್ನು ಒದಗಿಸಿದ ಬಿಜೆಪಿಯ ಹಿರಿಯ ನಾಯಕ ನಾಗರಾಜ ಶೆಟ್ಟಿ ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಥಾಪನೆಯಾಗಲಿರುವ ಭವ್ಯ ಶ್ರೀರಾಮನ ಮೂರ್ತಿಯನ್ನು ಕೆತ್ತಲು ಕಾರ್ಕಳದಿಂದ ಕೃಷ್ಣ ಶಿಲೆಯನ್ನು ಸಾಗಿಸಿದ್ದು ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಟ್ರಾನ್ಸ್‌ಪೋರ್ಟ್‌ ಕಂಪನಿ. ಮೂರು ದಿನಗಳಲ್ಲಿ ಬೃಹತ್‌ ಶಿಲೆ ಅಯೋಧ್ಯೆ ತಲುಪಿದೆ. ಒಂಭತ್ತು ಟನ್ ತೂಕದ ಶಿಲೆಯನ್ನು ಅಯೋಧ್ಯೆಯಲ್ಲಿ ನಾಗರಾಜ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಸ್ವಾಗತಿಸಲಾಯಿತು. ಉದ್ಯಮಿ ನಾಗರಾಜ ಶೆಟ್ಟಿ ಮಾಲಕತ್ವದ

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ Read More »

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು :  ಕಾವು ನವೋದಯ ಒಕ್ಕೂಟದ ಸದಸ್ಯರಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿಯಾಗಿ ಶ್ರಮದಾನ ನಡೆಯಿತು. ದೇವಸ್ಥಾನದ ಹೊರಾಂಗಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಿದರು. ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ, ಮಾಜಿ ಉಪಾಧ್ಯಕ್ಷೆ ನಿರ್ಮಲಾ ರೈ  ಉಸ್ತುವಾರಿಯಲ್ಲಿ ನಡೆದ ಕರಸೇವೆಯಲ್ಲಿ ಎಲ್ಲಾ ಗುಂಪಿನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ Read More »

ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವ ಮಾ.25 ರಿಂದ 31 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ,ಮ್ಮಿಂಜೆ ನಾಗೇಶ್ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಗೌರವ ಸಲಹೆಗಾರ ಜಯರಾಮ ಕೆದಿಲಾಯ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಜಲುಮಾರು ಕ್ಷೇತ್ರ

ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ Read More »

ಕಬಕ ಒಕ್ಕೂಟದ ವಿದ್ಯಾಪುರ ಶ್ರೀ ನಾಗ ಮತ್ತು ಪಂಚದೈವಗಳ ಸನ್ನಿಧಿಯಲ್ಲಿ  ನಮ್ಮ ಶೌರ್ಯ ತಂಡದ ಯೋಧರಿಂದ ಶ್ರಮದಾನ

ಪುತ್ತೂರು: ಕಬಕ  ವಿದ್ಯಾಪುರ  ಶ್ರೀ ನಾಗ ಮತ್ತು ಪಂಚ ದೈವಗಳ  ಸಾನಿದ್ಯದ ಜೀರ್ಣೋದ್ದಾರ ಪ್ರಯುಕ್ತ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕ ಒಂದು ದಿನದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ  ಘಟಕದ  ಪ್ರತಿನಿಧಿ ವಿನಯ ನಾಯ್ಕ, ಜಗದೀಶ, ಲೋಕೇಶ್, ವಿನೋದ್ ಬಂಗಾರಡ್ಕ, ಹರಿಪ್ರಸಾದ್, ಚಂದ್ರಶೇಕರ, ಸುನೀಲ್ ಡಿಸೋಜ, ರೋಷನ್ ಡಿಸೋಜ, ಅಜಯ್, ಶಂಭು ಪೂಜಾರಿ, ಬಾಲಕೃಷ್ಣ, ಕಾರ್ತಿಕ್ ಸ್ವಾತಿ ಭಾಗವಹಿಸಿದ್ದರು, ದೈವಸ್ಥಾನದ  ಸಮಿತಿಯವರು  ಸೇವೆ ಸಲ್ಲಿಸಿದ  ಎಲ್ಲರಿಗೂ  ಅಭಿನಂದನೆ  ಸಲ್ಲಿಸಿದರು, ಬಳಿಕ  ಮಾಸಿಕ  ಸಭೆ  ನಡೆಸಲಾಯಿತು, ಸಂಯೋಜಕಿ  ಆಶಾಲತಾ 

ಕಬಕ ಒಕ್ಕೂಟದ ವಿದ್ಯಾಪುರ ಶ್ರೀ ನಾಗ ಮತ್ತು ಪಂಚದೈವಗಳ ಸನ್ನಿಧಿಯಲ್ಲಿ  ನಮ್ಮ ಶೌರ್ಯ ತಂಡದ ಯೋಧರಿಂದ ಶ್ರಮದಾನ Read More »

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

error: Content is protected !!
Scroll to Top