ಧಾರ್ಮಿಕ

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ

ಮಾನಸಿಕ ನೆಮ್ಮದಿಗಾಗಿ 11 ದಿನಗಳ ಧ್ಯಾನ ವ್ರತ ಬೆಂಗಳೂರು: ಕೊಪ್ಪಳದ ಪ್ರಸಿದ್ಧ ಗವಿಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನಕ್ಕೆ ಮಾಡುತ್ತಿವುದು ಈ ಭಾಗದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಂಟು ದಿಗಳಿಂದ ನಿತ್ಯ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿ ಎಂಬಲ್ಲಿನ ನಿವಾಸಿ ಹಸೀನಾ ಬೇಗಂ ಎಂಬ ಮಹಿಳೆ ಗವಿ ಮಠದಲ್ಲಿ ನಿತ್ಯ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಮಠಕ್ಕೆ ಬರುವವರಲ್ಲಿ ಮುಸ್ಲಿಂ ಭಕ್ತರೂ ಇದ್ದಾರೆ. […]

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು: ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌

ಕಡಬ: ತಾಲೂಕಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ಇಲ್ಲಿ ಇಂದು (ಜುಲೈ 25) ರಾತ್ರಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ ಮತ್ತು ಕುಂಕುಮಾರ್ಚನೆ ‌ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಡುಪು ನರಸಿಂಹ ತಂತ್ರಗಳ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಭಾಗವಹಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗೆಯೇ, ದೇಗುಲದಲ್ಲಿ ಜುಲೈ 29 ರಂದು ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ ನಡೆಯಲಿದೆ. ಹಾಗೆಯೇ ಗಣೇಶ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು: ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌ Read More »

ಆಸ್ಟ್ರೇಲಿಯಾದಲ್ಲಿ ಹಿಂದೂ ವಿರೋಧಿ‌ಗಳಿಂದ ದೇವಾಲಯದ ಗೋಡೆ ವಿರೂಪ

ಕ್ಯಾನ್‌ಬೆರಾ: ಹಿಂದೂ ವಿರೋಧಿ ಮನಸ್ಥಿತಿಗಳ ಅಟ್ಟಹಾಸ ಆಸ್ಟ್ರೇಲಿಯಾದಲ್ಲೂ ನಡೆದಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಬೊರೋನಿಯಾದಲ್ಲಿರುವ ಸ್ವಾಮಿ ನಾರಾಯಣ ಹಿಂದೂ ದೇವಾಲಯದ ಗೋಡೆಯನ್ನು ವಿರೂಪಗೊಳಿಸಲಾಗಿದೆ. ಜೊತೆಗೆ 2 ರೆಸ್ಟೋರೆಂಟ್ ಮೇಲೆ ಕೆಂಪು ಬಣ್ಣ ಬಳಸಿ ಜನಾಂಗೀಯ ಬರಹಗಳನ್ನು ಬರೆದು ವಿಕೃತಿ ಮೆರೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿಕ್ಟೋರಿಯಾದ ಪ್ರಧಾನಿ ಜಸಿಂತಾ ಆಲನ್ ಪ್ರತಿಕ್ರಿಯೆ ನೀಡಿದ್ದು, ಇದು ಹಿಂದೂ ಸಮುದಾಯವನ್ನು ಹೆದರಿಸುವುದಕ್ಕಾಗಿಯೇ ಮಾಡಿರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹಿಂದೂ ವಿರೋಧಿ‌ಗಳಿಂದ ದೇವಾಲಯದ ಗೋಡೆ ವಿರೂಪ Read More »

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ

ತಿರುಪತಿ: ಭಕ್ತರ ಕಾಯುವಿಕೆಯ ಅವಧಿಯನ್ನು ಕಡಿಮೆ ಮಾಡುವ ಸಲುವಾಗಿ ಮತ್ತು ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಟಿಟಿಡಿಯು ‘ಶ್ರೀ ವಾಣಿ’ ಹೆಸರಿನಲ್ಲಿ ಟಿಕೆಟ್ ವ್ಯವಸ್ಥೆ ಆರಂಭಿಸಿದೆ. ಶ್ರೀ ವಾಣಿ ನೂತನ ಟಿಕೆಟ್ ವಿತರಣಾ ಕೌಂಟರ್ ಅನ್ನು ದೇವಾಲಯದಲ್ಲಿ ತೆರೆಯಲಾಗಿದೆ. ಈ ಟಿಕೆಟ್ ಕೌಂಟರ್ ಅನ್ನು ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಎಲ್ಲಾ ರೀತಿಯ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಇದು ಒಳಗೊಂಡಿದೆ. ಭಕ್ತರಿಗೆ ಸುಲಭವಾಗಿ ದರ್ಶನದ ಟಿಕೆಟ್ ವಿತರಿಸಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈ

ಶೀಘ್ರ ದರ್ಶನಕ್ಕೆ TTD ಯಿಂದ ‘ಶ್ರೀ ವಾಣಿ’ ಟಿಕೆಟ್ ವ್ಯವಸ್ಥೆ Read More »

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ

ಲಕ್ನೋ: ಸೋಷಿಯಲ್ ಮೀಡಿಯಾಗಳನ್ನು ಬಳಸಿ ಕೆಲವು ಜನರು ಕನ್ವರ್ ಯಾತ್ರೆಗೆ ಅಪಖ್ಯಾತಿ ತರಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಕಿಡಿ ಕಾರಿದ್ದಾರೆ. ಎಲ್ಲಿ ಉತ್ಸಾಹ, ನಂಬಿಕೆ, ಭಕ್ತಿ ಇರುತ್ತದೆಯೋ ಅಲ್ಲಿ ಅದನ್ನು ಭಂಗಗೊಳಿಸಲು, ಕೆಣಕಲು ಕೆಲವು ಅಂಶಗಳು ಪ್ರಯತ್ನ ನಡೆಸುತ್ತಲೇ ಇರುತ್ತದೆ. ಹಾಗೆಯೇ ಪ್ರತಿಯೊಂದು ಕನ್ವರ್ ಸಂಘವೂ ಇಂತಹ ದುಷ್ಕೃತ್ಯಗಳನ್ನು ಬಯಲು ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ. ಕೆಲವು ದುಷ್ಟರು ಕನ್ವರ್ ಯಾತ್ರೆಗೆ ತೆರಳುವ ಗುಂಪುಗಳ ಜೊತೆಗೆ ಸೇರಿ ಆ ಯಾತ್ರೆಗೆ

ಕನ್ವರ್ ಯಾತ್ರೆಗೆ ಅಪಖ್ಯಾತಿ ತರುವವರ ವಿರುದ್ಧ ಕ್ರಮ: ಸಿಎಂ ‌ಯೋಗೀಜಿ Read More »

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ | ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ : ಶಾಸಕ ಅಶೋಕ್ ರೈ

ಪುತ್ತೂರು; ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ದೇವರ ದರ್ಶನಕ್ಕೆ ಬರುವ ಸ್ತ್ರೀ ಅಥವಾ ಪುರುಷರು ಯಾವ ರೀತಿಯ ಬಟ್ಟೆಗಳನ್ನು ಧರಿಸಬೇಕು, ಧರಿಸಬಾರದು ಎಂಬುದರ ಬಗ್ಗೆ ನಾನು ಏಕಾಂಗಿಯಾಗಿ ತೀರ್ಮಾನ ಮಾಡುವಂತಿಲ್ಲ. ಇಲ್ಲಿಗೆ ಬರುವ ಪ್ರತಿಯೊಬ್ಬರು ಮಹಾಲಿಂಗೇಶ್ವರನ ಭಕ್ತರೇ ಆಗಿದ್ದಾರೆ, ದೇವರ ದರ್ಶನಕ್ಕೆ ಬರುತ್ತಾರೆ. ದೇವರ ದರ್ಶನಕ್ಕೆ ಬರುವ ಭಕ್ತರು

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ | ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ : ಶಾಸಕ ಅಶೋಕ್ ರೈ Read More »

ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ

ಶ್ರೀನಗರ: ವಿಪರೀತ ಮಳೆ, ಭೂಕುಸಿತದ ಭೀತಿಯಿಂದ ‌ಸ್ಥಗಿತ ಮಾಡಲಾಗಿದ್ದು ಅಮರನಾಥ ಯಾತ್ರೆ ಒಂದು ದಿನದ ಬಳಿಕ ಮತ್ತೆ ಪ್ರಾರಂಭವಾಗಿದೆ. ಜಮ್ಮುವಿನಿಂದ ಕಾಶ್ಮೀರದ ಕಡೆಗೆ ಶುಕ್ರವಾರ 7,908 ಯಾತ್ರಿಕರ ತಂಡ ತೆರಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಜುಲೈ 3 ರಂದು ಆರಂಭವಾಗಿದ್ದು ಅಮರನಾಥ ಯಾತ್ರೆ 2.52 ಲಕ್ಷಕ್ಕೂ ಹೆಚ್ಚು ಜನರು ಇದರಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದಿನ ಯಾತ್ರಿಕರ ಮೊದಲ‌ ತಂಡದ 2,879 ಯಾತ್ರಿಕರು 92 ವಾಹನಗಳ ಮೂಲಕ ಬೆಳಗ್ಗೆ 3.30 ರ ವೇಳೆಗೆ ಪ್ರಯಾಣ

ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ Read More »

ಮಳೆ ಮುನ್ಸೂಚನೆ: ಅಮರನಾಥ ಯಾತ್ರೆ ತಾತ್ಕಾಲಿಕ ಮುಂದೂಡಿಕೆ

ಶ್ರೀನಗರ: ಕಣಿವೊ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ‌ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ. ಗಂಡೇರ್ಬಲ್ ಜಿಲ್ಲೆಯ ಬಲ್ಟಾನ್ ಮಾರ್ಗದಲ್ಲಿ ಬುಧವಾರ ಸಂಭವಿಸಿದ ಭೂ ಕುಸಿತದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಅಮರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದು, ಅಮರನಾಥ ಯಾತ್ರಿಗಳ ‌ಸುರಕ್ಷತೆಯ ದೃಷ್ಟಿಯಿಂದ ವಿಶೇಷ ಗಮನ

ಮಳೆ ಮುನ್ಸೂಚನೆ: ಅಮರನಾಥ ಯಾತ್ರೆ ತಾತ್ಕಾಲಿಕ ಮುಂದೂಡಿಕೆ Read More »

ಸರ್ಕಾರದ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಸರ್ಕಾರ ಒಪ್ಪಿಸಿದ್ದು, ಇದಕ್ಕೆ ತಡೆಯಾಜ್ಞೆ ‌ನೀಡಲು ಹೈಕೋರ್ಟ್ ನಿರಾಕರಿಸಿದೆ. ದೇವಸ್ಥಾನದ ಆಡಳಿತದಲ್ಲಿ ಅವ್ಯವಹಾರ ನಡೆದಿರುವುದು ಸಾಕ್ಷಿ ಸಮೇತ ಬಯಲಾಗಿದ್ದು, ಈ‌ ನಿಟ್ಟಿನಲ್ಲಿ‌ ಸರ್ಕಾರ ಇಂತಹ ಕ್ರಮ ಕೈಗೊಂಡಿತ್ತು. ಈ ಆದೇಶವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಲು ದೇಗುಲದ ಟ್ರಸ್ಟಿ ಹಾಗೂ ಸಂಚಾಲಕ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ‌‌ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಸರ್ಕಾರ

ಸರ್ಕಾರದ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ Read More »

ಆರೇಲ್ತಡಿ ದೈವಸ್ಥಾನಕ್ಕೆ  ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ | ಜೀವನದಲ್ಲಿ ಎಲ್ಲಾ ಏಳು ಬೀಳುಗಳು ಕೂಡ ದೇವರ ಇಚ್ಛೆಯಂತೆ ನಡೆಯುತ್ತದೆ : ಜನಾರ್ದನ ರೆಡ್ಡಿ

ಸವಣೂರು : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ದ.ಕ. ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಬುಧವಾರ ಭೇಟಿ ನೀಡಿದರು. ಆರೇಲ್ತಡಿ ಇರ್ವೆ‌ರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನಕ್ಕೆ ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿ ಅಂದು ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಆಗಮಿಸಲು ಸಾಧ್ಯವಾಗಿರಲಿಲ್ಲ. ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ

ಆರೇಲ್ತಡಿ ದೈವಸ್ಥಾನಕ್ಕೆ  ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ | ಜೀವನದಲ್ಲಿ ಎಲ್ಲಾ ಏಳು ಬೀಳುಗಳು ಕೂಡ ದೇವರ ಇಚ್ಛೆಯಂತೆ ನಡೆಯುತ್ತದೆ : ಜನಾರ್ದನ ರೆಡ್ಡಿ Read More »

error: Content is protected !!
Scroll to Top