ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »










