ಧಾರ್ಮಿಕ

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ

ಪುತ್ತೂರು : ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮದ ಜೊತೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ […]

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ- ಅರುಣ್ ಕುಮಾರ್ ಪುತ್ತಿಲ | ಸಮಿತಿಯಿಂದ ಕೃತಜ್ಞತಾ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ

ಪುತ್ತೂರು1: ಶೂರರಾಜ ಪೌತ್ರನಾದ ವಸುದೇವನ ಪುತ್ರ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀನಿವಾಸ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಪದ್ಮಾವತಿಯ ಕಲ್ಯಾಣೋತ್ಸವ ಡಿ.29ರಂದು ಸಂಜೆ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿಂದ ಮತ್ತು ಭಕ್ತಿ ಪ್ರಧಾನವಾಗಿ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಭವ್ಯವಾದ ವೇದಿಕೆಯಲ್ಲಿ ನಿರ್ಮಿಸಿದ ತಿರುಪತಿ ಮಾದರಿಯ ಮಂಟಪದಲ್ಲಿ ನಡೆಯಿತು. ಸಂಕಲ್ಪ ಪುಣ್ಯಾಹ, ದೇವನಾಂದಿ, ವರಪೂಜೆ, ವರೋಪಚಾರ ಸಹಿತ ಕಂಕಣಧಾರಣೆ ನಡೆಯಿತು. ಶುಭಗಳಿಗೆಯಲ್ಲಿ ಸಹಸ್ರಾರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ Read More »

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರನ್ನು ವೈಭವದಿಂದ ಮೆರವಣಿಗೆಯ ಮೂಲಕ ಕಲ್ಯಾಣೋತ್ಸವ ನಡೆಯುವ ಈಶ ಮಂಟಪಕ್ಕೆ ಕರೆತರಲಾಯಿತು. ಬೊಳುವಾರಿನಲ್ಲಿ ವೈಭವದ ಮೆರವಣಿಗೆಯನ್ನು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ತೆಂಗಿನ ಕಾಯಿ

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಚಾಲನೆ | ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ವೈಭವದ ಮೆರವಣಿಗೆ Read More »

ಪುತ್ತೂರು: ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ನಗರದಲ್ಲಿ ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ | ಉಗ್ರಾಣ ಮುಹೂರ್ತಕ್ಕೆ ಚಾಲನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಅನ್ನಸಂತರ್ಪಣೆಗಾಗಿ ಬೃಹತ್ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆ ತನಕ ನಡೆಯಿತು. ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ನಗರದ ವರ್ತಕರಿಂದ ಹೊರೆಕಾಣಿಕೆಗೆ ಬೇಕಾದ ಸಾಹಿತ್ಯಗಳನ್ನು ಪಡೆದುಕೊಂಡು ಮೆರವಣಿಗೆ ಮುಖ್ಯರಸ್ತೆಯಲ್ಲಿ ಸಾಗಿ ಬಂದು ದೇವರಮಾರು ಗದ್ದೆಯಲ್ಲಿ ಸಮಾಪನಗೊಂಡಿತು.

ಪುತ್ತೂರು: ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ | ನಗರದಲ್ಲಿ ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ | ಉಗ್ರಾಣ ಮುಹೂರ್ತಕ್ಕೆ ಚಾಲನೆ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು:  ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು  ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ಗುರುವಾರ ವಿತರಿಸಲಾಯಿತು. ಉದ್ಯಮಿ ಪದ್ಮನಾಭ ನಾಯ್ಕ್ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ತೆಂಗಿನಕಾಯಿ ಒಡೆಯುವ ಮೂಲಕ ದರ್ಬೆ ವೃತ್ತದಲ್ಲಿ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯಾದ್ಯಂತ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಆಮಂತ್ರಣ ಪತ್ರಿಕೆ ವಿತರಣೆ Read More »

ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ | ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಆಶೀರ್ವಚನ

ಕಡಬ: ಕಡಬ ಗ್ರಾಮದ ಸವಣೂರು ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನಡೆಯಿತು. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍, ಸವಣೂರು

ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ | ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಆಶೀರ್ವಚನ Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ಮುಂಭಾಗ ಡಿ.28 – 29 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಭಾನುವಾರ ಸಂಜೆ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್  ಕುಮಾರ್ ಪುತ್ತಿಲ ಮಾತನಾಡಿ, ಈ  ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಸೂಚನೆ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ Read More »

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ

ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌, ಸಾರಿಗೆ ಎಲ್ಲದಕ್ಕೂ ಆಧುನಿಕ ತಂತ್ರಜ್ಞಾನ ಬಳಕೆ ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ Read More »

ನಾಳೆ (ಡಿ.23) : ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಕಡಬ: ಕಡಬ ಗ್ರಾಮದ ಸವಣೂರು ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಡಿ.23 ಸೋಮವಾರ ಬೆಳಿಗ್ಗೆ 11.30 ಕ್ಕೆ ನಡೆಯಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ

ನಾಳೆ (ಡಿ.23) : ಅರೇಲ್ತಡಿ ಉಳ್ಳಾಕುಲು ಮತ್ತು ಕೆಡೆಂಜೊಡಿತ್ತಾಯಿ ದೈವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ Read More »

ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ

ಡಿ.25ರಂದು ಮಂಡಲ ಪೂಜೆಗೆ ಸನ್ನಿಧಾನ ತಲುಪಲಿರುವ ಪವಿತ್ರ ಆಭರಣ ಶಬರಿಮಲೆ : ಶಬರಿಮಲೆ ವಾರ್ಷಿಕ ಯಾತ್ರೆಯ ಒಂದು ಪ್ರಮುಖ ಅಂಗವಾಗಿರುವ ತಂಗ ಅಂಗಿಯ ಮೆರವಣಿಗೆ ಇಂದು ಶುರುವಾಗಿದೆ. ಪತ್ತನತಿಟ್ಟಂ ಜಿಲ್ಲೆಯ ಆರಣ್ಮುಲದಲ್ಲಿ ಪಾರ್ಥಸಾರಥಿ ದೇಗುಲದಿಂದ ಸಕಲ ವಿಧಿವಿಧಾನಗಳೊಂದಿಗೆ ಅಯ್ಯಪ್ಪನ ಪವಿತ್ರ ಆಭರಣಗಳನ್ನು ಮಂಡಲ ಪೂಜೆಗಾಗಿ ಶಬರಿಮಲೆಗೆ ತರುವ ಯಾತ್ರೆ ಇದು.ತಂಗ ಅಂಗಿ ಅಥವಾ ಪವಿತ್ರ ಆಭರಣಗಳನ್ನು ಮಂಡಲ ಪೂಜೆ ಸಂದರ್ಭದಲ್ಲಿ ಅಯ್ಯಪ್ಪನಿಗೆ ತೊಡಿಸಿ ಅಲಂಕರಿಸಲಾಗುತ್ತದೆ. ಡಿ.25ರಂದು ಈ ಮೆರವಣಿಗೆ ಸನ್ನಿಧಾನ ತಲುಪಲಿದೆ. ಈ ಒಡವೆಗಳನ್ನು ತೊಡಿಸಿದ ಬಳಿಕ

ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ Read More »

error: Content is protected !!
Scroll to Top