ಧಾರ್ಮಿಕ

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ

ಪುತ್ತೂರು: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯಲ್ಲಿ ರಥಸಪ್ತಮಿ ಅಂಗವಾಗಿ ಜ. 28ರಂದು ಬೆಳಿಗ್ಗೆ 5ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ದೇವಳದ ಮುಖಮಂಟಪದಲ್ಲಿ ಅಖಂಡ ಸೂರ್ಯನಮಸ್ಕಾರ ನಡೆಯಲಿದೆ. ಕರ್ನಾಟಕ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ನೇತ್ರಾವತಿ ವಲಯದ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ […]

ಜ.28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 108 ಸೂರ್ಯ ನಮಸ್ಕಾರ Read More »

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಬಳಿಕ ದೇವರಮಾರು ಗದ್ದೆಯಲ್ಲಿ ಬಿದ್ದಿದ್ದ ಕಸ – ತ್ಯಾಜ್ಯವನ್ನು ಹೆಕ್ಕುವ ಮೂಲಕ ಶಾಸಕ ಸಂಜೀವ ಮಠಂದೂರು ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಜಯಂತ್ಯೋತ್ಸವ ಸಂಸ್ಮರಣೆ ಬಳಿಕ ದೇವರಮಾರು ಗದ್ದೆಯಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಮತ್ತವರ ತಂಡ ತ್ಯಾಜ್ಯವನ್ನು ಹೆಕ್ಕಿದ್ದಾರೆ. ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ಈ ಮೂಲಕ ದೇವಸ್ಥಾನದ ಆವರಣವನ್ನು ಶುಚಿಯಾಗಿಡುವ ಕೆಲಸ

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ Read More »

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಸವಣೂರು ಗ್ರಾಮ ದೈವ ಶಿರಾಡಿ, ರಕ್ತೇಶ್ವರಿ, ಮಹಿಷಂತ್ತಾಯ ದೈವಗಳ ದೈವಸ್ಥಾನ ಮಾಲೆತ್ತಾರು ಹಾಗೂ ಚೌಕಿಮಠ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು. ಪೂರ್ವಾಹ್ನ ಮಾಲೆತ್ತಾರು ಶಿರಾಡಿ ದೈವಸ್ಥಾನದಲ್ಲಿ ಗಣಹೋಮ, ತಂಬಿಲ, ಸಂಜೆ ಚೌಕಿಮಠ ರಕ್ತೇಶ್ವರಿ ಮತ್ತು ಮಹಿಷಂತ್ತಾಯ ದೈವಸ್ಥಾನದಲ್ಲಿ ತಂಬಿಲ ಸೇವೆ ಜರಗಿತು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ಪೂಜಾ ವಿಧಿವಿಧಾನವನ್ನು ನೇರವೇರಿಸಿದರು. ಅರ್ಚಕ ಕಾರ್ತಿಕ್ ಬಡೆಕಿಲ್ಲಾಯ ಸಹಕರಿಸಿದರು. ದೈವಸ್ಥಾನದ ಆಡಳಿತದಾರರಾದ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ

ಸವಣೂರು ಮಾಲೆತ್ತಾರು, ಚೌಕಿಮಠ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ. 27: ಅರಸು ಕುರಿಯಾಡಿತ್ತಾಯ ಚಾವಡಿಯ ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬೋಳಂತೂರು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಜ. 27ರಂದು ಚತುರ್ಥ ವರ್ಷದ ಪ್ರತಿಷ್ಠಾ ವರ್ಧಂತಿ ಜ. 27ರಂದು ನಡೆಯಲಿದೆ. ಸಂಜೆ 4ರಿಂದ ಭಜನಾ ಸಂಕೀರ್ತನೆ ನಡೆಯಲಿದ್ದು, ತುಳಸಿವನ ಸಿದ್ಧಿವಿನಾಯಕ ಭಜನಾ ಮಂಡಳಿ, ಸಂಜೆ 5ರಿಂದ 6ರವರೆಗೆ ಗುಂಡಿಮಜಲು ಶೃಂಗಗಿರಿ ಶಾರದಾಂಬಾ ಭಜನಾ ಮಂಡಳಿ, 5ರಿಂದ 6ರವರೆಗೆ ಬರಿಮಾರು ವಿನಾಯಕ ಶ್ರೀ ದೇವಿ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ. ರಾತ್ರಿ 7-30ಕ್ಕೆ ದೈವಗಳ ತಂಬಿಲ, ಹೂವಿನ ಪೂಜೆ, ಮಹಾಪೂಜೆ, ರಾತ್ರಿ 8ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ,

ಜ. 27: ಅರಸು ಕುರಿಯಾಡಿತ್ತಾಯ ಚಾವಡಿಯ ಪ್ರತಿಷ್ಠಾ ವರ್ಧಂತಿ Read More »

ಮಾಣಿ ಬ್ರಹ್ಮಕಲಶೋತ್ಸವ: ಸುವರ್ಣ ಮಂಟಪದಲ್ಲಿ ರಾಮದೇವರ ಪೂಜೆ

ಪುತ್ತೂರು: ಮಾಣಿ ಶ್ರೀ ರಾಮಚಂದ್ರಾಪುರ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಸಹಿತ ರಾಮದೇವರ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಅಂಗವಾಗಿ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಸಪರಿವಾರ ಸಹಿತ ಶ್ರೀ ಸೀತಾರಾಮಚಂದ್ರ, ಚಂದ್ರಮೌಳೀಶ್ವರ ಮತ್ತು ರಾಜರಾಜೇಶ್ವರಿ ದೇವರಿಗೆ ಸುವರ್ಣ ಮಂಟಪದಲ್ಲಿ ವಿಶೇಷ ಪೂಜೆ ಮತ್ತು ಅಷ್ಟಾವಧಾನ ಸೇವೆ ನಡೆಯಿತು. ಸೋಮವಾರ ಪುನಃಪ್ರತಿಷ್ಠೆಯ ಬಳಿಕ ಮಂಗಳವಾರ ಮಹಾಶಾಂತಿ ಹವನ, ಪ್ರಾಯಶ್ಚಿತ ಹವನ, ಸೂಕ್ತಹವನ, ನವಚಂಡೀಹವನ ಮತ್ತು ಐಕಮತ್ಯ ಹವನ ಗೋಕರ್ಣದ

ಮಾಣಿ ಬ್ರಹ್ಮಕಲಶೋತ್ಸವ: ಸುವರ್ಣ ಮಂಟಪದಲ್ಲಿ ರಾಮದೇವರ ಪೂಜೆ Read More »

ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ

ಪುತ್ತೂರು: ಮಾಣಿ ಪೆರಾಜೆ ಶ್ರೀ ರಾಮಚಂದ್ರಪುರ ಮಠದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಜ. 23ರಂದು ಧರ್ಮಸಭೆ ನಡೆಯಿತು.ಪರಿವರ್ತನೆಯ ಸಾಕ್ಷಿ ರಾಘವೇಶ್ವರ ಶ್ರೀ: ಸಂಸದ ನಳಿನ್ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಗೋವಿನಿಂದ ಹಿಡಿದು ವಿಶ್ವವಿದ್ಯಾಲಯದವರೆಗೆ ಮಠದಿಂದ ಹಿಡಿದು ಅಯೋದ್ಯೆಯವರೆಗೆ ಪರಿವರ್ತನೆ ಮಾಡುವ ಒಂದು ಸಾಕ್ಷಿಎಂದರೆ ಗುರುಗಳಾದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂತಹ ಒಂದು ಮಠ ಇರುವುದೇ ಹೆಮ್ಮೆಯ ಸಂಗತಿ ಎಂದರು. ಬದುಕಿಗೆ ಪೂರಕ ಕಾರ್ಯಕ್ರಮ: ಶಾಸಕ ಸಂಜೀವ ಮಠಂದೂರುಶಾಸಕ ಸಂಜೀವ

ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ Read More »

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ನಿಡ್ಪಳ್ಳಿ ಕಿನ್ನಿಮಾಣಿ – ಪೂಮಾಣಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಿನ್ನೆಲೆಯಲ್ಲಿ ಜ. 23ರಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು.

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದ ಭೂಮಿ ಪೂಜೆ ಸೋಮವಾರ ನಡೆಯಿತು.ದೇವಸ್ಥಾನದ ಅರ್ಚಕ, ಆನುವಂಶೀಯ ಮೊಕ್ತೇಸರ ಜನೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಫೆ. 1-3: ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಾಲಯದ ಅನುಜ್ಞಾ ಕಲಶ ಮತ್ತು ಬಾಲಾಲಯ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ Read More »

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಧರ್ಮದ ಶಕ್ತಿಯನ್ನು ಅನಾವರಣ ಮಾಡಿ, ಮಾದರಿ ಸಮಾರಂಭ ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಎಲ್ಲಾ ಪಕ್ಷ ಮುಖಂಡರೂ ಭಾಗವಹಿಸಿದ್ದು ಪಕ್ಷಾತೀತ ಎಂದು ಸಾಬೀತಾದರೆ, ಎಲ್ಲಾ ಸಮುದಾಯದವರು ಭಾಗವಹಿಸುವ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಇಡೀ ಸಮಾಜಕ್ಕೆ ಮಾರ್ಗದರ್ಶಕ ಎನ್ನುವುದನ್ನು ರುಜುವಾತು ಪಡಿಸಿತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸಿ, ಸಂದೇಶ ರವಾನೆ ಆಗುತ್ತಿತ್ತು. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ

ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ Read More »

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ, ತುಲಾಭಾರ ಸಮಾರಂಭ ವೈಭವದಿಂದ ಜರಗಿತು. ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯತಿವರೇಣ್ಯರ ಉಪಸ್ಥಿತಿಯಲ್ಲಿ ನಡೆದ ಸಮಾರಂಭಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು. ರಾಜಕೀಯ ನಾಯಕರ ಸಹಿತ, ಅನೇಕ ಗಣ್ಯರು ಆಗಮಿಸಿ ಗುರುಗಳ ಆಶೀರ್ವಾದ ಸ್ವೀಕರಿಸಿದರು. ಬೆಳಿಗ್ಗೆ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ದರ್ಬೆಯಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀಗಳ ಉಪಸ್ಥಿತಿಯಲ್ಲಿ ಗಣ್ಯರು ಚೆಂಡೆ,

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ Read More »

error: Content is protected !!
Scroll to Top