ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ
ಸವಣೂರು: ಕಡಬ ತಾಲೂಕಿನ ಸವಣೂರು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ದಿನವಾದ ಬುಧವಾರ ಸಂಕ್ರಾಂತಿ ತಂಬಿಲ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಗಾಲಿ ಜನಾರ್ದನ ರೆಡ್ಡಿ ಅವರು 2023-24ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸವಣೂರು ಆರೇಲ್ತಡಿಯಲ್ಲಿ ನಿರ್ಮಾಣಗೊಂಡ ಕೆಡೆಂಜೊಡಿತ್ತಾಯಿ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಬಳಿಕ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಂಕ್ರಾಂತಿ […]










