ಧಾರ್ಮಿಕ

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮೊದಲು ವೈಭವದ ಶೋಭಾಯಾತ್ರೆ ನಡೆಯಿತು. ದರ್ಬೆ ವೃತ್ತದಿಂದ ಹೊರಟ ಶೋಭಾಯಾತ್ರೆ ಪುತ್ತೂರು ಪೇಟೆ ಮೂಲಕ ಸಾಗಿ ಸಭಾಂಗಣದ ಬಳಿ ಸಮಾಪನಗೊಂಡಿತು. ಮುಂಭಾಗದಿಂದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಸಾಗಿದರೆ, ಅದನ್ನು ಅನುಸರಿಸಿ ಹಾಗೂ ಚೆಂಡೆ, ಕೊಂಬು ವಾದ್ಯಗಳ ಸ್ವರದೊಂದಿಗೆ ಸ್ವಾಮೀಜಿಗಳು, ಪ್ರಮುಖರು ಸಾಗಿದರು. ಇದರ ಹಿಂದೆ ಸಾಗಿ ಬಂದ ಟ್ಯಾಬ್ಲೋಗಳು ಆಕರ್ಷಕವಾಗಿತ್ತು. […]

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ Read More »

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ

ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ

ಪುತ್ತೂರು: ಹೊರೆಕಾಣಿಕೆ ಮೆರವಣಿಗೆ ಆರಂಭವಾಗುವ ಮೂಲಕ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ. ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು‌ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತೆಂಗಿನಕಾಯಿ ಒಡೆದು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ Read More »

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ

ಪುತ್ತೂರು: ರಾಜ್ಯದ ಕೇಂದ್ರಬಿಂದುವಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ವರ್ಷದ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಸಮಾರಂಭಕ್ಕೆ ವೇದಿಕೆ, ಸಭಾಂಗಣ ಸಿದ್ಧಗೊಳ್ಳುತ್ತಿದ್ದು, ಅಂತಿಮ ಸ್ಪರ್ಶವಷ್ಟೇ ಬಾಕಿ ಉಳಿದಿವೆ. ಜ. 22ರಂದು ಬೆಳಿಗ್ಗೆ 8 ಗಂಟೆಗೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ಸಮಾರಂಭದ ಮೂಲಕ ಇಡೀ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಇಂದು ಸಂಜೆಯೇ ಆಗಮಿಸಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ Read More »

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಅವರ ಆಪ್ತ ಸಹಾಯಕ ವಸಂತ್ ಅವರು ಜಗ್ಗೇಶ್ ಅವರಿಗೆ ಆಮಂತ್ರಣ ನೀಡಿ, ಸಮಾರಂಭಕ್ಕೆ ಆಹ್ವಾನಿಸಿದರು. ಸಮಾರಂಭದಲ್ಲಿ ಭಾಗವಹಿಸಲಿರುವ ಮುಖ್ಯ ಅತಿಥಿಗಳ ಪೈಕಿ ಜಗ್ಗೇಶ್ ಅವರು ಕೂಡ ಒಬ್ಬರು. ಸಮಾರಂಭದಲ್ಲಿ ಪಾಲ್ಗೊಳ್ಳಲು ಪುತ್ತೂರಿಗೆ ಆಗಮಿಸಲಿರುವ ಜಗ್ಗೇಶ್ ಅವರು ನಂತರ

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ Read More »

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮಕ್ಕೆ ಮುನ್ನದಿನವಾದ ಜ. 21ರಂದು ಸಂಜೆ 3.30ಕ್ಕೆ ದರ್ಬೆ ದುಗ್ಗಣ್ಣ ದೇರಣ್ಣ ಸಭಾಭವನದ ಬಳಿಯಿಂದ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 3.30ಕ್ಕೆ ಸರಿಯಾಗಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆಯವರೆಗೆ ನಡೆಯಲಿರುವ ಶೋಭಾಯಾತ್ರೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜೊತೆಯಲ್ಲಿ ಮಹಾಸಂಸ್ಥಾನದ ಎಲ್ಲಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ಮೂಡಿಬರುವಂತಾಗಲು ವಿವಿಧ ಸ್ತಬ್ದಚಿತ್ರಗಳು ಮೆರುಗು ನೀಡಲಿವೆ. ಸ್ತಬ್ಧಚಿತ್ರಗಳ್ಯಾವುವು:ಮುಂಭಾಗದಿಂದ ಶೋಭಾಯಾತ್ರೆಯ ಮಾಹಿತಿಯನ್ನು ಸಾರುತ್ತಾ,

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸಮಾರಂಭಕ್ಕೆ ರಾಜ್ಯಾದ್ಯಂತ ಜನರು ಆಗಮಿಸುವ ಹಿನ್ನೆಲೆಯಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ವ್ಯವಸ್ಥೆ ಮಾಡಲಾಗಿದೆ. ಉಪ್ಪಿನಂಗಡಿ, ಬೆಳ್ತಂಗಡಿ, ಕಡಬ ಭಾಗದಿಂದ ಬರುವವರು ಪುತ್ತೂರು “ಎಪಿಎಂಸಿ ಮೈದಾನದಲ್ಲಿ ” ವಾಹನಗಳನ್ನು ಪಾರ್ಕ್ ಮಾಡಬಹುದು.ಸುಳ್ಯ ಭಾಗದಿಂದ ಬರುವವರು “ಕಿಲ್ಲೆ ಮೈದಾನ ಹಾಗೂ ಗೌಡ ಸಮುದಾಯ ಭವನದ ಎದುರು” ವಾಹನ ಪಾರ್ಕ್ ಮಾಡಲು ಅವಕಾಶ ಮಾಡಲಾಗಿದೆ. ಮಂಗಳೂರು, ಉಡುಪಿ ಭಾಗದಿಂದ ಬರುವವರು “ಬೈಪಾಸ್ ರಸ್ತೆಯಲ್ಲಿರುವ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ವಾಹನ ಪಾರ್ಕಿಂಗಿಗೆ ಸ್ಥಳ ನಿಗದಿ Read More »

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ನೂತನ ರಥ ಸಮರ್ಪಣೆ, 108 ತೆಂಗಿನಕಾಯಿ ಮಹಾಗಣಪತಿ ಹೋಮ ಜ. 20ರಿಂದ 23ರವರೆಗೆ ನಡೆಯಲಿದೆ.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ. 14ರಂದು ಗೊನೆ ಮುಹೂರ್ತ ನಡೆದಿದ್ದು, 15ರಂದು ನೂತನ ರಥ ಆಗಮಿಸಿದೆ. ಜ. 21ರಂದು ಬೆಳಿಗ್ಗೆ 7.30ಕ್ಕೆ ದೇವತಾ ಪ್ರಾರ್ಥನೆ ನಡೆದು, 8ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ನಾಗನಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ,

ಜ. 21ರಿಂದ 23: ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ಜಾತ್ರೆ, ನೂತನ ರಥ ಸಮರ್ಪಣೆ Read More »

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌

ದೇವಸ್ಥಾನದ ಆಡಳಿತ ಮಂಡಳಿಯಿಂದ ಬ್ಯಾನರ್‌ ತೆರವು ಮಂಗಳೂರು : ಕರಾವಳಿಯಲ್ಲಿ ಅನ್ಯ ಧರ್ಮೀಯರಿಗೆ ಹಿಂದುಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲಿಕ್ಕೆ ಅವಕಾಶ ಕೊಡುತ್ತಿರುವುದಕ್ಕೆ ಪ್ರತಿರೋಧ ಮುಂದುವರಿದಿದೆ. ಇತ್ತೀಚೆಗೆ ಮಂಗಳರಿನ ಕಾವೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರನ್ನು ತೆರವುಗೊಳಿಸಿದೆ.ಕದ್ರಿ ದೇವಸ್ಥಾನದಲ್ಲಿ ಜ.15ರಿಂದ ಜ.25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌ Read More »

error: Content is protected !!
Scroll to Top