ಧಾರ್ಮಿಕ

ದಸರಾ ಏರ್ ಶೋ‌ಗೆ ರಕ್ಷಣಾ ಸಚಿವರಿಂದ ಹಸಿರು ನಿಶಾನೆ

ಬೆಂಗಳೂರು: ನಾಡ ಹಬ್ಬ ದಸರಾದಲ್ಲಿ ಏರ್ ಶೋ‌ ನಡೆಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಸಕಾರಾತ್ಮಕವಾಗಿ ‌ಸ್ವಂದಿಸಿದ್ದು, ಒಪ್ಪಿಗೆ ಸೂಚಿಸಿದ್ದಾರೆ. ಸಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ರಕ್ಷಣಾ ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ರಕ್ಷಣಾ ವಿಚಾರಗಳಿಗೆ ಸಂಬಂಧಿಸಿದ ಹಾಗೆ ಚರ್ಚೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ವಿಶ್ವವಿಖ್ಯಾತ ದಸರಾ ಹಬ್ಬದ ಸಂದರ್ಭದಲ್ಲಿ ಏರ್ ಶೋ ನಡೆಸುವುದಕ್ಕೆ ಅನುಮತಿ ಕೋರಲಾಗಿದ್ದು, ಇದಕ್ಕೆ ರಕ್ಷಣಾ […]

ದಸರಾ ಏರ್ ಶೋ‌ಗೆ ರಕ್ಷಣಾ ಸಚಿವರಿಂದ ಹಸಿರು ನಿಶಾನೆ Read More »

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರು : ಶಾಸಕ ಅಶೋಕ್ ರೈ

ಪುತ್ತೂರು: ವಿಧಾನಸಭಾ ಕ್ಷೆತ್ರದ ಪ್ರಸಿದ್ದ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಕೋಟಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಗೆಜ್ಜೆಗಿರಿ ಎಂಬ ಪವಿತ್ರ ಹಾಗೂ ಪ್ರಸಿದ್ಧ ಕ್ಷೇತ್ರವನ್ನು ಅಭಿವೃದ್ದಿ ಮಾಡುವ ವಿಚಾರದಲ್ಲಿ ನಾನು ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ ಸರಕಾರದ ಗಮನ ಸೆಳೆದಿದ್ದೆ. ಪ್ರವಾಸೋಧ್ಯಮ ಇಲಾಖೆ ಹಾಗೂ ಸಚಿವರ ಜೊತೆಯೂ ಮಾತುಕತೆ ನಡೆಸಿದ್ದೇನೆ. ಕ್ಷೇತ್ರವನ್ನು ಪ್ರವಾಸೋಧ್ಯಮ ಇಲಾಖೆಯಲ್ಲಿ ಸೇರ್ಪಡೆ ಮಾಡುವ

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರು : ಶಾಸಕ ಅಶೋಕ್ ರೈ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜು.6ರಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ ನಡೆಯಿತು. ಈ ಸಂದರ್ಭದಲ್ಲಿ 250ಕ್ಕೂ ಹೆಚ್ಚು ಭಕ್ತರು ತಪ್ತ ಮುದ್ರಾಧಾರಣೆ ಹಾಕಿಸಿಕೊಂಡರು. ಮುದ್ರಾಧಾರಣೆಯ ಬಗ್ಗೆ ಮಾತನಾಡಿದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ,  ವೃತ್ತಾಸುರನು ದೇವತೆಗಳನ್ನು ಸೋಲಿಸಿದಾಗ ಒಂದಾದ ದೇವತೆಯರು ಶ್ರೀ ಮಹಾವಿಷ್ಣುವಿಗೆ ಶರಣಾಗಿ ಅಸುರನ ಸಂಹಾರಕ್ಕೆ ಹೋಗುತ್ತಾರೆ. ಆಗ ಶ್ರೀ ಮಹಾವಿಷ್ಣು ದೇವತೆಗಳಿಗೆ ವೈಷ್ಣವ ಚಿಹ್ನೆಯಾದ ಶಂಖ, ಚಕ್ರ

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ Read More »

15ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಯಾತ್ರೆ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್‌ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಉತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ರೈ ಆನಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ

15ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಯಾತ್ರೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಗ್ರಂಥಾಲಯಕ್ಕೆ ಸದಸ್ಯರಿಂದ  ಸಂಗ್ರಹಿಸಿದ ಪುಸ್ತಕಗಳನ್ನು ಅರ್ಪಿಸುವ ಕಾರ್ಯಕ್ರಮವು ದೇವಳದ ಆಡಳಿತ ಕಚೇರಿಯಲ್ಲಿ ಜರಗಿತು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಪುಸ್ತಕಗಳನ್ನು ಸ್ವೀಕರಿಸಿ ಹಿರಿಯರ ಸೇವಾ ಪ್ರತಿಷ್ಠಾನವು ಜ್ಞಾನಪ್ರಸಾರದ ಕಾರ್ಯದಲ್ಲಿ ಕೈಜೋಡಿಸಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ಪುತ್ತೂರು ಘಟಕದ ಕೇಂದ್ರ ಸಮಿತಿ ಪ್ರತಿನಿಧಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಹಾಬಲ ರೈ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ Read More »

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ವೇದ ಲಕ್ಷ್ಮೀಕಾಂತ್, ಸಂಚಾಲಕರಾಗಿ ಅರುಣ್ ಕುಮಾರ್ ರೈ ಆನಾಜೆ, ಕಾರ್ಯದರ್ಶಿಯಾಗಿ ಗಣೇಶ್ ಕಾಮತ್ ಮತ್ತು ಕೋಶಾಧಿಕಾರಿಯಾಗಿ ಕೇಶವ್ ಪ್ರಸಾದ್ ಬಿ.ವಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸುಹಾಸ್ ಮರಿಕೆ, ಡಾ.ಅನನ್ಯ ಲಕ್ಷ್ಮಿ,ಶೇಖರ ಬ್ರಹ್ಮನಗರ,

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ Read More »

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ

ನವದೆಹಲಿ: ಕೇಸರಿ ಸಂತ ಸ್ವಾಮಿ ವಿವೇಕಾನಂದ ಅವರ 123 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನಗಳನ್ನು ‌ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರಿಗೆ ನಾನು ನಮನಗಳನ್ನು ‌ಸಲ್ಲಿಸುತ್ತಿದ್ದೇನೆ. ಈ ಸಮಾಜಕ್ಕಾಗಿ ಅವರ ಆಲೋಚನೆಗಳು, ದೃಷ್ಟಿಕೋನಗಳು ನಮಗೆ ಮಾರ್ಗದರ್ಶಕವಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದವರು. ಸೇವೆ ಮತ್ತು ಕರುಣೆಯ ಹಾದಿಯಲ್ಲಿ ಹೆಜ್ಜೆ

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ Read More »

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್

ಧಾರ್ಮಿಕ ಕ್ಷೇತ್ರಗಳಿಗೆ ಧಾರ್ಮಿಕ ಭಾವನೆಯಿಂದಲೇ ಭೇಟಿ ನೀಡಬೇಕು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಮಾಧ್ಯಮಗಳ‌ ಜೊತೆಗೆ ಮಾತನಾಡಿದ ಅವರು, ಜನರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅವರ ಮನಸ್ಸು ಸಹ ಧಾರ್ಮಿಕ ಭಾವನೆಯಿಂದಲೇ ಇರುವಂತಾಗಬೇಕು ಎಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧಿಸಬೇಕು. ಈ ಕ್ರಮ ತಿರುಪತಿಯಲ್ಲಿ ಈಗಾಗಲೇ ಇದೆ. ಇದನ್ನು ಚಾಮುಂಡಿ ಬೆಟ್ಟದಲ್ಲೂ ಅಳವಡಿಸಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್ Read More »

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ

ಎಣ್ಮೂರು: ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿಯನ್ನು ಬುಧವಾರ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್‍ ಆರೆಂಬಿ ಆಯ್ಕೆಯಾದರು. ಉಳಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಭಜನಾ ಮಂದಿರ, ಆಚರಣಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ Read More »

ಅಮರನಾಥ ಯಾತ್ರಿಕರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ

ಶ್ರೀನಗರ: ಅಮರನಾಥ ಯಾತ್ರೆ ಜುಲೈ 3 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪೊಲೀಸ್ ಬಿಗಿ ಭದ್ರತೆ ಆಯೋಜಿಸಲಾಗಿದ್ದು, ತಪಾಸಣೆಗಾಗಿ ಚೆಕ್ ಪೋಸ್ಟ್ ‌ಗಳನ್ನು ನಿರ್ಮಾಣ ಮಾಡಲಾಗಿದೆ. ಕೆಲ ಸಮಯದ ಹಿಂದೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರ ದಾಳಿಯ ಬಳಿಕ ಅಮರಾನಾಥ ಯಾತ್ರಿಕರ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿದೆ. ಭಕ್ತರಿಗೆ ಸುಗಮ ಯಾತ್ರೆಯ ಅನುಕೂಲ ಒದಗಿಸಿ ಕೊಡಲು ಅರೆಸೇನಾ ಪಡೆಗಳು ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿರುವುದಾಗಿದೆ. 24*7 ರೀತಿಯಲ್ಲಿ ಯಾತ್ರಿಕರಿಗೆ ರಕ್ಷಣೆ ಒಗದಗಿಸಲು

ಅಮರನಾಥ ಯಾತ್ರಿಕರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ Read More »

error: Content is protected !!
Scroll to Top