ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್‍ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ತುಳುನಾಡಿನಲ್ಲಿ ಅತ್ಯಂತ ಮಹತ್ವವನ್ನು ಪಡೆದಿರುವ ಕದಿರು ವಿನಿಯೋಗ ಕಾರ್ಯಕ್ರಮ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಇದಕ್ಕೆ ಪೂರಕವಾಗಿ ಸೋಮವಾರ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ಗದ್ದೆಗೆ ಹಾಲೆರೆಯುವ ಮೂಲಕ ಕದಿರು ಕೊಯ್ಯುವ ಮುಹೂರ್ತಕ್ಕೆ ಚಾಲನೆ ನೀಡಿದರು. ಮಂಗಳವಾರ ಗೌರಿ ಪೂಜೆಯಂದು ಶ್ರೀದೇವರು ಗರ್ಭಗುಡಿಯಿಂದ ಹೊರಬಂದು ಚಂಡೆ, ವಾದ್ಯಗಳೊಂದಿಗೆ ತೆರಳಿದರು. ಬಳಿಕ ಅಶ್ವತ್ಥಕಟ್ಟೆಯಲ್ಲಿ ಇಡಲಾಗಿದ್ದ ಕದಿರುತೆನೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ Read More »

ನಾಳೆ (ಆ.23): ಆಲಂಕಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ

ಆಲಂಕಾರು: ಹಿಂದೂ ಜಾಗರಣ ವೇದಿಕೆ ಆಲಂಕಾರು ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ ಆ.23 ಶನಿವಾರ ಮಧ್ಯಾಹ್ನ 2 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಉತ್ಸವಕ್ಕೆ ಮಧ್ಯಾಹ್ನ 2 ಗಂಟೆಗೆ ಆಲಂಕಾರು ಮಾನಸ ಚಿಕಿತ್ಸಾಲಯದ ಡಾ.ಹರಿದಾಸ್ ಭಟ್‍ ಚಾಲನೆ ನೀಡಲಿದ್ದಾರೆ. ಸಂಜೆ 5.30 ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆಲಂಕಾರು ಅಟ್ಟಿಮಡಿಕೆ ಉತ್ಸವ ಸಮಿತಿ ಅಧ್ಯಕ್ಷ ದಾಮೋಧರ್ ಆಚಾರ್ಯ ಆಲಂಕಾರು

ನಾಳೆ (ಆ.23): ಆಲಂಕಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಉತ್ಸವ Read More »

ಆ.24 : ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು

ಪುತ್ತೂರು ಪುತ್ತೂರು: ದ. ಕ. ಜವಾಹರ್ ಬಾಲ್ ಮಂಚ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ, ಸಂಶೋಧನಾ ಸಂಸ್ಥೆ ಬಾಳ್ತಿಲ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಆ.24ರಂದು ಬೆಳಗ್ಗೆ 9 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ವಕೀಲೆ ಶೈಲಜಾ ರಾಜೇಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುದ್ದು ಕೃಷ್ಣ ವೇಷ ಸ್ಪರ್ಧೆ, ಯಶೋಧ ಕೃಷ್ಣ ವೇಷ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ

ಆ.24 : ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌”

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ|ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು. ಸುಗಿಪು-ದುನಿಪು ವಿಶೇಷ ಕಾರ್ಯಕ್ರಮದಲ್ಲಿ ತುಳು ಮಹಾಕಾವ್ಯ ಮಂದಾರ ರಾಮಾಯಣದ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” Read More »

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರು ಒಮ್ಮೆಯಾದರ ಶ್ರೀಮದ್ಭಾಗವತವನ್ನು ಹೇಳಬೇಕು ಎಂದು ಜಿಎಲ್ ಸಮೂಹ ಸಂಸ್ಥೆಗಳ ಮಾಲಕ ಜಿ.ಎಲ್.ಬಲರಾಮ ಉಚಾರ್ಯ ಹೇಳಿದರು. ಶಿವಳ್ಳಿ ಸಂಪದ ಬೊಳುವಾರು ವಲಯ ವತಿಯಿಂದ ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನೆಗೆ ಸಾಮಾನ್ಯವಾಗಿ ಜನರು ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ. ಇದು ಅವರಲ್ಲಿನ ಆಸಕ್ತಿಯನ್ನು ತೋರಿಸುತ್ತದೆ. ಇಂತಹ ಉತ್ತಮವಾದ ಕಾರ್ಯಕ್ರಮಗಳು ಆಧ್ಯಾತ್ಮಿಕ ಚಿಂತನೆಗೆ ವೇಗ ನೀಡಲಿದೆ ಎಂದರು.

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಶ್ರೀಮದ್ಭಾಗವತ ಸಪ್ತಾಹ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ

ಪುತ್ತೂರು: ಅನ್ಯಾಯ ಮಾಡಿದವರಿಗೆ ಅನ್ಯಾಯದ ರೀತಿಯಲ್ಲಿ ಬುದ್ದಿ ಕಲಿಸಿದರೆ ಏನೂ ತೊಂದರೆ ಇಲ್ಲ, ಶ್ರೀಕೃಷ್ಣ ಕೂಡಾ ಅನ್ಯಾಯ ಮಾಡಿದವರಿಗೆ ಅನ್ಯಾಯವಾಗಿ ಬಾಣ ಹೂಡುತ್ತಾನೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುತ್ತೂರು ತಾಲೂಕು ಯಾದವ ಸಂಘ ಹಾಗೂ ಯಾಧವ ಸಭಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮಗೆ ಮೊದಲ ದೇವರು ತಂದೆ ತಾಯಿ, ಆದರೆ ದೇವರ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ Read More »

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ | ಅಟ್ಟಿ ಮಡಕೆ ಒಡೆದು ಸಾಹಸ ಪ್ರದರ್ಶಿಸಿದ ಸಾಹಸಿಗರು

ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಹಾಗೂ ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ಸಂಭ್ರಮ ಸಡಗರದಿಂದ ನಡೆಯಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಅಟ್ಟಿ ಮಡಕೆ ಒಡೆಯುವ ಸಾಹಸ ಪ್ರದರ್ಶನಕ್ಕೆ ವಿಶ್ವಹಿಂದು ಪರಿಷದ್ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಉದ್ಘಾಟಿಸಿದರು. ಬಜರಂಗದಳ ಪುತ್ತೂರು ಜಿಲ್ಲೆ

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ | ಅಟ್ಟಿ ಮಡಕೆ ಒಡೆದು ಸಾಹಸ ಪ್ರದರ್ಶಿಸಿದ ಸಾಹಸಿಗರು Read More »

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಮೆರವಣಿಗೆ ಪುತ್ತೂರು ನಗರದಾದ್ಯಂತ ಶನಿವಾರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆದ ಬಳಿಕ ಶ್ರೀಕೃಷ್ಣ ಲೋಕ ಶೋಬಾಯಾತ್ರೆ ಶಿಶುಮಂದಿರದಿಂದ ಆರಂಭಗೊಂಡು ಮುಖ್ಯರಸ್ತೆಗೆ ಬಂದಿ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಿರ್ಮಿಸಿದ ಸಭಾಭವನಕ್ಕೆ ಆಗಮಿಸಿತು. ಸಾವಿರಾರು ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ, ಹೆತ್ತವರು

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ Read More »

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆ ಅಂದರೆ ಅದು ಸಾವಿರಾರು ದೇಶಭಕ್ತರ ತ್ಯಾಗ ಬಲಿದಾನಗಳ ಸ್ಮರಣೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ತಾನು ಮಾಡಬೇಕಾದ ಕರ್ತವ್ಯವನ್ನು ಸದಾ ನೆನಪಿನಲ್ಲಿ ಇಡಬೇಕಾಗಿದೆ ಎಂದು ನಿವೃತ್ತ ಯೋಧ ಮೋಹನ ಗೌಡ ಹೇಳಿದರು. ಅವರು ತೆಂಕಿಲ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದು ಮಾತನಾಡಿದರು.ಇಂದಿನ ಮಕ್ಕಳು ಶಾಲೆಗಳಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತು ಶಿಕ್ಷಣವನ್ನು ಮುಂದುವರಿಸಿದರೆ ಸತ್ಪ್ರಜೆಗಳಾಗುವರು ಎಂದು ಅವರು ನುಡಿದರು.ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿ

ಜವಾಬ್ದಾರಿ ಅರಿತ ವಿದ್ಯಾರ್ಥಿಗಳು ನಾಳಿನ ಸತ್ಪ್ರಜೆಗಳಾಗುವರು : ನಿವೃತ್ತ ಯೋಧ ಮೋಹನ್ ಗೌಡ | ವಿವೇಕಾನಂದ ವಿದ್ಯಾಸಂಸ್ಥೆಗಳಿಂದ 79ನೇ ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top