ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆಯವರೆಗೆ ನಡೆಯಲಿರುವ ಶೋಭಾಯಾತ್ರೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜೊತೆಯಲ್ಲಿ ಮಹಾಸಂಸ್ಥಾನದ ಎಲ್ಲಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ಮೂಡಿಬರುವಂತಾಗಲು ವಿವಿಧ ಸ್ತಬ್ದಚಿತ್ರಗಳು ಮೆರುಗು ನೀಡಲಿವೆ. ಸ್ತಬ್ಧಚಿತ್ರಗಳ್ಯಾವುವು:ಮುಂಭಾಗದಿಂದ ಶೋಭಾಯಾತ್ರೆಯ ಮಾಹಿತಿಯನ್ನು ಸಾರುತ್ತಾ, […]










