ಧರ್ಮ ಶಿಕ್ಷಣ ಉದ್ಘಾಟನೆಗೆ ಸಹಸ್ರಾರು ಮಂದಿ ಭಾಗಿಯಾಗಬೇಕು : ಬಾಲಕೃಷ್ಣ ಬೋರ್ಕರ್ | ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ
ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಇಡಿಯ ದೇಶದಲ್ಲೇ ನಡೆಸಲು ಉದ್ದೇಶಿಸಲಾಗಿರುವ ಹಿಂದೂ ಧರ್ಮ ಶಿಕ್ಷಣ ವ್ಯವಸ್ಥೆ ಮೊದಲು ಪುತ್ತೂರಿನಲ್ಲಿ ಜಾರಿಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಇಂತಹ ಮಹೋನ್ನತ ಹಾಗೂ ಐತಿಹಾಸಿಕ ಘಟನೆಗೆ ಪುತ್ತೂರಿನ ನಾಗರಿಕ ಸಮಾಜ ಸಾಕ್ಷಿಯಾಗುತ್ತಿದೆ ಎಂದು ತಾಲೂಕು ಧರ್ಮ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ನಗರದ ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ತಾಲೂಕು ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. […]