ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಹತ್ತೂರಿನ ಜನರು ತದೇಕಚಿತ್ತದಿಂದ ವೀಕ್ಷಿಸುವ ಪುತ್ತೂರು ಜಾತ್ರೆಯ ಆಮಂತ್ರಣ ಪತ್ರ ಮಾರ್ಚ್ 11ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಬಿಡುಗಡೆಗೊಳಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆಡಳಿತಾಧಿಕಾರಿ ನವೀನ್ ಭಂಡಾರಿ, ಗೌರಿ ಬನ್ನೂರು, ಪಿ.ಜಿ. ಜಗನ್ನೀವಾಸ್ ರಾವ್, ರಾಜೇಶ್ ಬನ್ನೂರು, ಐತ್ತಪ್ಪ ನಾಯ್ಕ್, ವೀಣಾ ಆಚಾರ್ಯ, ಗೌರಿ ಬನ್ನೂರು, ದೀಕ್ಷಾ ಪೈ, ಸಾಜಾ ರಾಧಾಕೃಷ್ಣ

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು Read More »

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಮಾ. 12ರಂದು ಬೆಳಿಗ್ಗೆ 10.45ಕ್ಕೆ ಶಿಲಾನ್ಯಾಸ ನೆರವೇರಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆದು, ದೇವಸ್ಥಾನದ ಹೊರ ಸುತ್ತುಪೌಳಿಗೆ ಶಿಲಾನ್ಯಾಸ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ

ಪುತ್ತೂರು: ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಸಂಸ್ಕಾರ ಮಂಗಲ ಹೋಮ, ಆಶ್ಲೇಷಾ ಬಲಿ, ಅಷ್ಟವಟು ಆರಾಧನೆ, ಪಂಚವಿಂಶತಿ ಕಲಶ ಪೂಜೆ, ನಾಗಪ್ರತಿಷ್ಠೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಡಾ.ಎಂ.ಕೆ.ಪ್ರಸಾದ್  ಮತ್ತಿತರರು ಉಪಸ್ಥಿತರಿದ್ದರು. ಸ್ಥಳ ದಾನಿಗಳಾದ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ Read More »

ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವಾರ್ಷಿಕೋತ್ಸವ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವರ್ಷದ ವಾರ್ಷಿಕೋತ್ಸವ ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಜನಾ ಮಂಡಳಿಯಲ್ಲಿ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8ಕ್ಕೆ ಗಣಪತಿ ಹೋಮ, 9 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನಾಗ ತಂಬಿಲ, ದೈವಗಳಇಗೆ ತಂಬಿಲ ಸೇವೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ 12 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಊರ

ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂಡಳಿಯ 30ನೇ ವಾರ್ಷಿಕೋತ್ಸವ Read More »

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ

ದೇವಸ್ಥಾನಕ್ಕೆ ಬಳಸಿದ ಮರದ ಬದಲಾಗಿ 500 ಸಸಿ ನೆಡುವ ಸಂಕಲ್ಪ ಕಾರ್ಕಳ : ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ನಾಡಿನಲ್ಲಿ ಕಲೆ, ಸಂಸ್ಕೃತಿ, ವೈವಿಧ್ಯಮಯ ಆಚಾರ ವಿಚಾರ, ಶಿಲ್ಪಕಲೆಗಳಿಗೆ ಪ್ರಸಿದ್ಧಿ ಪಡೆದ ಕಾರ್ಕಳದ ನಗರದಲ್ಲಿ ನಡೆಯುತ್ತಿರುವ ಶ್ರೀ ಮಾರಿಗುಡಿ ಬ್ರಹ್ಮಕಲಶೋತ್ಸವವು ಪರಿಸರ ಜಾಗೃತಿಗೆ ಸಾಕ್ಷಿಯಾಗಲಿದೆ. ದೇವಾಲಯದ ನವೀಕರಣದ ಕೆಲಸ ಕಾರ್ಯಗಳಿಗೆ ಅನೇಕ ಮರಗಳನ್ನು ಬಳಸಿದ್ದು, ಇದಕ್ಕೆ ಪ್ರತಿಯಾಗಿ 500 ಸಸಿಗಳನ್ನು ನೆಟ್ಟು ಪೋಷಣೆಯ ಜವಾಬ್ದಾರಿಯ ಸಂಕಲ್ಪವನ್ನು ಜೀರ್ಣೊದ್ಧಾರ ಸಮಿತಿ ಹೊಂದಿದೆ. ಅರಣ್ಯ ಇಲಾಖೆಯವರಿಂದ ತೆಳ್ಳಾರು ರಸ್ತೆಯಲ್ಲಿನ ಕುಂಬ್ರಪದವಿನಲ್ಲಿ ಜಾಗ

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ Read More »

error: Content is protected !!
Scroll to Top