ಧಾರ್ಮಿಕ

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ಮಾ.22 ಹಾಗೂ 23 ರಂದು ನಡೆಯುವ 5ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಕರ ಸಂಕ್ರಮಣ ದಿನವಾದ ಮಂಗಳವಾರ (ಇಂದು) ಶ್ರೀ ಕೊರಗಜ್ಜನ ಸನ್ನಿಧಿಯಲ್ಲಿ ಬಿಡುಗಡೆಗೊಂಡಿತು. ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಲಿದೆ. […]

ಮಾ.22-23 : ನೇಮೋತ್ಸವ ಶ್ರೀ ಬ್ರಹ್ಮ ಆದಿಮೊಗೇರ್ಕಳ, ಶ್ರೀ ಚಾಮುಂಡೇಶ್ವರೀ ಅಮ್ಮ, ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ

ಸೂರ್ಯನ ಪಥವನ್ನು ಒಟ್ಟು 12 ಭಾಗಗಳಾಗಿ ವಿಭಾಗಿಸಲಾಗಿದೆ. ಅವುಗಳಿಗೆ ರಾಶಿಗಳು ಎನ್ನುತ್ತಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳು. ಪ್ರತಿಯೊಂದು ರಾಶಿಯಲ್ಲಿಯೂ ಸೂರ್ಯನು ಒಂದೊಂದು ತಿಂಗಳು ಇರುತ್ತಾನೆ. ಸೂರ್ಯನು ಒಂದು ರಾಶಿಯನ್ನು ಬಿಟ್ಟು ಇನ್ನೊಂದು ರಾಶಿಯನ್ನು ಪ್ರವೇಶಿಸುವ ದಿನವನ್ನು ಸಂಕ್ರಾಂತಿ ಎನ್ನುತ್ತಾರೆ. ಒಂದು ವರ್ಷಕ್ಕೆ ಒಟ್ಟು 12 ಸಂಕ್ರಾಂತಿಗಳು. ಪ್ರತಿಯೊಂದು ಸಂಕ್ರಾಂತಿಯನ್ನೂ ಅದರ ಮುಂದಿನ ರಾಶಿಯ ಹೆಸರಿನಿಂದ ಕರೆಯುತ್ತಾರೆ. ಅಂತೆಯೇ ಸೂರ್ಯನು

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ Read More »

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ

ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಶುರು ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಇಂದು ನಸುಕಿನ ಹೊತ್ತು ವಿದ್ಯುಕ್ತ ಚಾಲನೆ ದೊರೆತಿದೆ.ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾಶಿವರಾತ್ರಿ ದಿನವಾದ ಫೆಬ್ರವರಿ 26ರಂದು ಕೊನೆಯ ಶಾಹಿ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಮಹಾಕುಂಭಮೇಳಕ್ಕೆ ಇಂದು ಬೆಳಗ್ಗಿನಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ Read More »

ಬಾರ್ಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ  ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠ  ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು. ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ, ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.  ಈ ಸಂದರ್ಭದಲ್ಲಿ  ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,

ಬಾರ್ಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಬಿಡುಗಡೆ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ

ನಿತ್ಯ 40 ಕೌಂಟರ್‌ಗಳಲ್ಲಿ 1 ಲಕ್ಷ ಜನರಿಗೆ ಊಟ ಪ್ರಯಾಗ್​ರಾಜ್: ಜನವರಿ 13ರಿಂದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಲಿರುವ ಮಹಾಕುಂಭಮೇಳದಲ್ಲಿ ಅದಾನಿ ಸಮೂಹ ಇಸ್ಕಾನ್‌ ಸಹಭಾಗಿತ್ವದಲ್ಲಿ ಬರೋಬ್ಬರಿ 50 ಲಕ್ಷ ಜನರಿಗೆ ಅನ್ನದಾನ ಸೇವೆ ನೀಡಲಿದೆ. ಮಹಾಕುಂಭಮೇಳದಲ್ಲಿ ಭಕ್ತರಿಗೆ ಅನ್ನದಾನ ಮಾಡಲು ಅದಾನಿ ಗ್ರೂಪ್ ಮತ್ತು ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್‌ಶಿಯಸ್‌ನೆಸ್ (ಇಸ್ಕಾನ್) ಕೈಜೋಡಿಸಿವೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯುವ ಮಹಾಕುಂಭಮೇಳ ಪೂರ್ತಿ ಈ ಮಹಾಅನ್ನಪ್ರಸಾದ ಸೇವೆ ನೀಡಲಾಗುತ್ತದೆ.ನಿತ್ಯ 1 ಲಕ್ಷ ಭಕ್ತರಂತೆ 50 ದಿನಗಳಲ್ಲಿ 50

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ Read More »

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ

ಕಡಬ : ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಜ.10ರಂದು ನಡೆಯಲಿದೆ. ಕೆಮ್ಮಿoಜೆ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಒರುಬಾoಲು ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳ್ಳಿಗೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಪಂಚವಿoಶತಿ  ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದೆ. ಬಳಿಕ ಬೆಳಿಗ್ಗೆ 11.00 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ Read More »

ಶಬರಿಮಲೆ : ಇಂದಿನಿಂದ 5 ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್‌ ಬುಕ್ಕಿಂಗ್‌

ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತರನ್ನು ನಿಯಂತ್ರಿಸಲು ಹರಸಾಹಸ ಶಬರಿಮಲೆ: ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು (ಮಕರ ವಿಳಕ್ಕು) ಕಣ್ತುಂಬಿಕೊಳ್ಳಲು ಅಯ್ಯಪ್ಪ ಭಕ್ತರ ದಂಡೇ ಆಗಮಿಸುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಶಬರಿಮಲೆ ದರ್ಶನಕ್ಕೆ ಬರುವ ಭಕ್ತರಿಗೆ ಸ್ಪಾಟ್‌ ಬುಕಿಂಗ್‌ ಅನ್ನು ಇಂದಿನಿಂದ 5,000ಕ್ಕೆ ಮಿತಿಗೊಳಿಸಲಾಗಿದೆ. ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಕ್ತಾದಿಗಳ ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನದನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯವನ್ನು ಇಂದಿನಿಂದ ಜ.15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ.

ಶಬರಿಮಲೆ : ಇಂದಿನಿಂದ 5 ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್‌ ಬುಕ್ಕಿಂಗ್‌ Read More »

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ…

ಧರ್ಮಸ್ಥಳದಲ್ಲಿ ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ಕಾಂಪ್ಲೆಕ್ಸ್‌ನಲ್ಲಿರುವ ವಿಶೇಷತೆಗಳ ಪೂರ್ಣ ಮಾಹಿತಿ ಇಲ್ಲಿದೆ ಧರ್ಮಸ್ಥಳ : ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ಇನ್ನು ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಕಾಯುವ ಕಷ್ಟ ತಪ್ಪಲಿದೆ. ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ನಿರೀಕ್ಷಣಾ ಕಾಂಪ್ಲೆಕ್ಸ್‌ನಲ್ಲಿ ಭಕ್ತರು ಆರಾಮವಾಗಿ ಹೋಗಿ ಒಂದರಿಂದ ಒಂದೂವರೆ ತಾಸಿನೊಳಗೆ ದೇವರ ದರ್ಶನ ಮಾಡಿಕೊಂಡು ಬರಬಹುದು. ಭಕ್ತರಿಗೆ ಸರ್ವ ರೀತಿಯಲ್ಲೂ ಅನುಕೂಲವಾಗುವಂತೆ ಶ್ರೀ ಸಾನಿಧ್ಯವನ್ನು ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.ಇಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್‌

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ… Read More »

ಶ್ರೀ ರಾಮ ಭಜನಾ ತಂಡ ಆನಡ್ಕ ಪ್ರಥಮ ವಾರ್ಷಿಕೋತ್ಸವದಲ್ಲಿ ಮೇಳೈಸಿದ ಭಜನ ಸಂಕೀರ್ತನ | ಭಕ್ತಿ-ಭಾವ-ಕುಣಿತದ ಸಮ್ಮಿಲನ | ಮನಸೂರೆಗೊಂಡ ವೈಭವದ ಶೋಭಾಯಾತ್ರೆ

ಪುತ್ತೂರು : ಶಾಂತಿಗೋಡು ಗ್ರಾಮದ ಆನಡ್ಕ ಶ್ರೀರಾಮ ಭಜನಾ ತಂಡದ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಭಜನ ಕೀರ್ತನ ಸಂಭ್ರಮ, ಭಕ್ತಿ-ಭಾವ-ಕುಣಿತದ ಸಮ್ಮಿಲನ ಭಾನುವಾರ ಸಂಜೆ ಆನಡ್ಕದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಜೆ 6.30 ಕ್ಕೆ ಬೀಟಿಕಾಡುವಿನಿಂದ ಆನಡ್ಕದ ವರೆಗೆ ವೈಭವದ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ಬನ್ನೂರು ಶನೀಶ್ವರ ಭಜನಾ ತಂಡ, ಕೈಕಾರ ಶ್ರೀ ವಿದ್ಯಾನಿಧಿ ಸರಸ್ವತಿ ಭಜನಾ ತಂಡ, ಸರ್ವೆ ಶ್ರೀ ಸುಬ್ರಾಯ ಭಜನಾ ತಂಡ ಪಾಲ್ಗೊಂಡಿದ್ದು, ಇರ್ದೆ ಶ್ರೀ ವಿಷ್ಣು ಸಿಂಗಾರಿ ಮೇಳಂ ನಿಂದ ಚೆಂಡೆ ಪ್ರದರ್ಶನಗೊಂಡಿತು.

ಶ್ರೀ ರಾಮ ಭಜನಾ ತಂಡ ಆನಡ್ಕ ಪ್ರಥಮ ವಾರ್ಷಿಕೋತ್ಸವದಲ್ಲಿ ಮೇಳೈಸಿದ ಭಜನ ಸಂಕೀರ್ತನ | ಭಕ್ತಿ-ಭಾವ-ಕುಣಿತದ ಸಮ್ಮಿಲನ | ಮನಸೂರೆಗೊಂಡ ವೈಭವದ ಶೋಭಾಯಾತ್ರೆ Read More »

error: Content is protected !!
Scroll to Top